ನೆರೆ ನಿರ್ವಹಣೆ ಮಾಡಬೇಕಾದ ಸರ್ಕಾರ ಅಧಿಕಾರಕ್ಕಾಗಿ ಕಿತ್ತಾಡುತ್ತಿದೆ : ದಿನೇಶ್ ಗುಂಡೂರಾವ್
Team Udayavani, Jul 23, 2021, 7:44 PM IST
ಬೆಂಗಳೂರು: ಮುಖ್ಯಮಂತ್ರಿ ಬದಲಾವಣೆ ವಿಚಾರದಲ್ಲಿ ಹೈಕಮಾಂಡ್ ಕೋತಿ ಕುಣಿಸುವ ಆಡವಾಡುತ್ತಿದ್ದಾರೆ, ರಾಜ್ಯದ ಬಿಜೆಪಿ ನಾಯಕರು ಕೋತಿಗಳಂತೆ ಕುಣಿಯುತ್ತಿದ್ದಾರೆ ಎಂದು ಮಾಜಿ ಸಚಿವ ದಿನೇಶ್ ಗುಂಡೂರಾವ್ ಟೀಕಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ರಾಜ್ಯ ನೆರೆ ಸಂಕಷ್ಟದಲ್ಲಿದೆ, ಬಹುತೇಕ ಕಡೆ ಮಹಾಮಳೆಯಿಂದ ಜನ ಜಾನುವಾರುಗಳು ತೊಂದರೆಗೊಳಗಾಗಿವೆ. ಈ ಸಂದರ್ಭದಲ್ಲಿ ನೆರೆ ನಿರ್ವಹಣೆ ಮಾಡಬೇಕಾದ ಸರ್ಕಾರ ಜನಹಿತ ಮರೆತು ಅಧಿಕಾರಕ್ಕಾಗಿ ಕಿತ್ತಾಡುತ್ತಿದೆ ಎಂದು ದೂರಿದ್ದಾರೆ.
ನೆರೆಯಂತಹ ಪ್ರಾಕೃತಿಕ ಭೀಕರ ಸನ್ನಿವೇಶದಲ್ಲಿ ಸರ್ಕಾರ ಜನರ ಬೆನ್ನಿಗೆ ನಿಲ್ಲಬೇಕು. ಆದರೆ, ಬಿಜೆಪಿ ಸರ್ಕಾರದಲ್ಲಿರುವವರು ಸಂಕಷ್ಟದಲ್ಲಿರುವ ಜನರ ಬಗ್ಗೆ ಸೊಲ್ಲು ಎತ್ತಿತ್ತಿಲ್ಲ. ಸರ್ಕಾರದಲ್ಲಿರುವವರಿಗೆ ನೆರೆ ನಿರ್ವಹಣೆಗಿಂತ ಸಿಎಂ ಪಟ್ಟಗಳಿಸುವುದು ಹೇಗೆ ಎಂಬುದೇ ಚಿಂತೆಯಾಗಿದೆ. ಇಂತಹ ಹೊಣೆಗೇಡಿ ಸರ್ಕಾರ ಇರುವುದು ಯಾವ ಪುರುಷಾರ್ಥಕ್ಕೆ ಎಂದು ಪ್ರಶ್ನಿಸಿದ್ದಾರೆ.
ಇದನ್ನೂ ಓದಿ :ಅಮೇಜಾನ್, ಫ್ಲಿಪ್ಕಾರ್ಟ್ ಮೇಲ್ಮನವಿ ವಜಾಗೊಳಿಸಿದ ಹೈಕೋರ್ಟ್