ನೆಪಮಾತ್ರದ ಪ್ಯಾಕೇಜ್, ಬಡವರಿಗೆ ನೆರವಾಗುವ ಉದ್ದೇಶವಿಲ್ಲ; ಡಿ.ಕೆ. ಶಿವಕುಮಾರ್ ಆಕ್ರೋಶ


Team Udayavani, May 19, 2021, 2:20 PM IST

ನೆಪಮಾತ್ರದ ಪ್ಯಾಕೇಜ್, ಬಡವರಿಗೆ ನೆರವಾಗುವ ಉದ್ದೇಶವಿಲ್ಲ; ಡಿ.ಕೆ. ಶಿವಕುಮಾರ್ ಆಕ್ರೋಶ

ಬೆಂಗಳೂರು: ಲಾಕ್ ಡೌನ್ ಸಂತ್ರಸ್ತರ ನೆರವಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಘೋಷಿಸಿರುವ 1215 ಕೋಟಿ ರೂಪಾಯಿ ಪ್ಯಾಕೇಜ್ ಕೇವಲ ನೆಪಕ್ಕೆ ಮಾತ್ರ. ಬಡವರಿಗೆ ನೆರವಾಗುವ ಉದ್ದೇಶ ಇದರಲ್ಲಿ ಇಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್  ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಾಧ್ಯಮಗಳಿಗೆ ಬುಧವಾರ ಪ್ರತಿಕ್ರಿಯೆ ನೀಡಿದ ಶಿವಕುಮಾರ್ ಅವರು,‘ಸರ್ಕಾರದ ಕೋವಿಡ್ ಪರಿಸ್ಥಿತಿ ನಿರ್ವಹಣೆ ಬಗ್ಗೆ ನಂಬಿಕೆ ಇಲ್ಲ. ಕಳೆದ ಬಾರಿಯೂ ಇದೇ ರೀತಿ ಪರಿಹಾರ ಘೋಷಿಸಿದ್ದರು. ಚಾಲಕರು, ನೇಕಾರರು, ಸವಿತಾ ಸಮಾಜದವರಿಗೆ ಪೂರ್ಣ ಪ್ರಮಾಣದಲ್ಲಿ ಪರಿಹಾರ ನೀಡಿಲ್ಲ ಎಂದರು.

ಇದನ್ನೂ ಓದಿ :ದಾವಣಗೆರೆ: ಕೋವಿಡ್ ಸೋಂಕಿತೆಯರಿಬ್ಬರು ಕೋವಿಡ್‌ ಕೇಂದ್ರದಿಂದ ಪರಾರಿ

ಬಡವರಿಗೆ ನೆರವಾಗುವ ಇಚ್ಛೆ ಸರಕಾರಕ್ಕೆ ಇರುವುದಾದರೆ ಕನಿಷ್ಠ ತಲಾ 10 ಸಾವಿರ ರುಪಾಯಿ ನೀಡಬೇಕು. ಪರಿಹಾರ ಮೊತ್ತ ವಿತರಣೆ ಜವಾಬ್ದಾರಿಯನ್ನು ಪಂಚಾಯ್ತಿಗೆ ನೀಡಲಿ. ಪಂಚಾಯ್ತಿ ಅವರು, ಪಾಲಿಕೆಯವರು ತಮ್ಮ ವ್ಯಾಪ್ತಿಯಲ್ಲಿರುವ ಸಾಂಪ್ರದಾಯಿಕ ವೃತ್ತಿ ಅವಲಂಬಿತರನ್ನು ಗುರುತಿಸಿ ಚೆಕ್ ಮೂಲಕ ಹಣ ನೀಡಿ ದಾಖಲೆಗೆ ಒಂದು ಫೋಟೋ ತೆಗೆದುಕೊಳ್ಳಲಿ. ನಮ್ಮ ಜನ ಯಾರೂ ಮೋಸ ಮಾಡುವುದಿಲ್ಲ. ಅದು ಬಿಟ್ಟು ಆಪ್ ಅಲ್ಲಿ ನೋಂದಣಿ ಮಾಡಿಸಿ, ಬ್ಯಾಂಕ್ ಮೂಲಕ ಪಾವತಿಸುತ್ತೇವೆ ಅಂದರೆ ಅದಾಗದ ಕೆಲಸ. ಶಿಕ್ಷಕರು, ಪಂಚಾಯ್ತಿ ಅವರನ್ನು ಬಳಸಿಕೊಂಡು ಹಣ ಹಂಚಲಿ. ಇಲ್ಲದಿದ್ದರೆ ಇದು ಕೇವಲ ಕಾಗದದ ಮೇಲಿನ  ಘೋಷಣೆಯಾಗಿ ಉಳಿಯಲಿದೆ ಎಂದು ಹೇಳಿದರು.

ಈ ಪ್ಯಾಕೇಜ್ ಅಲ್ಲಿ ಘೋಷಿಸಿರುವ 2- 3 ಸಾವಿರ ಯಾವುದಕ್ಕೂ ಸಾಲುವುದಿಲ್ಲ. ನಾವು ಒತ್ತಡ ಹಾಕಿದ್ದೇವೆ ಎಂದು ಕಾಟಾಚಾರಕ್ಕೆ ಈ ಪ್ಯಾಕೇಜ್ ಘೋಷಿಸಲಾಗಿದೆ. ಇದು ಜನರ ಹಿತಕ್ಕಾಗಿ ಘೋಷಿಸಿದ ಪ್ಯಾಕೇಜ್ ಅಲ್ಲ. ರೈತರಿಗೆ ಬೆಂಬಲ ಬೆಲೆ ಏನಾದರೂ ಘೋಷಣೆ ಮಾಡಿದ್ದಾರಾ? ಬೆಲೆ ಕುಸಿತದಿಂದ ರೈತ ಕಂಗಾಲಾಗಿದ್ದಾನೆ. ಬ್ಯಾಂಕ್ ಜತೆ ನೇರವಾಗಿ ಮಾತನಾಡಿದ್ದಾರಾ? ಬಡ್ಡಿ ಮನ್ನಾ ಮಾಡಿಸಿದ್ದಾರಾ? ಕಳೆದ ವರ್ಷ ಹೂ ಬೆಳೆಗಾರರಿಗೆ ಘೋಷಿಸಿದ 25 ಸಾವಿರ ರುಪಾಯಿ ಯಾರಿಗೆ ತಲುಪಿದೆ ಲೆಕ್ಕ ಕೊಡಲಿ. ಈಗ ಅದನ್ನು 10 ಸಾವಿರಕ್ಕೆ ಕುಗ್ಗಿಸಿದ್ದಾರೆ ಎಂದು ಪ್ರಶ್ನಿಸಿದರು.

ಇದನ್ನೂ ಓದಿ : ಪಡಿತರ ನೀಡಲು ಸದ್ಯಕ್ಕೆ ಬಯೋಮೆಟ್ರಿಕ್ ಪದ್ಧತಿ ಕೈಬಿಡಿ :  ಎಚ್ಡಿಕೆ

ಯಾರಯ, ಯಾರು ಕೆಲಸ ಕಳೆದುಕೊಂಡಿದ್ದಾರೆ ಎಂಬುದರ ಬಗ್ಗೆ ಸಮೀಕ್ಷೆ ಮಾಡಲಿ. ಕಟ್ಟಡ ಕಾರ್ಮಿಕರಿಗೂ ಇವರು ಕೊಟ್ಟಿರುವುದು ಏನೇನೂ ಸಾಲದು. ಇದು ಬಡವರ ಬಗ್ಗೆ ಚಿಂತಿಸುವ ಸರ್ಕಾರ ಅಲ್ಲ. ನಾವು ಆಗ್ರಹಿಸಿದ್ದಕ್ಕೆ ಒಂದು ಪ್ಯಾಕೇಜ್ ಅಂತ ಘೋಷಿಸಿದ್ದಾರೆ. ಕಳೆದ ವರ್ಷದ ಪ್ಯಾಕೇಜ್ ವಿಫಲವಾಗಿದೆ. ಕಳೆದ ವರ್ಷ 7.5 ಲಕ್ಷ ಚಾಲಕರಲ್ಲಿ ಬರೀ ಒಂದು ಲಕ್ಷದಷ್ಟು ಮಂದಿಗೆ ಮಾತ್ರ ಕೊಟ್ಟಿದ್ದಾರೆ ಎಂದರು.

ಈ ಸರ್ಕಾರ ವಾಸ್ತವಕ್ಕೆ ಇಳಿದು ಕೆಲಸ ಮಾಡಲಿ.ಇಂದಿರಾ ಕ್ಯಾಂಟೀನ್ ನಲ್ಲಿ ಗುರುತಿನ ಚೀಟಿ ಕೊಟ್ಟು ಆಹಾರ ಪಡೆಯಲು ಹೇಳುತ್ತಾರೆ. ಇದು ಸಾಧ್ಯವಾ? ನಾವು ವಿರೋಧಿಸಿದ ನಂತರ ಅದನ್ನು ರದ್ದು ಮಾಡಿದರು. ಈಗ ಮತ್ತೆ ಗುರುತಿನ ಚೀಟಿ ಕೇಳುತ್ತಿದ್ದಾರೆ. ಸರ್ಕಾರದ ನಿರ್ವಹಣೆಯಲ್ಲಿ ನಮಗೆ ಸಮಾಧಾನವೂ ಇಲ್ಲ, ನಂಬಿಕೆಯೂ ಇಲ್ಲ. ಪರಿಹಾರ ನೀಡುವುದಾದರೆ, ಬಹಳ ವ್ಯವಸ್ಥಿತವಾಗಿ ಕೊಡಲಿ ಎಂದು ಸರ್ಕಾರದ ವಿರುದ್ದ ಅಸಮಾಧಾನ ಹೊರಹಾಕಿದರು.

ಅಸಂಘಟಿತ ಕಾರ್ಮಿಕರು, ಹಳ್ಳಿಯಲ್ಲಿ ಕೆಲಸ ಮಾಡುವವರಿಗೆ ಏನೂ ಕೊಟ್ಟಿಲ್ಲ. ಗ್ರಾಮೀಣ ಭಾಗದಲ್ಲಿ ವಾರಿಯರ್ ಆಗಿ ಕೆಲಸ ಮಾಡುತ್ತಿರುವವರು, ವಾಟರ್ ಮನ್, ಲೈನ್ ಮನ್, ಮುನ್ಸಿಪಾಲಿಟಿ ಕಾರ್ಮಿಕರನ್ನು ವಾರಿಯರ್ಸ್ ಎಂದು ಪರಿಗಣಿಸಿ ಅವರಿಗೆ ವಿಮೆ ನೀಡಬೇಕು. ಅವರ ರಕ್ಷಣೆ ನೀಡಬೇಕು. ಒಂದೊಮ್ಮೆ ಅವರು ಮೃತಪಟ್ಟರೆ ಕುಟುಂಬದವರಿಗೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.

ಸರ್ಕಾರ ಹೆಚ್ಚಿನ ಪ್ರಮಾಣದಲ್ಲಿ ಕೋವಿಡ್ ಪರೀಕ್ಷೆ ನಡೆಸಬೇಕು. ಕರ್ನಾಟಕ ರಾಜ್ಯ ಮತ್ತು ಬೆಂಗಳೂರಿನಂತಹ ರಾಜಧಾನಿಯಲ್ಲಿ ಅತಿ ಹೆಚ್ಚು ವೈದ್ಯಕೀಯ ಸಂಸ್ಥೆಗಳು, ಆಸ್ಪತ್ರೆಗಳನ್ನು ಇಟ್ಟುಕೊಂಡು ಪರೀಕ್ಷೆ ನಡೆಸಲು ಆಗುವುದಿಲ್ಲ ಎಂದರೆ ಹೇಗೆ? ಇವರಿಂದ ಸಾಧ್ಯವಿಲ್ಲ ಎನ್ನುವ ಕಾರಣಕ್ಕೇ ಪ್ರಧಾನ ಮಂತ್ರಿಗಳು ಜಿಲ್ಲಾಧಿಕಾರಿಗಳ ಜತೆ ನೇರವಾಗಿ ಸಭೆ ನಡೆಸಿ, ಅವರಿಗೆ ಜವಾಬ್ದಾರಿ ಕೊಟ್ಟಿದ್ದಾರೆ. ಸರ್ಕಾರ ಸಂಪೂರ್ಣವಾಗಿ ವಿಫಲವಾಗಿರುವುದಕ್ಕೆ ಇದೇ ಸಾಕ್ಷಿ. ರಾಜ್ಯ ನಾಯಕತ್ವದ ಬಗ್ಗೆ ಪ್ರಧಾನಿಗಳೂ ನಂಬಿಕೆ ಕಳೆದುಕೊಂಡಿದ್ದಾರೆ.’ ಆಕ್ರೋಶ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.