ದೀಪಾವಳಿ ಕೊಡುಗೆ: ಕೇಂದ್ರ ಸರ್ಕಾರಿ ನೌಕರರ ತುಟ್ಟಿಭತ್ಯೆ ಹೆಚ್ಚಳ, 47 ಲಕ್ಷ ನೌಕರರಿಗೆ ಲಾಭ
ಡಿಎ ಮತ್ತು ಡಿಆರ್ ಅನ್ನು ಶೇ.17ರಿಂದ ಶೇ. 28ಕ್ಕೆ ಹೆಚ್ಚಿಸಲು ಕೇಂದ್ರ ಸರ್ಕಾರ ಅನುಮೋದನೆ ನೀಡಿತ್ತು.
Team Udayavani, Oct 21, 2021, 3:47 PM IST
ನವದೆಹಲಿ: ಕೇಂದ್ರ ಸರ್ಕಾರಿ ನೌಕರರಿಗೆ ದೀಪಾವಳಿಯ ಕೊಡುಗೆ ಎಂಬಂತೆ ಗುರುವಾರ(ಅಕ್ಟೋಬರ್ 21) ಕೇಂದ್ರ ಸಚಿವ ಸಂಪುಟ ಕೇಂದ್ರ ಸರ್ಕಾರಿ ನೌಕರರ ತುಟ್ಟಿಭತ್ಯೆ(ಡಿಎ) ಮತ್ತು ಪಿಂಚಣಿದಾರರ ಡಿಯರ್ನೆಸ್ ಅಲೋವೆನ್ಸಸ್ ಬಿಡುಗಡೆಗೆ ಅನುಮೋದನೆ ನೀಡಿದೆ. ಇದು 2021ರ ಜುಲೈನಿಂದ ಅನ್ವಯವಾಗಲಿದೆ ಎಂದು ವರದಿ ತಿಳಿಸಿದೆ.
ಇದನ್ನೂ ಓದಿ:ಸಂಘ ಪರಿವಾರದವರು ಸಮಾಜ ಒಡೆಯುವ ಕೆಲಸ ಮಾಡ್ತಾರೆಂಬ ಭಯವಿದೆ: ಸಿದ್ದರಾಮಯ್ಯ
ಡಿಎ (ತುಟ್ಟಿಭತ್ಯೆ) ಮತ್ತು ಡಿಆರ್ (Dearness relief to the pensioners) ಹೆಚ್ಚಳದಿಂದಾಗಿ ಕೇಂದ್ರ ಸರ್ಕಾರದ 47.14 ಲಕ್ಷ ನೌಕರರಿಗೆ ಹಾಗೂ 68.62 ಲಕ್ಷ ಪಿಂಚಣಿದಾರರಿಗೆ ಲಾಭವಾಗಲಿದೆ ಎಂದು ವರದಿ ವಿವರಿಸಿದೆ.
ಕೇಂದ್ರ ಸರ್ಕಾರ ಶೇ.3ರಷ್ಟು ಡಿಎ ಮತ್ತು ಡಿಆರ್ ಹೆಚ್ಚಳ ಮಾಡಿದ ಪರಿಣಾಮ ಸರ್ಕಾರದ ಬೊಕ್ಕಸಕ್ಕೆ ವಾರ್ಷಿಕ 9,488.70 ಕೋಟಿ ರೂಪಾಯಿಯಷ್ಟು ಹೆಚ್ಚುವರಿ ಹೊರೆಯಾಗಲಿದೆ ಎಂದು ವರದಿ ಹೇಳಿದೆ.
ಇದಕ್ಕೂ ಮೊದಲು ಕೇಂದ್ರ ಸರ್ಕಾರಿ ನೌಕರರಿಗೆ ಮತ್ತು ಪಿಂಚಣಿದಾರರಿಗೆ ನೀಡಲಾದ ಡಿಎ ಮತ್ತು ಡಿಆರ್ ಅನ್ನು ಶೇ.17ರಿಂದ ಶೇ. 28ಕ್ಕೆ ಹೆಚ್ಚಿಸಲು ಕೇಂದ್ರ ಸರ್ಕಾರ ಅನುಮೋದನೆ ನೀಡಿತ್ತು. ಆದರೆ ಕೋವಿಡ್ 19 ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಡಿಎ ಮತ್ತು ಡಿಆರ್ ನ ಹೆಚ್ಚುವರಿ ಕಂತುಗಳನ್ನು ಸ್ಥಗಿತಗೊಳಿಸಿತ್ತು.
ಸೆಪ್ಟೆಂಬರ್ ತಿಂಗಳಿನಲ್ಲಿ ಹಣಕಾಸು ಸಚಿವಾಲಯ ಅಡಿಯಲ್ಲಿ ವೆಚ್ಚದ ಇಲಾಖೆಯು, ನಿವೃತ್ತ ಕೇಂದ್ರ ಸರ್ಕಾರಿ ನೌಕರರು ನಗದು ಪಾವತಿ ಮತ್ತು ಗ್ರಾಚ್ಯುಟಿ ಪಡೆಯಲಿರುವುದಾಗಿ ತಿಳಿಸಿ ಒಂದು ಜ್ಞಾಪನಾ ಪತ್ರವನ್ನು ರವಾನಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Panaji: ಸರಕಾರದ ಆ್ಯಪ್ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ
B Y Vijayendra: ಕಾಂಗ್ರೆಸ್ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?
Video Viral: ಕಚ್ಚಿದ ಹಾವನ್ನೇ ಕೊಂದು ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು
Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್- ಬಿಜೆಪಿ ನೇರ ಹಣಾಹಣಿ
Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ
MUST WATCH
ಹೊಸ ಸೇರ್ಪಡೆ
Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್ ಕಲ್ಯಾಣ್!
Amethi; ಸ್ಮೃತಿ ಇರಾನಿ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾದ ವಿಕಾಸ್ ಅಗ್ರಹಾರಿ
ಮಂಡ್ಯದಲ್ಲಿ ಐಸ್ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ
Panaji: ಸರಕಾರದ ಆ್ಯಪ್ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ
Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ