ಜಿಲ್ಲಾ ಉಸ್ತುವಾರಿ ಬದಲಾವಣೆ: ತವರು ಜಿಲ್ಲೆ ಬಹುತೇಕ ಸಚಿವರಿಗೆ ಇಲ್ಲ
ಶ್ರೀರಾಮುಲುಗೆ ಬಳ್ಳಾರಿ ಭಾಗ್ಯ ; ಆರ್.ಅಶೋಕ್ , ಮಾಧುಸ್ವಾಮಿಗೆ ಉಸ್ತುವಾರಿಯೇ ಇಲ್ಲ
Team Udayavani, Jan 24, 2022, 4:36 PM IST
ಬೆಂಗಳೂರು : ಆರು ತಿಂಗಳ ಬಳಿಕ ಜಿಲ್ಲಾ ಉಸ್ತುವಾರಿ ಪಟ್ಟಿ ಬಿಡುಗಡೆ ಮಾಡುವಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಅವರು ಯಶಸ್ವಿಯಾಗಿದ್ದು, ಬೆಂಗಳೂರು ಉಸ್ತುವಾರಿಯನ್ನು ತಮ್ಮ ಬಳಿಯೇ ಉಳಿಸಿಕೊಂಡಿದ್ದು, ಬಹುತೇಕ ಸಚಿವರಿಗೆ ತವರು ಜಿಲ್ಲೆಯ ಉಸ್ತುವಾರಿ ತಪ್ಪಿಸಲಾಗಿದೆ.
ಕರಾವಳಿ ಜಿಲ್ಲೆಗಳಲ್ಲಿ ಈ ಬದಲಾವಣೆ ಭಾರಿ ಚರ್ಚೆಗೆ ಕಾರಣವಾಗಿದ್ದು, ಕೋಟಾ ಶ್ರೀನಿವಾಸ್ ಪೂಜಾರಿಯವರಿಗೆ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ನೀಡಲಾಗಿದ್ದು, ಉತ್ತರ ಕನ್ನಡದ ಸಚಿವ ಶಿವರಾಂ ಹೆಬ್ಬಾರ್ ಅವರಿಗೆ ಮುಖ್ಯಮಂತ್ರಿ ಬೊಮ್ಮಾಯಿ ಅವರ ತವರು ಜಿಲ್ಲೆ ಹಾವೇರಿಯ ಜವಾಬ್ದಾರಿ ನೀಡಲಾಗಿದೆ. ಉಡುಪಿಗೆ ಅಂಗಾರ, ದಕ್ಷಿಣ ಕನ್ನಡಕ್ಕೆ ವಿ.ಸುನೀಲ್ ಕುಮಾರ್ ಅವರನ್ನು ನೇಮಕ ಮಾಡಲಾಗಿದೆ.
ಆರ್ ಎಸ್ ಎಸ್ ಹಾಗೂ ಬಿಜೆಪಿ ವರಿಷ್ಠರ ಸೂಚನೆ ಮೇರೆಗೆ ಸಚಿವರಿಗೆ ತವರು ಜಿಲ್ಲೆಯ ಉಸ್ತುವಾರಿಯನ್ನು ತಪ್ಪಿಸಲಾಗಿದೆ ಎಂದು ಹೇಳಲಾಗಿದೆ.
ಪಟ್ಟಿ ವಿವರ ಹೀಗಿದೆ
ಶ್ರೀರಾಮುಲು ಅವರಿಗೆ ಮಾತ್ರ ತವರು ಜಿಲ್ಲೆಯ ( ಬಳ್ಳಾರಿ) ಉಸ್ತುವಾರಿ ಭಾಗ್ಯ ಮರಳಿ ದೊರೆತಿದೆ.
ಆರ್.ಅಶೋಕ ಹಾಗೂ ಮಾಧುಸ್ವಾಮಿ ಅವರಿಗೆ ಯಾವುದೇ ಉಸ್ತುವಾರಿ ನೀಡಿಲ್ಲ.
ಆದರೆ ಎಸ್.ಟಿ.ಸೋಮಶೇಖರ್(ಮೈಸೂರು) ಹಾಗೂ ಅಶ್ವತ್ಥನಾರಾಯಣ (ರಾಮನಗರ )ಅವರಿಗೆ ಮಾತ್ರ ಈ ಹಿಂದೆ ಇದ್ದ ಜಿಲ್ಲೆಯ ಉಸ್ತುವಾರಿ ಮುಂದುವರಿಸಲಾಗಿದೆ
ಗೋವಿಂದ ಕಾರಜೋಳ- ಬೆಳಗಾವಿ
ಕೆ.ಎಸ್.ಈಶ್ವರಪ್ಪ-ಚಿಕ್ಕಮಗಳೂರು
ವಿ.ಸೋಮಣ್ಣ-ಚಾಮರಾಜನಗರ
ಉಮೇಶ್ ಕತ್ತಿ- ವಿಜಯಪುರ
ಆರಗ ಜ್ಞಾನೇಂದ್ರ-ತುಮಕೂರು
ಸಿ.ಸಿ.ಪಾಟೀಲ್-ಬಾಗಲಕೋಟೆ
ಆನಂದ್ ಸಿಂಗ್ -ಕೊಪ್ಪಳ
ಪ್ರಭು ಚೌಹಾಣ್-ಯಾದಗಿರಿ
ಮುರುಗೇಶ್ ನಿರಾಣಿ-ಕಲಬುರಗಿ
ಎಸ್.ಟಿ.ಸೋಮಶೇಖರ್-ಮೈಸೂರು
ಬಿ.ಸಿ.ಪಾಟೀಲ್-ಚಿತ್ರದುರ್ಗ, ಗದಗ
ಬೈರತಿ ಬಸವರಾಜ್-ದಾವಣಗೆರೆ
ಡಾ.ಕೆ.ಸುಧಾಕರ್-ಬೆಂಗಳೂರು ಗ್ರಾಮಾಂತರ
ಕೆ.ಗೋಪಾಲಯ್ಯ-ಹಾಸನ, ಮಂಡ್ಯ
ಶಶಿಕಲಾ ಜೊಲ್ಲೆ-ವಿಜಯನಗರ
ಎಂಟಿಬಿ ನಾಗರಾಜ್-ಚಿಕ್ಕಬಳ್ಳಾಪುರ
ಕೆ.ಸಿ.ನಾರಾಯಣಗೌಡ-ಶಿವಮೊಗ್ಗ
ಬಿ.ಸಿ.ನಾಗೇಶ್-ಕೊಡಗು
ಹಾಲಪ್ಪ ಆಚಾರ್-ಧಾರವಾಡ
ಶಂಕರ ಪಾಟೀಲ್ ಮುನೇನಕೊಪ್ಪ-ರಾಯಚೂರು, ಬೀದರ್
ಮುನಿರತ್ನ-ಕೋಲಾರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
MUST WATCH
ಹೊಸ ಸೇರ್ಪಡೆ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ