ಕೇವಲ 1000 ರೂಪಾಯಿಗೆ ಒಂದು ಬೆಡ್; 650 ಪರಿಸರ ಸ್ನೇಹಿ ಬೆಡ್ ರವಾನೆಗೆ ಡಿಕೆಶಿ ಹಸಿರು ನಿಶಾನೆ


Team Udayavani, Jul 18, 2020, 8:46 PM IST

ಕೇವಲ 1000 ರೂಪಾಯಿಗೆ ಒಂದು ಬೆಡ್; 650 ಪರಿಸರ ಸ್ನೇಹಿ ಬೆಡ್ ರವಾನೆಗೆ ಡಿಕೆಶಿ ಹಸಿರು ನಿಶಾನೆ

ದೊಡ್ಡಬಳ್ಳಾಪುರ : ರಾಜ್ಯದಲ್ಲಿ ಕೋವಿಡ್ ಸೋಂಕು ತೀವ್ರವಾಗಿ ಹರಡುತ್ತಿರುವ ಸಂದರ್ಭದಲ್ಲಿ ಆಸ್ಪತ್ರೆಗಳು ಮತ್ತಿತರ ಕಡೆ ಸೋಂಕಿತರಿಗೆ ಬೆಡ್ ಗಳ ಕೊರತೆ ಉಂಟಾಗಿದ್ದು, ಅವರ ಪ್ರಾಣಕ್ಕೂ ಸಂಚಾರ ಉಂಟಾಗಿದೆ. ಇಂಥ ಸಂಕಷ್ಟ ಸನ್ನಿವೇಶದಲ್ಲಿ ಅತಿ ಕಡಿಮೆ ವೆಚ್ಚ, ಸುಲಭ ಸಾಗಣೆ, 350 ಕೆಜಿಯಷ್ಟು ಭಾರ ತಡೆಯಬಹುದಾದ ಶೇಕಡಾ 100 ರಷ್ಟು ನವೀಕರಿಸಬಹುದಾದ ಪರಿಸರ ಸ್ನೇಹಿ 650 ಬೆಡ್ ಗಳನ್ನು (Corrigated Beds) ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ದೊಡ್ಡಬಳ್ಳಾಪುರದಿಂದ ಕಲ್ಯಾಣ ಕರ್ನಾಟಕಕ್ಕೆ ಸಾಗಣೆ ಮಾಡಲು ಶನಿವಾರ ಹಸಿರು ನಿಶಾನೆ ತೋರಿದರು.

ಹಾಸಿಗೆ, ದಿಂಬು ಎಲ್ಲ ಸೇರಿ ಬೆಡ್ ವೊಂದಕ್ಕೆ ಕೇವಲ 1000 ರುಪಾಯಿಗೂ ಕಡಿಮೆ ವೆಚ್ಚ. ಇಂಥ ಬೆಡ್ ಗಳನ್ನು ಮಾಜಿ ಸಚಿವ, ಶಾಸಕ ಪ್ರಿಯಾಂಕ್ ಖರ್ಗೆ ಅವರು ಗುಲ್ಬರ್ಗಾಕ್ಕೆ 550 ಹಾಗೂ ರಾಯಚೂರಿಗೆಂದು 100 ಒಟ್ಟು 650 ಬೆಡ್ ಗಳನ್ನು ಇಲ್ಲಿನ ವಾಡ್ ಪ್ಯಾಕ್ ಸಂಸ್ಥೆಯಿಂದ ಖರೀದಿಸಿದ್ದು, ಡಿ.ಕೆ. ಶಿವಕುಮಾರ್ ಅವರು ಅವುಗಳನ್ನು ಖುದ್ದು ಪರಿಶೀಲನೆ ಮಾಡಿ ಕಳುಹಿಸಿಕೊಟ್ಟರು. ಮಾಜಿ ಸಚಿವ ಪ್ರಿಯಾಂಕ್ ಖರ್ಗೆ, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್, ಸ್ಥಳೀಯ ಶಾಸಕ ವೆಂಕಟರಮಣ ಈ ಸಂದರ್ಭದಲ್ಲಿ ಹಾಜರಿದ್ದರು.

ಈ ಕುರಿತು ಮಾತನಾಡಿದ ಡಿ. ಕೆ. ಶಿವಕುಮಾರ್ ಈ ಬೆಡ್ ಗಳ ಗುಣಮಟ್ಟವನ್ನು ನಾನು ಖುದ್ದು ಪರಿಶೀಲಿಸಿದ್ದೇನೆ. ಇವುಗಳನ್ನು ಕೇವಲ 5 ನಿಮಿಷದಲ್ಲಿ ಜೋಡಿಸಬಹುದು. ಅದೇ ರೀತಿ 5 ನಿಮಿಷದಲ್ಲಿ ಬಿಚ್ಚಬಹುದು. ಒಂದು ಕಡೆಯಿಂದ ಮತ್ತೊಂದು ಕಡೆಗೆ ಯಾವಾಗ ಬೇಕಾದರೂ ಸಾಗಿಸಬಹುದು. ಎಲ್ಲಕಿಂಥ ಮಿಗಿಲಾಗಿ ಮಡಚಿ ಒಂದೇ ಲಾರಿಯಲ್ಲಿ 650 ಬೆಡ್ ಗಳನ್ನು ಸಾಗಿಸಬಹುದು. ರಾಜ್ಯ ಸರಕಾರ ದಿನವೊಂದಕ್ಕೆ 850 ರುಪಾಯಿ ದರದಲ್ಲಿ ಬಾಡಿಗೆಗೆ ಬೆಡ್ ಗಳನ್ನು ಪಡೆಯಲು ಮುಂದಾಗಿರುವ ಹೊತ್ತಿನಲ್ಲಿ ಕೇವಲ 1000 ರುಪಾಯಿಗೆ ಇದನ್ನು ಖರೀದಿಸಬಹುದಾಗಿರುವುದು ಲಾಭಕರ. ಜತೆಗೆ ಕೋವಿಡ್ ಸೋಂಕಿತರ ದೃಷ್ಟಿಯಿಂದ ಹೆಚ್ಚು ಪ್ರಯೋಜನಕಾರಿ ಎಂದರು.

ರಾಜ್ಯದಲ್ಲಿ ಇದೀಗ ರೋಗ ಲಕ್ಷಣ ಇರುವ ಸೋಂಕಿತರು ಹಾಗೂ ರೋಗ ಲಕ್ಷಣ ಇಲ್ಲದ ಸೋಂಕಿತರು ಎಂಬ ಅವಶ್ಯಕ ವಿಭಜನೆ ಇಲ್ಲದೆ ಎಲ್ಲರೂ ಒಂದೇ ಕಡೆ ದಾಖಲಾಗಿರುವುದರಿಂದ ಆಸ್ಪತ್ರೆಗಳಲ್ಲಿ ಚಿಕಿತ್ಸೆಯ ಒತ್ತಡ ಹೆಚ್ಚಾಗಿದೆ. ಸರಕಾರ ಕೂಡ ಇಲ್ಲಿ ಎಡವಿದೆ. ಇಂಥ ಸಂದರ್ಭದಲ್ಲಿ ಈ ತೆರನ ಹಾಸಿಗೆಗಳನ್ನು ಸ್ಟೇಡಿಯಂ, ಕಲ್ಯಾಣ ಮಂಟಪ, ಬಯಲು ಪ್ರದೇಶ ಆಸ್ಪತ್ರೆಗಳಲ್ಲಿ ವ್ಯವಸ್ಥೆ ಮಾಡುವುದರಿಂದ ರೋಗ ಲಕ್ಷಣ ಇಲ್ಲದವರಿಗೆ ಇಂಥ ಕಡೆ ಚಿಕಿತ್ಸೆ ನೀಡಬಹುದು. ಇದರಿಂದ ಉಸಿರಾಟದ ತೊಂದರೆ ಮತ್ತಿತರ ಗಂಭೀರ ರೋಗ ಲಕ್ಷಣದಿಂದ ನರಳುತ್ತಿರುವವರು ಹಾಗೂ ವಯಸ್ಸಾದ ಸೋಂಕಿತರಿಗೆ ವೆಂಟಿಲೇಟರ್ ಯುಕ್ತ ಆಸ್ಪತ್ರೆಗಳಲ್ಲಿ ಚಿಕಿತ್ಸೆಗೆ ಬಿದ್ದಿರುವ ಒತ್ತಡವನ್ನು ನಿವಾರಿಸಬಹುದಾಗಿದೆ.

ಕಡಿಮೆ ದರದಲ್ಲಿ ಸಿಗುವ ಈ ಬೆಡ್ ಗಳನ್ನು ನಮ್ಮ ಸರ್ಕಾರ ಕೂಡ ಖರೀದಿಸಬಹುದು. ತೆಲಂಗಾಣ ಸರ್ಕಾರ ಈಗಾಗಲೇ 5000ಕ್ಕೂ ಹೆಚ್ಚು ಹಾಸಿಗೆಗಳನ್ನು ಖರೀದಿಸಿದ್ದು, ದೇಹಲಿಯಲ್ಲೂ ಇದೇ ಮಾದರಿ ಹಾಸಿಗೆ ಬಳಸಲಾಗುತ್ತಿದೆ. ತುರ್ತು ಸಂದರ್ಭದಲ್ಲಿ ಬಳಸಲು ಇಂತಹ ಗುಣಮಟ್ಟದ ಹಾಸಿಗೆ ತಯಾರಿಸುತ್ತಿರುವ ವ್ಯಾಡ್ ಪ್ಯಾಕ್ ಸಂಸ್ಥೆಗೆ ರಾಜ್ಯದ ಜನತೆ ಪರವಾಗಿ ಅಭಿನಂದನೆ ಸಲ್ಲಿಸುತ್ತೇನೆ. ನಮ್ಮ ಪಕ್ಷದ ವತಿಯಿಂದ ರಾಜ್ಯ ಸರಕಾರಕ್ಕೂ ಒಂದಷ್ಟು ಹಾಸಿಗೆಗಳನ್ನು ಕೊಡುಗೆ ನೀಡುವ ಯೋಚನೆಯಿದೆ.

ರಾಜ್ಯ ಸರಕಾರ ಕೋವಿಡ್ ಸಲಕರಣೆಗಳ ವಿಚಾರದಲ್ಲಿ ಮಾಡಿರುವ ಭ್ರಷ್ಟಾಚಾರದ ಬಗ್ಗೆ ವಿಧಾನಸಭೆ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯನವರು ಲೆಕ್ಕ ಕೇಳಿದ್ದಾರೆ. ನಾನು ಮಾಧ್ಯಮಗಳಲ್ಲಿ ಬಂದಿರುವ ವರದಿ ಆಧರಿಸಿ ಉತ್ತರ ಕೇಳಿದ್ದೇನೆ. ಸರಕಾರದ ಈ ಅಕ್ರಮ ವಿರುದ್ಧದ ಹೋರಾಟವನ್ನು ಪಕ್ಷದಿಂದ ರಾಜ್ಯಾದ್ಯಂತ ಹಮ್ಮಿಕೊಳ್ಳಲಾಗುವುದು.

ಟಾಪ್ ನ್ಯೂಸ್

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.