ಬಿಜೆಪಿಯಲ್ಲಿ ಭಿನ್ನಮತ: ನಿರಾಣಿ ಟಿಕೆಟ್ ಘೋಷಣೆಗೆ ಮಾಜಿ ಸಚಿವ ಗುತ್ತೇದಾರ್ ಆಕ್ರೋಶ


Team Udayavani, Jan 26, 2023, 4:51 PM IST

1-sadsadasd

ಕಲಬುರಗಿ: ಬಿಜೆಪಿ ಶಿಸ್ತಿನ ಪಕ್ಷವಾಗಿದ್ದು, ‌ಕೋರ್ ಕಮಿಟಿಯಲ್ಲಿ ಟಿಕೆಟ್ ನಿರ್ಣಯ ಮಾಡಲಾಗುತ್ತದೆ. ‌ಹೀಗಿರುವಾಗ ಕೈಗಾರಿಕಾ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ ನಿರಾಣಿ ಕಲಬುರಗಿ ಉತ್ತರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಘೋಷಣೆ ಮಾಡುವುದಕ್ಕೆ ಅಧಿಕಾರ ಕೊಟ್ಟವರು ಯಾರು ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ, ಮಾಜಿ ಸಚಿವ ಮಾಲೀಕಯ್ಯ ವಿ.ಗುತ್ತೇದಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಲಬುರಗಿ ಉತ್ತರದಲ್ಲಿ ಚಂದು ಪಾಟೀಲ್ ಬಿಜೆಪಿ ಅಭ್ಯರ್ಥಿ ಎನ್ನುವ ನಿರಾಣಿ ಹೇಳಿಕೆಗೆ ಮಾಲೀಕಯ್ಯ ಗುತ್ತೇದಾರ ತೀವ್ರ ಆಕ್ರೋಶ ವ್ಯಕ್ತಪಡಿಸಿ, ಸ್ವತ: ನಿರಾಣಿ ಅವರಿಗೆ ಬೀಳಗಿಯಲ್ಲಿ ಟಿಕೆಟ್ ಸಿಗುತ್ತೋ ಇಲ್ಲವೋ ಖಚಿತವಾಗಿಲ್ಲ. ನಮ್ಮಲ್ಲಿಯಾರ ಟಿಕೆಟ್ ಕೂಡ ಇನ್ನೂ ನಿರ್ಣಯವಾಗಿಲ್ಲ. ಪ್ರಮುಖವಾಗಿ ಕುಟುಂಬ ರಾಜಕಾರಣಕ್ಕೆ ಬಿಜೆಪಿ ಪಕ್ಷದಲ್ಲಿ ಅವಕಾಶ ಇಲ್ಲ ಎಂದರು.

ನಿರಾಣಿ ಅವರು ಕಲಬುರಗಿ ಉಸ್ತುವಾರಿ ಸಚಿವರಾಗಿದ್ದಾರೆ.‌ ಸರ್ಕಾರದ ಯೋಜನೆಗಳನ್ನು ಪರಿಣಾಮಕಾರಿ ಕೆಲಸ ಮಾಡಲಿ.‌ ಪಕ್ಷದ ಸಂಘಟನೆಗೆ ರಾಜ್ಯ ಉಪಾಧ್ಯಕ್ಷ ಸೇರಿ ಇಲ್ಲಿ ಹಲವರಿದ್ದಾರೆ. ಪರಿಸ್ಥಿತಿ ಎಲ್ಲ ಗೊತ್ತಿದ್ದರೂ ಸಚಿವ ನಿರಾಣಿ ಅಭ್ಯರ್ಥಿ ಘೋಷಣೆ ಮಾಡಿರುವುದನ್ನು ಬಲವಾಗಿ ಖಂಡಿಸುತ್ತೇನೆ ಎಂದು ಹರಿ ಹಾಯ್ದರು.‌

ಟಿಕೆಟ್ ಘೋಷಣೆಯಿಂದ ಪಕ್ಷದಲ್ಲಿ ಗೊಂದಲ ಉಂಟಾಗುತ್ತದೆ. ಒಟ್ಟಾರೆ ಈ ವಿಚಾರ ಪಕ್ಷದ ವೇದಿಕೆಯಲ್ಲಿ ಪ್ರಸ್ತಾಪಿಸುವೆ ಎಂದು ಗುತ್ತೇದಾರ ತಿಳಿಸಿದರು.

ಅಫಜಲಪುರದಲ್ಲಿ ತಮ್ಮ ವಿರುದ್ದ ಕೆಲವರು ಎತ್ತಿ ಕಟ್ಟುತ್ತಿದ್ದಾರೆ.‌ ಈಗಾಗಲೇ ಆರು ಸಲ ಗೆದ್ದಿದ್ದು, ಏಳನೆ ಸಲ ಗೆದ್ದರೆ ಮಂತ್ರಿಯಾಗುತ್ತೇನೆ ಎಂಬ ಕಾರಣದಿಂದ ಸಹೋದರನನ್ನು ಟಿಕೆಟ್ ಕೇಳುವಂತೆ ಮುಂದೆ ಮಾಡುತ್ತಿದ್ದಾರೆ. ನಮ್ಮ ಕುಟುಂಬದಲ್ಲಿ ಒಡಕಿಲ್ಲ. ಜಾರಕಿಹೊಳಿ ಕುಟುಂಬದಂತೆ ಒಬ್ಬೊಬ್ಬರು ಒಂದೊಂದು ಪಕ್ಷದಲ್ಲಿಲ್ಲ. ನಾವೆಲ್ಲರೂ ಕುಳಿತು ಮಾತನಾಡುತ್ತೇವೆ. ಹಿರಿಯ ಸಹೋದರನಾಗಿ ತಂದೆ ಸ್ಥಾನದಲ್ಲಿ ಕೆಲವು ಮಾತುಗಳು ಹೇಳುವೆ. ಮಕ್ಕಳನ್ನು ರಾಜಕೀಯವಾಗಿ ಮುಂಚೂಣಿಗೆ ತಂದಿಲ್ಲ. ತರುವಂತಿದ್ದರೆ ಫರಹಾಬಾದ್ ಜಿಲ್ಲಾ ಪಂಚಾಯಿತಗೆ ತರಬಹುದಿತ್ತು.‌ ತನ್ನ ಉತ್ತರದಾಧಿಕಾರಿ ಸಹೋದರ ನಿತೀನ್ ಗುತ್ತೇದಾರ ಎಂದು ಹೇಳಲಾಗಿದೆ. ಟಿಕೆಟ್ ಯಾರಿಗೂ ಕೊಟ್ಟರೂ ಒಗ್ಗಟ್ಟಿನಿಂದ ಮಾಡುತ್ತೇವೆ. ಒಂದು ವೇಳೆ ಎಲ್ಲವೂ ಹೇಳಿದ್ದರೂ ಕೇಳದಿದ್ದರೆ ಏನೂ ಮಾಡಕ್ಕಾಗಲ್ಲ ಎಂದು ಕುಟುಂಬದಲ್ಲಿನ ಟಿಕೆಟ್ ಪೈಪೋಟಿ ಕುರಿತು ವಿವರಣೆ ನೀಡಿದರು.

ನಿರಾಣಿ ಹೇಳಿದ್ದೇನು?
ಸಚಿವ ಮುರುಗೇಶ ನಿರಾಣಿ ಜ.‌25 ರಂದು ಬಿಜೆಪಿ ಕಲಬುರಗಿ ಉತ್ತರ ಮಂಡಲ ಪಕ್ಷದ ಕಚೇರಿ ಉದ್ಘಾಟಿಸಿ, ಈ ಸಲ ಕಲಬುರಗಿ ಉತ್ತರ ಕ್ಷೇತ್ರಕ್ಕೆ ಚಂದು ಪಾಟೀಲ್ ಅವರೇ ಅಭ್ಯರ್ಥಿ ಎಂದು ಘೋಷಿಸಿದ್ದರು.‌ ಇದಕ್ಕೆ ಮಾಲೀಕಯ್ಯ ಗುತ್ತೇದಾರ ಗುರುವಾರ ಆಕ್ರೋಶ ವ್ಯಕ್ತಪಡಿಸಿದರು.

ಟಿಕೆಟ್ ಘೋಷಣೆ ಗೆ ಸಂಬಂಧಿಸಿದಂತೆ ರ ಪ್ರತಿಕ್ರಿಯಿಸಿರುವ ಸಚಿವ ನಿರಾಣಿ, ಕಳೆದ ಸಲ ಚಂದು ಪಾಟೀಲ್ ಕಡಿಮೆ ಮತಗಳ ಅಂತರದಿಂದ ಸೋತಿದ್ದಾರೆ. ಈ ಸಲ ಗೆಲುವು ಸಾಧಿಸುವುದು ನಿಶ್ಚಿತ. ‌ಹೀಗಾಗಿ ಘೋಷಣೆ ಮಾಡಲಾಗಿದೆ. ಆದರೂ ಇದು ವೈಯಕ್ತಿಕ ಹೇಳಿಕೆ. ಪ್ರಮುಖವಾಗಿ ವರಿಷ್ಠರ ಗಮನಕ್ಕಿದೆ ಎಂದು ವಿವರಣೆ ನೀಡಿದರು.

ಟಾಪ್ ನ್ಯೂಸ್

arrest 3

ಹೆತ್ತವರನ್ನೇ ಹತ್ಯೆಗೈದಿದ್ದ 15ರ ಬಾಲಕಿ ಖಾಕಿ ಬಲೆಗೆ

1-asdssa-dsa

ತೆನೆ ಹೊತ್ತ ಹೆಚ್.ಆರ್.ಚನ್ನಕೇಶವ ; ಗಂಗಾವತಿಯಿಂದ ಕಣಕ್ಕೆ

1-fsadsdsd

ಉಪನಾಮ ವಿವಾದ:ರಾಹುಲ್ ಗಾಂಧಿ ವಿರುದ್ಧ ಆಕ್ರೋಶ ಹೊರ ಹಾಕಿದ ಲಲಿತ್ ಮೋದಿ

tdy-19

ಉಳ್ಳಾಲ: ಹೆಜ್ಜೇನು ದಾಳಿಗೆ ಬಾವಿಯಲ್ಲಿ ಅಡಗಿ ಕುಳಿತ 79 ರ ವೃದ್ಧ

TDY-18

ಬುಡಕಟ್ಟು ಕುಟುಂಬಕ್ಕೆ ಥಿಯೇಟರ್ ಪ್ರವೇಶ ನಿರಾಕರಣೆ: ಥಿಯೇಟರ್‌ ವಿರುದ್ದ ನೆಟ್ಟಿಗರು ಗರಂ

Arjun Tendulkar To Debut For Mumbai Indians In IPL 2023?

ಈ ಬಾರಿಯಾದರೂ ಅರ್ಜುನ್ ತೆಂಡೂಲ್ಕರ್ ಗೆ ಸಿಗುತ್ತಾ ಚಾನ್ಸ್?: ಉತ್ತರ ನೀಡಿದ ರೋಹಿತ್

1-asd-adas-d

ರಾಜಕೀಯ ವಿವಾದ; ಮೊಸರು ಪ್ಯಾಕೆಟ್‌ಗಳ ಮೇಲೆ ಪ್ರಾದೇಶಿಕ ಹೆಸರು!



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-csa-dsasad

ಮಿಸ್ಟರ್ ಹಾಲಪ್ಪ… ಅಭಿವೃದ್ಧಿ ಸಂಬಂಧ ಬಹಿರಂಗ ಚರ್ಚೆ; ಬೇಳೂರು ಸವಾಲು

1-asdssa-dsa

ತೆನೆ ಹೊತ್ತ ಹೆಚ್.ಆರ್.ಚನ್ನಕೇಶವ ; ಗಂಗಾವತಿಯಿಂದ ಕಣಕ್ಕೆ

ಯಕ್ಷಗಾನ, ಕೋಲ ನಡೆಸಬಹುದೇ..? ಚುನಾವಣಾ ನೀತಿ ಸಂಹಿತೆ ಬಗ್ಗೆ ದ.ಕನ್ನಡ ಡಿಸಿ ಮಾಹಿತಿ

ಯಕ್ಷಗಾನ, ಕೋಲ ನಡೆಸಬಹುದೇ..? ಚುನಾವಣಾ ನೀತಿ ಸಂಹಿತೆ ಬಗ್ಗೆ ದ.ಕನ್ನಡ ಡಿಸಿ ಮಾಹಿತಿ

1-wqewqe

ನೀತಿ ಸಂಹಿತೆ ಉಲ್ಲಂಘನೆ : ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿ ವಿರುದ್ಧ ಕೇಸ್

tdy-10

ಚನ್ನಪಟ್ಟಣಕ್ಕೆ ಕಾಂಗ್ರೆಸ್‌ ಅಭ್ಯರ್ಥಿ ಯಾರು?

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

1-csa-dsasad

ಮಿಸ್ಟರ್ ಹಾಲಪ್ಪ… ಅಭಿವೃದ್ಧಿ ಸಂಬಂಧ ಬಹಿರಂಗ ಚರ್ಚೆ; ಬೇಳೂರು ಸವಾಲು

arrest 3

ಹೆತ್ತವರನ್ನೇ ಹತ್ಯೆಗೈದಿದ್ದ 15ರ ಬಾಲಕಿ ಖಾಕಿ ಬಲೆಗೆ

madhu

ತಮಿಳಿನತ್ತ ಮಧು ಗುರುಸ್ವಾಮಿ; ಮಫ್ತಿ ರೀಮೇಕ್‌ ನಲ್ಲಿ ನಟನೆ

1-asdssa-dsa

ತೆನೆ ಹೊತ್ತ ಹೆಚ್.ಆರ್.ಚನ್ನಕೇಶವ ; ಗಂಗಾವತಿಯಿಂದ ಕಣಕ್ಕೆ

ಬೆಳ್ತಂಗಡಿ: ಸವಣಾಲು ಬಳಿ ಎರಡು ಬೈಕ್‌ಗಳ ಮಧ್ಯೆ ಅಪಘಾತ; ಓರ್ವ ಸಾವು

ಬೆಳ್ತಂಗಡಿ: ಸವಣಾಲು ಬಳಿ ಎರಡು ಬೈಕ್‌ಗಳ ಮಧ್ಯೆ ಅಪಘಾತ; ಓರ್ವ ಸಾವು