ತಮಿಳುಚಿತ್ರರಂಗದ ಖ್ಯಾತ ನಿರ್ದೇಶಕ, ಛಾಯಾಗ್ರಾಹಕ ಕೆವಿ ಆನಂದ್ ಇನ್ನಿಲ್ಲ
ಪಿಸಿ ಶ್ರೀರಾಮ್ ಅವರನ್ನು ಭೇಟಿಯಾಗಿ ತಮ್ಮ ಆಸೆಯನ್ನು ಹೇಳಿಕೊಂಡಿದ್ದರು
Team Udayavani, Apr 30, 2021, 9:10 AM IST
ಚೆನ್ನೈ:ತಮಿಳು ಚಿತ್ರರಂಗದ ಖ್ಯಾತ ನಿರ್ದೇಶಕ, ಕೋ, ಅಯಾನ್, ಮಾಟ್ರಾನ್, ಕಪ್ಪಾನ್ ನಂತಹ ಹಿಟ್ ಸಿನಿಮಾ ನಿರ್ದೇಶಿಸಿದ್ದ ಕೆವಿ ಆನಂದ್ (54ವರ್ಷ) ಶುಕ್ರವಾರ ನಸುಕಿನ ವೇಳೆ ಹೃದಯ ಸ್ತಂಭನದಿಂದ ವಿಧಿವಶರಾಗಿರುವುದಾಗಿ ಮೂಲಗಳು ತಿಳಿಸಿವೆ.
ಇದನ್ನೂ ಓದಿ:ಮಹಾರಾಷ್ಟ್ರ: ಜುಲೈ-ಆಗಸ್ಟ್ ನಲ್ಲಿ ಕೋವಿಡ್ ಮೂರನೇ ಅಲೆ: ಸಚಿವ ಟೋಪೆ
ಸಿನಿಮಾ ಪ್ರಚಾರಕ ರಿಯಾಝ್ ಕೆ ಅಹ್ಮದ್ ಈ ಕುರಿತು ಟ್ವೀಟ್ ಮಾಡಿದ್ದು, ಲೆಜೆಂಡರಿ ಸಿನಿಮಾ ನಿರ್ದೇಶಕ ಕೆವಿ ಆನಂದ್ ನಸುಕಿನ ವೇಳೆ ನಿಧನರಾಗಿದ್ದು, ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಸಂತಾಪ ಸೂಚಿಸಿದ್ದಾರೆ. ಕೆವಿ ಆನಂದ್ ದಿಢೀರ್ ನಿಧನದ ಸುದ್ದಿಗೆ ತಮಿಳುಚಿತ್ರರಂಗ ಆಘಾತ ವ್ಯಕ್ತಪಡಿಸಿದ್ದು, ಹಿತೈಷಿಗಳು, ಅಭಿಮಾನಿಗಳು, ತಂತ್ರಜ್ಞರು, ನಟರು ಸಂತಾಪ ಸೂಚಿಸಿದ್ದಾರೆ.
ಕೆವಿ ಆನಂದ್ ಅವರು ಫ್ರೀಲ್ಯಾನ್ಸ್ ಫೋಟೋಜರ್ನಲಿಸ್ಟ್ ಆಗಿ ವೃತ್ತಿಜೀವನ ಆರಂಭಿಸಿದ್ದರು. ತಮಿಳಿನ ಹಲವು ಪ್ರತಿಷ್ಠಿತ ಮ್ಯಾಗಜೀನ್ಸ್ ಗಳಿಗೆ ಫೋಟೋ ಒದಗಿಸುತ್ತಿದ್ದರು. 1990ರ ದಶಕದಲ್ಲಿ ಸಿನಿಮಾ ಛಾಯಾಗ್ರಾಹಕ ಪಿಸಿ ಶ್ರೀರಾಮ್ ಅವರನ್ನು ಭೇಟಿಯಾಗಿ ತಮ್ಮ ಆಸೆಯನ್ನು ಹೇಳಿಕೊಂಡಿದ್ದರು, ನಂತರ ಶ್ರೀರಾಮ್ ಅವರ ಸಹಾಯಕರಾಗಿ ಕಾರ್ಯನಿರ್ವಹಿಸಿದ್ದರು.
ಗೋಪುರ ವಾಸಲಿಲೆ, ಅಮರಾನ್, ದೇವರ್ ಮಗನ್ ಮತ್ತು ತಿರುಡಾ ತಿರುಡಾದಂತಹ ಸಿನಿಮಾದಲ್ಲಿ ಕೆವಿ ಆನಂದ್ ಸಹಾಯಕ ಛಾಯಾಗ್ರಾಹಕರಾಗಿ ಕೆಲಸ ಮಾಡಿದ್ದರು. 1996ರಲ್ಲಿ ಕೆವಿ ತಮ್ಮ ಮೊದಲ ಸಿನಿಮಾ ಕಾದಲ್ ದೇಶಂ ನಿರ್ದೇಶಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rap song: ವೋಟು ನಮ್ಮ ಪವರ್ ರ್ಯಾಪ್ ಸಾಂಗ್ ಬಿಡುಗಡೆ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Deepfake video ವಿರುದ್ಧ ನಟ ರಣ್ವೀರ್ ಸಿಂಗ್ ದೂರು
Ranveer Singh: ಮತಯಾಚನೆಯ ಡೀಪ್ ಫೇಕ್ ವಿಡಿಯೋ ವೈರಲ್; FIR ದಾಖಲಿಸಿದ ನಟ ರಣ್ವೀರ್
Big B: ʼಕಲ್ಕಿʼಗಾಗಿ ʼಅಶ್ವತ್ಥಾಮʼನ ಅವತಾರ ತಾಳಿದ ಬಿಗ್ ಬಿ; ಗಮನ ಸೆಳೆದ ಪಾತ್ರದ ಝಲಕ್
MUST WATCH
ಹೊಸ ಸೇರ್ಪಡೆ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ