ದೀಪಾವಳಿ: ಹಲಾಲ್ ಉತ್ಪನ್ನ ಬಹಿಷ್ಕರಿಸಲು ಹಿಂದೂ ಸಂಘಟನೆಗಳ ಕರೆ; ಶಿವಮೊಗ್ಗದಲ್ಲಿ ಪ್ರತಿಭಟನೆ
ಇಂದಿನಿಂದ ಪ್ರತಿ ಜಿಲ್ಲೆಯಲ್ಲಿ ಅಭಿಯಾನ ನಡೆಸುವಂತೆ ಕರೆ ಕೊಟ್ಟಿದ್ದವು.
Team Udayavani, Oct 18, 2022, 4:04 PM IST
ಶಿವಮೊಗ್ಗ/ಬೆಂಗಳೂರು:ಯುಗಾದಿ ಸಂದರ್ಭದಲ್ಲಿ ಆರಂಭವಾಗಿದ್ದ ಹಲಾಲ್ ಕಟ್ ಅಭಿಯಾನ ಇದೀಗ ದೀಪಾವಳಿ ಹಬ್ಬಕ್ಕೂ ಮುಂದುವರಿದಿದೆ. ಈ ಹಿನ್ನೆಲೆಯಲ್ಲಿ ದೀಪಾವಳಿ ಹಬ್ಬಕ್ಕೆ ಹಲಾಲ್ ಸರ್ಟಿಫೈಡ್ ಇರುವ ಉತ್ಪನ್ನಗಳನ್ನು ಬಹಿಷ್ಕರಿಸುವಂತೆ ಹಿಂದೂ ಸಂಘಟನೆಗಳು ಕರೆ ನೀಡಿವೆ.
ಇದನ್ನೂ ಓದಿ:ಗಲಭೆ ಕೇಸ್: ಜೆಎನ್ ಯು ಮಾಜಿ ವಿದ್ಯಾರ್ಥಿ ಉಮರ್ ಖಾಲೀದ್ ಜಾಮೀನು ಅರ್ಜಿ ವಜಾ
ಹಿಂದೂ ಸಂಘಟನೆಯ ಕರೆಯ ನಿಟ್ಟಿನಲ್ಲಿ ಮಂಗಳವಾರ (ಅಕ್ಟೋಬರ್ 18) ಶಿವಮೊಗ್ಗದಲ್ಲಿ ಹಿಂದೂ ಜನ ಜಾಗೃತಿ ಸಮಿತಿ ಹಲಾಲ್ ಕಟ್ ಅಭಿಯಾನ ಆರಂಭಿಸಿದೆ. ಜಿಲ್ಲಾಧಿಕಾರಿ ಕಚೇರಿ ಸಮ್ಮುಖದಲ್ಲಿ ಸಾಂಕೇತಿಕ ಪ್ರತಿಭಟನೆ ನಡೆಸಿದ ಹಿಂದೂ ಜನ ಜಾಗೃತಿ ಸಮಿತಿ, ದೀಪಾವಳಿಗೆ ಹಲಾಲ್ ಸರ್ಟಿಫೈಡ್ ವಸ್ತುಗಳನ್ನು ಬಳಸಲು ಅನುಮತಿ ನೀಡಬಾರದು ಎಂದು ಮನವಿ ಮಾಡಿಕೊಂಡಿರುವುದಾಗಿ ವರದಿ ತಿಳಿಸಿದೆ.
ಬೆಂಗಳೂರಿನಲ್ಲಿ ಸಭೆ ನಡೆಸಿದ್ದ ಹಿಂದೂ ಸಂಘಟನೆಗಳು, ಇಂದಿನಿಂದ ಪ್ರತಿ ಜಿಲ್ಲೆಯಲ್ಲಿ ಅಭಿಯಾನ ನಡೆಸುವಂತೆ ಕರೆ ಕೊಟ್ಟಿದ್ದವು. ಹಲಾಲ್ ಸರ್ಟಿಫೈಡ್ ಇರುವ ಉತ್ಪನ್ನಗಳನ್ನು ಖರೀದಿಸದಂತೆ ಜನರಲ್ಲಿ ಜಾಗೃತಿ ಮೂಡಿಸುವುದಾಗಿ ಹಿಂದೂ ಜನ ಜಾಗೃತಿ ವೇದಿಕೆಯ ಮೋಹನ್ ಗೌಡ ತಿಳಿಸಿದ್ದರು.
ಈ ವರ್ಷ ಹಲಾಲ್ ಮುಕ್ತ ದೀಪಾವಳಿ ಆಚರಿಸುವಂತೆ ಕರೆ ನೀಡುತ್ತಿದ್ದೇವೆ. ಆ ನೆಲೆಯಲ್ಲಿ ಹಿಂದೂಗಳು ಹಲಾಲ್ ಸರ್ಟಿಫೈಡ್ ನ ಯಾವ ವಸ್ತುಗಳನ್ನೂ (ಮಾಂಸ, ಸೌಂದರ್ಯ ವರ್ಧಕ ವಸ್ತು, ಧಾನ್ಯ, ಹಣ್ಣು, ಔಷಧ) ದೀಪಾವಳಿ ಸಂದರ್ಭದಲ್ಲಿ ಬಳಕೆ ಮಾಡಬಾರದು ಎಂದು ಹಿಂದೂ ಜನಜಾಗೃತಿಯ ಪವನ್ ಕುಮಾರ್ ಶಿಂಧೆ ಈ ಸಂದರ್ಭದಲ್ಲಿ ಮನವಿ ಮಾಡಿಕೊಂಡಿರುವುದಾಗಿ ವರದಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ