ಹರ್ಯಾಣ BJP ಸರ್ಕಾರದಲ್ಲಿ ಭಿನ್ನಮತ?
ಮೈತ್ರಿ ಪಕ್ಷ ಜೆಜೆಪಿಯೊಂದಿಗೆ ಹಳಸಿದ ಸಂಬಂಧ: ಪಕ್ಷೇತರ ಶಾಸಕರಿಂದ ಬಿಪ್ಲಬ್ ಭೇಟಿ
Team Udayavani, Jun 10, 2023, 7:27 AM IST
ನವದೆಹಲಿ: ಹರ್ಯಾಣದಲ್ಲಿ ಅಧಿಕಾರದಲ್ಲಿ ಇರುವ ಸಿಎಂ ಮನೋಹರ್ ಲಾಲ್ ಖಟ್ಟರ್ ಮತ್ತು ಡಿಸಿಎಂ ದುಷ್ಯಂತ್ ಚೌಟಾಲ ಅವರ ಜನನಾಯಕ ಜನತಾ ಪಾರ್ಟಿ (ಜೆಜೆಪಿ) ಮೈತ್ರಿ ಸರ್ಕಾರದಲ್ಲಿ ಭಿನ್ನಮತದ ಬಿರುಕುಗಳು ಮೂಡಲಾರಂಭಿಸಿವೆ. 2024ರ ಲೋಕಸಭೆ ಚುನಾವಣೆ ಜತೆಯಲ್ಲಿಯೇ ರಾಜ್ಯ ವಿಧಾನಸಭೆ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಈ ಬೆಳವಣಿಗೆ ಬಿಜೆಪಿಗೆ ಸವಾಲಿನದ್ದೇ ಆಗಿರಲಿದೆ. ಮೈತ್ರಿ ಸರ್ಕಾರಕ್ಕೆ ಬೆಂಬಲ ನೀಡಿರುವ ನಾಲ್ವರು ಸ್ವತಂತ್ರ ಶಾಸಕರು ಹರ್ಯಾಣದಲ್ಲಿ ಬಿಜೆಪಿ ಉಸ್ತುವಾರಿ ಬಿಪ್ಲಬ್ ಕುಮಾರ್ ದೇಬ್ ಅವರನ್ನು ಭೇಟಿ ಮಾಡಿದ್ದಾರೆ.
ಪಕ್ಷೇತರ ಶಾಸಕರಾಗಿರುವ ಧರ್ಮಪಾಲ್ ಗೋಂಡರ್, ರಾಕೇಶ್ ದೌಲತಾಬಾದ್, ರಣಬೀರ್ ಸಿಂಗ್ ಮತ್ತು ಸೋಮವೀರ್ ಸಾಂಗ್ವಾನ್ ಅವರ ಜತೆಗೆ ಮಾತುಕತೆ ನಡೆಸಲಾಗಿದೆ. ಅವರೆಲ್ಲರೂ ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವದಲ್ಲಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ರಾಜ್ಯದ ಅಭಿವೃದ್ಧಿಗೆ ಡಬಲ್ ಎಂಜಿನ್ ಸರ್ಕಾರ ನೆರವು ನೀಡಲಿದೆ ಎಂದು ನಂತರ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ಬಿಪ್ಲಬ್ ತಿಳಿಸಿದ್ದಾರೆ.
2019ರಲ್ಲಿ ನಡೆದಿದ್ದ ವಿಧಾನಸಭೆ ಚುನಾವಣೆ ವೇಳೆ ಬಿಜೆಪಿ 40, ಜೆಜೆಪಿ 10, ಹರ್ಯಾಣ ಲೋಕಹಿತ ಪಾರ್ಟಿ 1, ಸ್ವತಂತ್ರರು 7, ಕಾಂಗ್ರೆಸ್ 30, ಇಂಡಿಯನ್ ನ್ಯಾಷನಲ್ ಲೋಕದಳ 1 ಸ್ಥಾನಗಳಲ್ಲಿ ಗೆದ್ದಿದ್ದವು. ಬಿಜೆಪಿ ಜತೆಗೆ ಜೆಜೆಪಿ, ಹರ್ಯಾಣ ಲೋಕಹಿತ ಪಾರ್ಟಿ, ಸ್ವತಂತ್ರ ಶಾಸಕರ ಪೈಕಿ ಐವರು ಸೇರಿಕೊಂಡು 57 ಶಾಸಕರ ಬಲದಿಂದ ಸರ್ಕಾರ ರಚನೆ ಮಾಡಿದ್ದವು. ಬಿಜೆಪಿಗೆ ಸ್ವಂತ ಬಲದಿಂದ ಸರ್ಕಾರ ರಚನೆ ಮಾಡಲು ಸಾಧ್ಯವಾಗದೇ ಇದ್ದುದರಿಂದ ಜೆಜೆಪಿ ಜತೆ ಸೇರಿಕೊಂಡು ಸರ್ಕಾರ ರಚನೆ ಮಾಡಲಾಯಿತು ಮತ್ತು ದುಷ್ಯಂತ್ ಚೌಟಾಲರನ್ನು ಡಿಸಿಎಂ ಸ್ಥಾನಕ್ಕೆ ಏರಿಸಲಾಗಿತ್ತು.
ಕೆಲ ದಿನಗಳ ಹಿಂದೆ ಸ್ಥಾನ ಹೊಂದಾಣಿಕೆ ಬಗ್ಗೆ ಪ್ರತಿಕ್ರಿಯೆ ನೀಡಿದ್ದ ಬಿಪ್ಲಬ್ ಕುಮಾರ್ ದೇಬ್ ಬಿಜೆಪಿಗೆ ಅನುಕೂಲವಾಗಲಿ ಎಂದು ಜೆಜೆಪಿ ಬೆಂಬಲ ನೀಡಲಿಲ್ಲ. ಏಕೆಂದರೆ ಅದು ಪ್ರಾದೇಶಿಕ ಪಕ್ಷ ಎಂದು ಹೇಳಿದ್ದರು. 2024 ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಜತೆಗೆ ಮೈತ್ರಿ ಮಾಡಿಕೊಂಡು ಸ್ಪರ್ಧೆ ಮಾಡಲಾಗುತ್ತದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ್ದ ಡಿಸಿಎಂ ದುಷ್ಯಂತ್ ಚೌಟಾಲ “ಸಮಯಕ್ಕೆ ಸರಿಯಾಗಿಯೇ ವಿಧಾನಸಭೆ ಚುನಾವಣೆ ನಡೆಯಲಿದೆ. ಆದರೆ, ಮುಂದೆ ಏನಾಗಲಿದೆ ಎಂಬುದರ ಬಗ್ಗೆ ಹೇಳಲು ಜ್ಯೋತಿಷಿಯಲ್ಲ. ಕೇವಲ 10 ಕ್ಷೇತ್ರಗಳಲ್ಲಿಯೇ ನಮ್ಮ ಬಲ ಇರುವುದೇ? ಬಿಜೆಪಿಗೆ 40 ಕ್ಷೇತ್ರಗಳಲ್ಲಿ ಸಾಮರ್ಥ್ಯವೇ? ಎಂದು ಪ್ರಶ್ನಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ