ಎಂಇಎಸ್ ಬ್ಯಾನ್ ಮಾಡುವ ಕುರಿತು ಚರ್ಚೆ ನಡೆಯುತ್ತಿದೆ : ಸಚಿವ ಪ್ರಭು ಚೌಹಾಣ್
ಕರ್ನಾಟಕ ನಮ್ಮ ತಾಯಿ, ತಾಯಿಯ ರಕ್ಷಣೆ ಎಲ್ಲ ಮಕ್ಕಳ ಜವಾಬ್ದಾರಿ
Team Udayavani, Dec 19, 2021, 12:28 PM IST
ಹುಬ್ಬಳ್ಳಿ: ಬೆಳಗಾವಿಯಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ಸರ್ಕಾರ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಿದ್ದು, ಎಂಇಎಸ್ ಬ್ಯಾನ್ ಮಾಡುವ ಕುರಿತು ಚರ್ಚೆ ನಡೆಯುತ್ತಿದೆ ಎಂದು ಪಶು ಸಂಗೋಪನಾ ಸಚಿವ ಪ್ರಭು ಚೌಹಾಣ್ ಭಾನುವಾರ ಹೇಳಿಕೆ ನೀಡಿದ್ದಾರೆ.
ನಗರದ ಸಿದ್ದಾರೂಢ ಮಠದ ಉಭಯ ಶ್ರೀಗಳ ಗದ್ದುಗೆಗೆ ಪೂಜೆ ಸಲ್ಲಿಸಿದರು. ನಂತರ ಮಠದ ಗೋ ಶಾಲೆಗೆ ಭೇಟಿ ನೀಡಿ ಪೂಜೆ ನಡೆಸಿ ನಂತರ ಮಾತನಾಡಿದ ಅವರು, ”ಕರ್ನಾಟಕ ನಮ್ಮ ತಾಯಿ, ತಾಯಿಯ ರಕ್ಷಣೆ ಎಲ್ಲ ಮಕ್ಕಳ ಜವಾಬ್ದಾರಿ, ಗಡಿನಾಡಿನಲ್ಲಿ ಕನ್ನಡ ಉಳಿಸುವ ಕೆಲಸ ಮಾಡಲಾಗುತ್ತಿದೆ. ಆದರೆ ಎಂ.ಇ.ಎಸ್ ಪುಂಡಾಟ ಹೆಚ್ಚಾಗುತ್ತಿದೆ. ಈಗಾಗಲೇ ಸದನದಲ್ಲಿ ಈ ವಿಷಯ ಚರ್ಚೆಯಾಗಿದೆ. ಅವರ ಆಟಕ್ಕೆ ಸರ್ಕಾರ ಬ್ರೇಕ್ ಹಾಕಲಿದೆ. ಈಗಾಗಲೇ ಎಂ.ಇ.ಎಸ್ ಬ್ಯಾನ್ ಮಾಡುವ ವಿಚಾರ ಚರ್ಚೆ ನಡೆಯುತ್ತಿದೆ” ಎಂದರು.
ಇದನ್ನೂ ಓದಿ : ಬೆಳಗಾವಿಯಲ್ಲಿ ಸಿಡಿದೆದ್ದ ಕನ್ನಡಿಗರು: ಪಾದಯಾತ್ರೆಗೆ ತಡೆ, ಪ್ರತಿಭಟನಾನಿರತರು ವಶಕ್ಕೆ
ಗೋಹತ್ಯೆ ನಿಷೇಧ ಕಾಯ್ದೆಯನ್ನು ಇನ್ನಷ್ಟು ಬಿಗಿ
”ರಾಜ್ಯದಲ್ಲಿ ಪ್ರತಿ ಜಿಲ್ಲೆಯಲ್ಲಿಯೂ ಗೋಮಾಳ ಜಾಗದಲ್ಲಿ ಗೋಶಾಲೆಗಳನ್ನು ತೆರೆಯಲು ಸೂಚಿಸಲಾಗಿದೆ. ಈ ನಿಟ್ಟಿನಲ್ಲಿ ಗೋಮಾಳ ಜಾಗಗಳನ್ನೂ ಸಹ ನಿಗಧಿಪಡಿಸಲಾಗಿದೆ. ಗೋ ಹತ್ಯೆ ನಿಷೇಧ ಕಾಯ್ದೆ ಜಾರಿಯಾದ ನಂತರ ಸಾವಿರಾರು ಗೋವುಗಳನ್ನು ರಕ್ಷಣೆ ಮಾಡಲಾಗಿದೆ. ಕಸಾಯಿಖಾನೆಯಲ್ಲಿ ಗೋವುಗಳ ಹತ್ಯೆ ವಿಚಾರದಲ್ಲಿ ಅನೇಕ ಪಿಐಎಲ್ ಹೋಗಿದ್ದಾರೆ. ಹಾಗಾಗಿ ನಮ್ಮ ಪರವಾಗಿ ತೀರ್ಪು ಬರುವ ನಿರೀಕ್ಷೆ ಇದೆ. ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆಯನ್ನು ಇನ್ನಷ್ಟು ಬಿಗಿಗೊಳಿಸಲಾಗುವುದು” ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ
CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್
Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು
Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ
Lok Sabha Election; ಕೇಜ್ರಿವಾಲ್ ಸೆರೆ ಆಪ್ಗೆ ವರವೇ? ಶಾಪವೇ?