ಚುನಾವಣೆಗೆ ಅಡ್ಡಗಾಲು? ಹೊಸ ತಾಲೂಕು ರಚನೆ ಕ್ಷೇತ್ರ ಪುನರ್ ವಿಂಗಡಣೆಗೆ ಅಡ್ಡಿ
Team Udayavani, Feb 19, 2021, 7:10 AM IST
ಬೆಂಗಳೂರು: ಜಿಲ್ಲಾ ಮತ್ತು ತಾಲೂಕು ಪಂಚಾಯತ್ ಚುನಾವಣೆಗಳನ್ನು ಮುಂದೂಡಲು ರಾಜ್ಯ ಸರಕಾರ ತಯಾರಿ ನಡೆಸುತ್ತಿದೆಯೇ? ಸರಕಾರದ ಚುನಾವಣೆ ಸಿದ್ಧತೆ ಗಮನಿಸಿದರೆ ಹೀಗೊಂದು ಅನುಮಾನ ಬಾರದಿರದು.
ಸದ್ಯ ತಾ.ಪಂ. ರದ್ದತಿಯ ಬಗ್ಗೆ ಪರ- ವಿರೋಧ ಚರ್ಚೆ ನಡೆದಿದ್ದು, ಕೇಂದ್ರ ಸರಕಾರಕ್ಕೆ ಈ ಸಂಬಂಧ ಶಿಫಾರಸು ಕಳುಹಿಸಲು ಸರಕಾರ ತಯಾರಿ ನಡೆಸಿದೆ. ಇದರ ಮಧ್ಯೆ ಈಗ ರಾಜ್ಯ ಚುನಾವಣ ಆಯೋಗವು ಕ್ಷೇತ್ರ ಪುನರ್ವಿಂಗಡಣೆ ಪ್ರಕ್ರಿಯೆಗೆ ಕೈಹಾಕಿದೆ. ಇದು ಅವಧಿಯೊಳಗೆ ಮುಗಿಯುವುದೇ ಎಂಬ ಅನುಮಾನ ಮೂಡಿದೆ.
ಎಪ್ರಿಲ್ನಲ್ಲಿ ಚುನಾವಣೆ
ಈ ಮೇ- ಜೂನ್ಗೆ ಜಿ.ಪಂ. ಮತ್ತು ತಾ.ಪಂ.ಗಳ ಅವಧಿ ಮುಗಿಯಲಿದೆ. ಎಪ್ರಿಲ್ ವೇಳೆಗೆ ಚುನಾವಣೆ ಮುಗಿದು ಹೊಸ ಸದಸ್ಯರು ಆಯ್ಕೆಯಾಗಬೇಕು. ಇಂಥ ಸಮಯದಲ್ಲಿ ಕ್ಷೇತ್ರ ಪುನರ್ ವಿಂಗಡಣೆಯ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ. ಮೊದಲು ಇದು ಮುಗಿಯಬೇಕು. ಬಳಿಕ ಮೀಸಲಾತಿ ನಿಗದಿಯಾಗಬೇಕು. ಮೀಸಲಾತಿಗೆ ಕರಡು ಮಾರ್ಗಸೂಚಿಗಳನ್ನು ಈಗಷ್ಟೇ ಹೊರಡಿಸಿರುವ ಸರಕಾರ, ಆಕ್ಷೇಪಣೆಗೆ 30 ದಿನಗಳ ಕಾಲಾವಕಾಶ ನೀಡಿದೆ. ಅಂತಿಮ ಮೀಸಲಾತಿ ಪಟ್ಟಿ ಪ್ರಕಟಗೊಂಡ 45 ದಿನಗಳ ಬಳಿಕ ಚುನಾವಣೆಗೆ ದಿನಾಂಕ ಘೋಷಣೆಯಾಗಬೇಕು. ಇವುಗಳನ್ನೆಲ್ಲ ಗಮನಿಸಿದರೆ ನಿಗದಿತ ಅವಧಿಯೊಳಗೆ ಜಿ.ಪಂ., ತಾ.ಪಂ. ಚುನಾವಣೆ ನಡೆಯುವುದು ಅನುಮಾನ.
ಕ್ಷೇತ್ರ ಪುನರ್ವಿಂಗಡಣೆಗೆ 3 ದಿನ
ರಾಜ್ಯದ 31 ಜಿಲ್ಲೆಗಳು ಮತ್ತು 229 ತಾಲೂಕುಗಳ ಜಿ.ಪಂ. ಮತ್ತು ತಾ.ಪಂ. ಕ್ಷೇತ್ರಗಳ ಪುನರ್ವಿಂಗಡಣೆ ಸಂಬಂಧ ಚುನಾವಣ ಆಯೋಗವು ಎಲ್ಲ ಜಿಲ್ಲಾಧಿಕಾರಿಗಳಿಗೆ ಸೂಚನೆ ಹೊರಡಿಸಿದೆ. ಫೆ. 19, 20 ಮತ್ತು 22ರಂದು ಕ್ರಮವಾಗಿ ತಲಾ 10 ಜಿಲ್ಲೆಗಳಿಗೆ ಕ್ಷೇತ್ರ ಪುನರ್ ವಿಂಗಡಣೆ ದಿನಾಂಕ ನಿಗದಿಪಡಿಸಲಾಗಿದೆ. ಇಷ್ಟೊಂದು ಅಲ್ಪ ಅವಧಿಯಲ್ಲಿ ಕ್ಷೇತ್ರ ಪುನರ್ ವಿಂಗಡಣೆ ಪೂರ್ಣಗೊಳಿಸುವುದು ಸವಾಲಿನ ಕೆಲಸ.
ಕಾಲಮಿತಿ ಬೇಕು
ಪುನರ್ವಿಂಗಡಣೆ ಆರಂಭವಾಗುತ್ತಿರುವಂತೆಯೇ ಹೊಸ ತಾಲೂಕುಗಳ ರಚನೆ ಕುರಿತ ಅಧಿಸೂಚನೆಯನ್ನು ಸರಕಾರ ಹೊರಡಿಸುತ್ತಿರುವುದು ಚುನಾವಣ ಆಯೋಗವನ್ನು ಇಕ್ಕಟ್ಟಿಗೆ ಸಿಲುಕಿಸಿದೆ. ಆಯೋಗ ಸೂಚನೆ ಹೊರಡಿಸಿದ ಬಳಿಕ ಮೈಸೂರು ಜಿಲ್ಲೆಯ ಸಾಲಿಗ್ರಾಮ, ದಕ್ಷಿಣ ಕನ್ನಡ ಜಿಲ್ಲೆಯ ಮೂಲ್ಕಿ, ಉಳ್ಳಾಲ ತಾಲೂಕು ರಚನೆಗೆ ಚಾಲನೆ ಸಿಕ್ಕಿದೆ.
ಕ್ಷೇತ್ರಗಳ ಏರಿಳಿತಕ್ಕೆ ಕಾರಣ
ಪಂ.ರಾಜ್ ಕಾಯ್ದೆ ತಿದ್ದುಪಡಿ ಪರಿಣಾಮ ಪ್ರತೀ 12,500ರಿಂದ 15 ಸಾವಿರ ಜನಸಂಖ್ಯೆಗೆ ಒಂದು ತಾ.ಪಂ. ಕ್ಷೇತ್ರ ಮತ್ತು ಪ್ರತೀ 35 ಸಾವಿರ ಜನಸಂಖ್ಯೆಗೆ ಒಂದು ಜಿ.ಪಂ. ಕ್ಷೇತ್ರ ನಿಗದಿಪಡಿಸಬೇಕಿದೆ. ಹಾಗಾಗಿ ತಾಲೂಕುಗಳ ಸಂಖ್ಯೆ ಹೆಚ್ಚಿದ್ದರೂ ತಾ.ಪಂ. ಕ್ಷೇತ್ರಗಳ ಸಂಖ್ಯೆ ಕಡಿಮೆಯಾಗಿದೆ. ಕೆಲವು ಗ್ರಾ.ಪಂ.ಗಳು ಪಟ್ಟಣ ಪಂಚಾಯತ್ಗಳಾಗಿ ಮೇಲ್ದರ್ಜೆಗೇರಿದ ಕಾರಣ ಆ ಪ್ರದೇಶಗಳು ತಾ.ಪಂ. ಮತ್ತು ಜಿ.ಪಂ. ವ್ಯಾಪ್ತಿಯಿಂದ ಹೊರಗೆ ಹೋಗುತ್ತವೆ. ಇದನ್ನು ಹೊರತುಪಡಿಸಿ ಕ್ಷೇತ್ರಗಳ ಏರಿಳಿತಕ್ಕೆ ಬೇರೆ ಯಾವುದೇ ಕಾರಣ ಇಲ್ಲ.
ಜಿ.ಪಂ. ಮತ್ತು ತಾ.ಪಂ. ಕ್ಷೇತ್ರ ಪುನರ್ ವಿಂಗಡಣೆ ಕುರಿತ ಪಟ್ಟಿ ಸಿದ್ಧಪಡಿಸುವಂತೆ ಎಲ್ಲ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಮೂರ್ನಾಲ್ಕು ದಿನ ಸಮಯ ನೀಡಲಾಗಿದೆ. ಜನಸಂಖ್ಯೆ ಆಧಾರದಲ್ಲಿ ಕ್ಷೇತ್ರ ಪುನರ್ ವಿಂಗಡಣೆ ಆಗಲಿದ್ದು, ಅಂತಿಮಗೊಂಡ ಬಳಿಕ ಮೀಸಲಾತಿ ನಿಗದಿ ಪ್ರಕ್ರಿಯೆ ನಡೆಯಲಿದೆ. ಚುನಾವಣೆಗೆ ಆಯೋಗ ಸಿದ್ಧತೆಗಳನ್ನು ಮಾಡಿಕೊಂಡಿದೆ.
– ಎಸ್. ಹೊನ್ನಾಂಬ, ರಾಜ್ಯ ಚುನಾವಣ ಆಯೋಗದ ಕಾರ್ಯದರ್ಶಿ
– ರಫೀಕ್ ಅಹ್ಮದ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ; 15 ಮಂದಿ ಆರೋಪಿಗಳು ಖುಲಾಸೆ
ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ
MUST WATCH
ಹೊಸ ಸೇರ್ಪಡೆ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?