ಶಾಸಕರ ಸಭೆಯಲ್ಲಿ ಸಿಎಂ ವಿರುದ್ಧ ಅಸಮಾಧಾನ ಸ್ಫೋಟ: ಯತ್ನಾಳ್‌ಗೆ ಸಿಎಂ ಪಾಠ


Team Udayavani, Jan 5, 2021, 9:40 AM IST

ಶಾಸಕರ ಸಭೆಯಲ್ಲಿ ಸಿಎಂ ವಿರುದ್ಧ ಅಸಮಾಧಾನ ಸ್ಫೋಟ: ಯತ್ನಾಳ್‌ಗೆ ಸಿಎಂ ಪಾಠ

ಬೆಂಗಳೂರು: ಬಜೆಟ್‌ ಮಂಡನೆಗೂ ಮುನ್ನ ಶಾಸಕರ ಕ್ಷೇತ್ರಗಳಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾರ್ಯಗಳ ಕುರಿತು ಚರ್ಚಿಸಲು ಕರೆದಿರುವ ವಿಭಾಗವಾರು ಶಾಸಕರ ಸಭೆಯಲ್ಲಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ವಿರುದ್ಧವೇ ಕೆಲವು ಶಾಸಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಆದರೆ, ಶಾಸಕರ ಆಕ್ಷೇಪದ ನಡುವೆಯೇ ಸಿಎಂ ಬಿಎಸ್‌ವೈ ಆಡಳಿತಕ್ಕೆ ಚುರುಕು ನೀಡಿ ಅಭಿವೃದ್ಧಿ ವೇಗ ಹೆಚ್ಚಿಸುವ ಭರವಸೆ ನೀಡಿದ್ದಾರೆ.

ಸೋಮವಾರ ಬಿಎಸ್‌ವೈ ಕಲ್ಯಾಣ ಕರ್ನಾಟಕ ಹಾಗೂ ಮುಂಬೈ ಕರ್ನಾಟಕ, ಮಧ್ಯ ಕರ್ನಾಟಕ ಮತ್ತು ಕರಾವಳಿ ಭಾಗದ ಶಾಸಕರ ಸಭೆ ನಡೆಸಿದ್ದರು. ಈ ವೇಳೆ ಯಡಿಯೂರಪ್ಪ ಅವರು ನಿರ್ಲಕ್ಷ್ಯ ಧೋರಣೆ ಅನುಸರಿಸುತ್ತಿದ್ದಾರೆ ಮತ್ತು ಆಡಳಿತದಲ್ಲಿ ಇತರರ ಹಸ್ತಕ್ಷೇಪ ಹೆಚ್ಚಾಗುತ್ತಿದೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌, ಉಮೇಶ್‌ ಕತ್ತಿ, ಕರುಣಾಕರ ರೆಡ್ಡಿ ಸೇರಿದಂತೆ ಕೆಲವು ಹಿರಿಯ ಶಾಸಕರು ಅಸಮಾಧಾನ ಹೊರ ಹಾಕಿದ್ದಾರೆ ಎಂದು ತಿಳಿದುಬಂದಿದೆ. ಆದರೆ, ಕರಾವಳಿ ಭಾಗದ ಶಾಸಕರು ನಾವು ಸರ್ಕಾರಕ್ಕೆ ಮುಜುಗರ ತರುವುದಿಲ್ಲ, ನಮ್ಮನ್ನು ನಿರ್ಲಕ್ಷಿಸಬೇಡಿ ಎಂದು ಸಿಎಂಗೆ ಮನವಿ ಮಾಡಿದ್ದಾರೆ ಎನ್ನಲಾಗಿದೆ.

ಯತ್ನಾಳ್‌ ಕೆಂಡ: ಸಭೆಯಲ್ಲಿ ಬಸನಗೌಡ ಪಾಟೀಲ್‌ ಯತ್ನಾಳ್‌ ನೇರವಾಗಿಯೇ ಸಿಎಂ ಕುಟುಂಬ ಸದಸ್ಯರ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ ಎನ್ನಲಾಗಿದೆ. “ನಾನು ಶಾಸಕನಿದ್ದೇನೆ. ನನ್ನ ಸಮಸ್ಯೆ ಹೇಳಿಕೊಳ್ಳಬೇಕು. ನಮ್ಮ ಕ್ಷೇತ್ರಗಳಿಗೆ ತುರ್ತಾಗಿ ಅನುದಾನ ಬಿಡುಗಡೆ ಮಾಡಿ ಎಂದು ಸ್ವತಃ ನೀವೇ ಬರೆದುಕೊಟ್ಟರೂ, ಅನುದಾನ ಬಿಡುಗಡೆಯಾಗುತ್ತಿಲ್ಲ. ಆಡಳಿತ ಪಕ್ಷದ ಶಾಸಕರಾಗಿ ನಾವು ಅನುದಾನಕ್ಕಾಗಿ ಅಲೆದಾಡುವಂಥ ಸ್ಥಿತಿ ನಿರ್ಮಾಣವಾಗಿದೆ. ಹೀಗಾದರೆ, ನಾವು ಜನರ ಎದುರು ನಿಲ್ಲುವುದಾದರೂ ಹೇಗೆ?,’ ಎಂದು ಪ್ರಶ್ನಿಸಿದ್ದಾರೆ ಎನ್ನಲಾಗಿದೆ.

ನಾವು ಶಾಸಕರಾಗಿ ನಿಮ್ಮ ಬಳಿಮಾತನಾಡುತ್ತೇವೆ. ಬೇರೆಯವರ ಬಳಿ ಯಾಕೆ ಹೋಗಬೇಕು. ಎಲ್ಲದಕ್ಕೂ ಅವರ ಮಾತೇ ಅಂತಿಮವಾದರೆ ಪಕ್ಷಕ್ಕಾಗಿ ದುಡಿದ ಕಾರ್ಯಕರ್ತರ ಪಾಡೇನು? ನೀವು ಹಿರಿಯರಾಗಿ ಎಲ್ಲದಕ್ಕೂ ತಲೆದೂಗಿದರೆ ಹೇಗೆ ಎಂದು ಯತ್ನಾಳ್‌ ಪ್ರಶ್ನಿಸಿದ್ದಾರೆ ಎಂದು ತಿಳಿದು ಬಂದಿದೆ. ಯತ್ನಾಳ್‌ ಮಾತುಗಳಿಗೆ ಉಮೇಶ್‌ ಕತ್ತಿ ಕೂಡ ಬೆಂಬಲ ವ್ಯಕ್ತಪಡಿಸಿದ್ದಾರೆ. ಈ ಸಂದರ್ಭದಲ್ಲಿ ಸಿಎಂ ಯಡಿಯೂರಪ್ಪ ಮಧ್ಯಪ್ರವೇಶಿಸಿ, ಬೇರೆಯವರ ಹಸ್ತಕ್ಷೇಪ ಇಲ್ಲದಂತೆ ಮುಂದಿನ ದಿನಗಳಲ್ಲಿ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ ಎಂದು ಹೇಳಲಾಗಿದೆ.

ಇದನ್ನೂ ಓದಿ:ಒನ್‌ ಡೇ ಕ್ರಿಕೆಟ್‌ ಗೆ 50ರ ಸಂಭ್ರಮ: ಉದಯವೇ ವಿಸ್ಮಯ, ಅಚ್ಚರಿ, ಅನಿರೀಕ್ಷಿತ, ರೋಮಾಂಚನ!

ರೆಡ್ಡಿ ಆಕ್ಷೇಪ: ಬೆಳಗ್ಗೆ ಕಲ್ಯಾಣ ಕರ್ನಾಟಕ ಭಾಗದ ಶಾಸಕರ ಪ್ರತ್ಯೇಕ ಸಭೆ ನಡೆಸಿದ್ದು, ಕ್ಷೇತ್ರಗಳಿಗೆ ಅನುದಾನ ಬಿಡುಗಡೆಯಾಗದಿರುವ ಬಗ್ಗೆ ಶಾಸಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದು ತಿಳಿದು ಬಂದಿದೆ. ಇನ್ನು ಸ್ಥಳೀಯವಾಗಿ ನಾಮ ನಿರ್ದೇಶನ ಮಾಡುವಲ್ಲಿ ಜೆಡಿಎಸ್‌ ಹಾಗೂ ಕಾಂಗ್ರೆಸ್‌ನಿಂದ ವಲಸೆ ಬಂದವರಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ ಎಂದು ಶಾಸಕ ಕರುಣಾಕರ ರೆಡ್ಡಿ ಆರೋಪಿಸಿದ್ದಾರೆ ಎಂದು ತಿಳಿದು ಬಂದಿದೆ.

ರೇಣುಕಾಚಾರ್ಯ ವರ್ಸಸ್‌ ಯತ್ನಾಳ್‌: ಸಭೆಯಲ್ಲಿ ಬಸನಗೌಡ ಪಾಟೀಲ್‌ ಯತ್ನಾಳ್‌ ಮತ್ತು ರೇಣುಕಾಚಾರ್ಯ ನಡುವೆ ಜಟಾಪಟಿ ನಡೆದಿದೆ ಎನ್ನಲಾಗಿದೆ. ಬಸನಗೌಡ ಪಾಟೀಲ್‌ ಅವರು ಮಾತನಾಡುವ ವೇಳೆ ರೇಣುಕಾಚಾರ್ಯ ಮಧ್ಯಪ್ರವೇಶಕ್ಕೆ ಯತ್ನಿಸಿದ್ದಾರೆ. ಆಗ, ನಾನು ಮಾತನಾಡುವಾಗ ನೀನು ಮಾತನಾಡಬೇಡ, ನಿನ್ನ ಅಭಿಪ್ರಾಯ ಏನಿದೆ ಅದನ್ನು ನೀನು ಹೇಳು ಎಂದು ಯತ್ನಾಳ್‌ ಹೇಳಿದ್ದಾರೆ ಎಂದು ತಿಳಿದು ಬಂದಿದೆ. ಸಿಎಂ ಬಗ್ಗೆ ಮಾತಾಡುವಾಗ ನೀವು ನೋಡಿಕೊಂಡು ಮಾತಾಡಿ, ಹಗುರವಾಗಿ ಮಾತಾಡುವುದು ಬೇಡ. ಪದೇ ಪದೆ ಅವರ ಕುಟುಂಬ  ದವರ ಹೆಸರು ಯಾಕೆ ಹೇಳುತ್ತೀರಿ. ಇಲ್ಲಿ ಅಭಿವೃದ್ಧಿ ಬಗ್ಗೆ ಅಷ್ಟೇ ಮಾತಾಡಿ. ನಿಮ್ಮದು ಬೇರೆ ಏನಿದ್ದರೂ ಮನೆಗೆ ಹೋಗಿ ಮಾತಾಡಿ ಎಂದು ಯತ್ನಾಳ್‌ಗೆ ರೇಣುಕಾಚಾರ್ಯ ತಿರುಗೇಟು ನೀಡಿದ್ದಾರೆ ಎಂದು ಹೇಳಲಾಗಿದೆ.

ಶಾಸಕರ ಸಂತಸ: ಸಿಎಂ ಬಿಎಸ್‌ವೈ ಶಾಸಕರ ಸಭೆ ಕರೆದಿರುವುದಕ್ಕೆ ಹಲವರು ಸಂತಸ ವ್ಯಕ್ತಪಡಿಸಿದ್ದಾರೆ. ವರ್ಷಾರಂಭದಿಂದಲೂ ಕೊರೊನಾ ಹಿನ್ನೆಲೆ ಕುಡಿಯುವ ನೀರು, ರಸ್ತೆ ಕಾಮಗಾರಿ ಸೇರಿ ಸಣ್ಣ ಪುಟ್ಟ ಯೋಜನೆ ಗಳಿಗೂ ಅನುದಾನವಿಲ್ಲದೆ ಕಷ್ಟವಾಗಿತ್ತು. ಈ ಬಗ್ಗೆ ಸಮಸ್ಯೆ ಹೇಳಿಕೊಳ್ಳಲು ಅವಕಾಶ ಕಲ್ಪಿಸಿರುವುದು ಒಳ್ಳೆಯ ಬೆಳವಣಿಗೆ ಎಂದು ಕೆಲವು ಶಾಸಕರು ಸಂತಸ ವ್ಯಕ್ತಪಡಿಸಿದ್ದಾರೆ. ಕೊರೊನಾ ಸಂಕಷ್ಟದಿಂದ ಆರ್ಥಿಕ ತೊಂದರೆಯುಂಟಾಗಿದೆ. ರಾಜ್ಯದ ಆರ್ಥಿಕ ಪರಿಸ್ಥಿತಿ ಚೇತರಿಸಿಕೊಳ್ಳುತ್ತಿದ್ದು, ಹಣಕಾಸಿನ ಲಭ್ಯತೆ ನೋಡಿಕೊಂಡು ಅನುದಾನ ಬಿಡುಗಡೆ ಮಾಡಲಾಗುವುದು. ಇನ್ನು ಮುಂದೆ ಅಭಿವೃದ್ಧಿ ವೇಗ ಹೆಚ್ಚಿಸಲು ಪ್ರತಿ 3 ತಿಂಗಳಿಗೊಮ್ಮೆ ಶಾಸಕರ ಸಭೆ ಕರೆದು ಚರ್ಚಿಸುವ ಭರವಸೆಯನ್ನು ಶಾಸಕರಿಗೆ ಸಿಎಂ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: ಕೇಂದ್ರ ಶಿಕ್ಷಣ ನೀತಿಯಿಂದ ಪ್ರಾದೇಶಿಕ ಭಾಷೆಗೆ ಬಲ: ಸುರೇಶ್ ಕುಮಾರ್

ಯತ್ನಾಳ್‌ಗೆ ಸಿಎಂ ಪಾಠ

“ನಿಮ್ಮದು ಏನಾದರೂ ಸಮಸ್ಯೆ ಇದ್ದರೆ ನೇರವಾಗಿ ನನ್ನ ಬಳಿಯೇ ಬಂದು ಮಾತಾಡಿ, ಕಾವೇರಿ, ಕೃಷ್ಣಾ ಪ್ರವೇಶಕ್ಕೆ ಮುಕ್ತ ಅವಕಾಶ ಇದೆ. ವಿಜಯಪುರದಲ್ಲಿ ಒಂದು, ಬೆಂಗಳೂರಿನಲ್ಲಿ ಒಂದು ಹೇಳಿಕೆ ಕೊಟ್ಟು ಪಕ್ಷ ಮತ್ತು ಸರ್ಕಾರಕ್ಕೆ ಧಕ್ಕೆ ಮಾಡಬೇಡಿ,’ ಎಂದು ಸಿಎಂ ಯಡಿಯೂರಪ್ಪ ಯತ್ನಾಳ್‌ಗೆ ಸೂಚನೆ ನೀಡಿದ್ದಾರೆ.

ಇದಕ್ಕೆ ಯತ್ನಾಳ್‌, ಯಾರಿಂದ ಸರ್ಕಾರಕ್ಕೆ ಧಕ್ಕೆಯಾಗುತ್ತಿದೆ ಎನ್ನುವುದು ಎಲ್ಲರಿಗೂ ತಿಳಿದಿದೆ. ಹಿರಿಯ ಶಾಸಕರು ಎಲ್ಲದಕ್ಕೂ ಬೆಂಗಳೂರಿಗೆ ಬಂದು ಮಾತನಾಡಲು ಆಗುವುದಿಲ್ಲ, ದೂರವಾಣಿ ಮೂಲಕವೂ ಸಮಸ್ಯೆ ಪರಿಹರಿಸಬೇಕು ಎಂದೂ ಹೇಳಿದ್ದಾರೆ ಎನ್ನಲಾಗಿದೆ. ಈ ವೇಳೆ ಹಿರಿಯ ಸಚಿವರು ಮಧ್ಯಪ್ರವೇಶಿಸಿ ವಿಷಯಾಂತರ ಮಾಡಿದ್ದಾರೆ. ಆದರೆ, ಸಭೆ ಮುಗಿಯುವ ಮೊದಲೇ ಬಸನಗೌಡ ಪಾಟೀಲ್‌ ಯತ್ನಾಳ್‌ ಸಭೆಯಿಂದ ಹೊರ ನಡೆದಿದ್ದಾರೆ

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.