ಇಸ್ರೋ ಸ್ಥಳಾಂತರ: ಪ್ರಧಾನಿ ಮತ್ತು ಸಿಎಂಗೆ ಡಿಕೆಶಿ ಬರೆದ ಪತ್ರದ ಸಾರಾಂಶ


Team Udayavani, Nov 28, 2021, 1:49 PM IST

dks

ಬೆಂಗಳೂರು : ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಪ್ರಧಾನಿ ನರೇಂದ್ರ ಮೋದಿ ಹಾಗೂ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರವೊಂದನ್ನು ಬರೆದಿದ್ದು, ಅದರ ಪತ್ರದ ಸಾರಾಂಶ ಇಲ್ಲಿದೆ.

ಸನ್ಮಾನ್ಯ ಪ್ರಧಾನಮಂತ್ರಿಗಳಿಗೆ

ಇಸ್ರೋ ಸಂಸ್ಥೆಯ ಮಹತ್ವಾಕಾಂಕ್ಷಿ ಭಾರತೀಯ ಮಾನವಸಹಿತ ಗಗನಯಾನ ಯೋಜನೆಯನ್ನು ಬೆಂಗಳೂರಿನಿಂದ ಗುಜರಾತಿಗೆ ಸ್ಥಳಾಂತರ ಮಾಡುವ ಪ್ರಸ್ತಾಪವನ್ನು ಕೂಡಲೇ ಕೈಬಿಡಬೇಕಾಗಿ ವಿನಂತಿ.

ನಿಮ್ಮ ಬಿಡುವಿಲ್ಲದ ಸಮಯದಲ್ಲೂ ನಮ್ಮ ಮನವಿಯತ್ತ ಗಮನಹರಿಸಿ ಎಂದು ಕೋರುತ್ತೇನೆ. ಕರ್ನಾಟಕ ನಾಡಿನ ಜನರ ಹೆಮ್ಮೆ, ಆತ್ಮಗೌರವಕ್ಕೆ ಸಂಬಂಧಪಟ್ಟ ಯೋಜನೆ ವಿಚಾರವಾಗಿ ನಾನು ಇಂದು ನಿಮ್ಮ ಗಮನ ಸೆಳೆಯುತ್ತಿದ್ದೇನೆ. ಇದು ನನ್ನ ಕರ್ತವ್ಯವೂ ಆಗಿದೆ.

ಹಲವು ದಶಕಗಳಿಂದ ಬೆಂಗಳೂರಿನಲ್ಲಿರುವ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ISRO) ಕೇಂದ್ರ ಕಛೇರಿ ಹಾಗೂ ಇದು ಬಾಹ್ಯಾಕಾಶ ಕ್ಷೇತ್ರದಲ್ಲಿ ಮಾಡಿರುವ ಸಾಧನೆಗೆ ಪ್ರತಿಯೊಬ್ಬ ಕನ್ನಡಿಗರು ಹೆಮ್ಮೆ ಪಡುತ್ತಾರೆ. ನಿಮಗೆ ತಿಳಿದಿರುವಂತೆ 2007ರಿಂದ ಇಸ್ರೋ ‘ಮಾನವಸಹಿತ ಬಾಹ್ಯಾಕಾಶ ಗಗನಯಾನ’ ಯೋಜನೆಗೆ ಬೇಕಾದ ತಂತ್ರಜ್ಞಾನವನ್ನು ಸಿದ್ಧಪಡಿಸಿಕೊಂಡು ಬಂದಿದೆ.

ಇಸ್ರೋ ಸಂಸ್ಥೆ 2023ರಲ್ಲಿ ತನ್ನ ಮೊದಲ ಮಾನವ ಸಹಿತ ಬಾಹ್ಯಾಕಾಶ ಯಾನದ ಜಿಎಸ್ಎಲ್ವಿ ರಾಕೆಟ್ ಉಡಾವಣೆಗೆ ಸಿದ್ಧತೆ ನಡೆಸಿದೆ. ಇದು ಯಶಸ್ವಿಯಾದರೆ ಅಮೆರಿಕಾ, ಚೀನಾ, ಸೋವಿಯತ್ ಯೂನಿಯನ್ ನಂತರ ಈ ಸಾಧನೆ ಮಾಡಿದ ವಿಶ್ವದ ನಾಲ್ಕನೇ ದೇಶ ಭಾರತವಾಗಲಿದೆ.

ಕನ್ನಡಿಗರು ಭಾವನಾತ್ಮಕ ವ್ಯಕ್ತಿಗಳಾಗಿದ್ದು, ಇಂತಹ ರಾಷ್ಟ್ರೀಯ ಕಾರ್ಯಕ್ರಮಗಳ ಆತಿಥ್ಯವನ್ನು ಬಹಳ ಹೆಮ್ಮೆಯಿಂದ ವಹಿಸಿಕೊಳ್ಳುತ್ತಾರೆ. ಅದೇ ರೀತಿ ಈ ಗಗನಯಾನ ಯೋಜನೆ ಬಗ್ಗೆಯೂ ಕನ್ನಡಿಗರು ಭಾವನಾತ್ಮಕ ಸಂಬಂಧ, ಮನಸ್ಥಿತಿ ಇಟ್ಟುಕೊಂಡಿದ್ದಾರೆ.

ಈ ಯೋಜನೆಯನ್ನು ಬೆಂಗಳೂರಿನಿಂದ ಗುಜರಾತಿಗೆ ಸ್ಥಳಾಂತರ ಮಾಡುವ ಪ್ರಯತ್ನ ನಡೆಯುತ್ತಿದೆ ಎಂಬ ಸುದ್ದಿ ಕೇಳಿ ಕನ್ನಡಿಗರು ಬೇಸರಗೊಂಡಿದ್ದಾರೆ. ಈ ಯೋಜನೆ ಸ್ಥಳಾಂತರ ಆಗಿದ್ದೇ ಆದರೆ ದೇಶದ ಒಕ್ಕೂಟ ವ್ಯವಸ್ಥೆಯಲ್ಲಿ ಕೇಂದ್ರ ಸರ್ಕಾರ ಕರ್ನಾಟಕ ರಾಜ್ಯವನ್ನು ಕಡೆಗಣಿಸಿ, ಅದಕ್ಕೆ ದ್ರೋಹ ಬಗೆದು, ಕನ್ನಡಿಗರ ಭಾವನೆಗೆ ಧಕ್ಕೆ ತರುವ ಪ್ರಯತ್ನ ಮಾಡುತ್ತಿದೆ ಎಂದು ಭಾವಿಸಲಾಗುವುದು. ಅಷ್ಟೇ ಅಲ್ಲ, ಇದು ಕನ್ನಡಿಗರ ಸ್ವಾಭಿಮಾನ ಹಾಗೂ ಆತ್ಮಗೌರವಕ್ಕೆ ಧಕ್ಕೆ ತರಲಿದೆ. ಇದು ದೇಶದ ಒಕ್ಕೂಟ ವ್ಯವಸ್ಥೆ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿದೆ. ದೇಶದ ಒಂದು ಭಾಗದ ಜನ ತಮಗೆ ನಿರಂತರವಾಗಿ ಅನ್ಯಾಯವಾಗುತ್ತಿದೆ ಎಂದು ಭಾವಿಸಿದರೆ ಅದು ಭವಿಷ್ಯದಲ್ಲಿ ಗಂಭೀರ ಪರಿಣಾಮ ಬೀರಲಿದೆ.

ಹೀಗಾಗಿ, ನಿಮ್ಮ ಕಾರ್ಯಾಲಯ ಕೂಡಲೇ ಮಧ್ಯಪ್ರವೇಶಿಸಿ ಮಾನವಸಹಿತ ಗಗನಯಾನ ಯೋಜನೆಯನ್ನು ಬೆಂಗಳೂರಿನಿಂದ ಗುಜರಾತಿಗೆ ಸ್ಥಳಾಂತರ ಮಾಡುವ ಪ್ರಯತ್ನವನ್ನು ತಡೆಯಬೇಕು.

ನಿಮ್ಮಿಂದ ಆದಷ್ಟು ಬೇಗ ಸಕಾರಾತ್ಮಕ ಸ್ಪಂದನೆ ವ್ಯಕ್ತವಾಗುವ ನಿರೀಕ್ಷೆಯಲ್ಲಿದ್ದೇವೆ.

ಮಾನ್ಯ ಮುಖ್ಯಮಂತ್ರಿಗಳೇ

ಇಸ್ರೋ ಸಂಸ್ಥೆಯ ಮಹತ್ವಾಕಾಂಕ್ಷಿ ಮಾನವಸಹಿತ ಗಗನಯಾನ ಯೋಜನೆ ನಮ್ಮೆಲ್ಲರ ಹೆಮ್ಮೆ. ಇದು ಕನ್ನಡಿಗರ ಭಾವನೆಯ ವಿಚಾರವಾಗಿದೆ. ಕನ್ನಡಿಗರು ಭಾವನಾತ್ಮಕ ಜನರಾಗಿದ್ದು, ಈ ಯೋಜನೆ ಮೇಲೆ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ.

ಆದರೆ ಈ ಯೋಜನೆಯನ್ನು ಬೆಂಗಳೂರಿನಿಂದ ಗುಜರಾತಿಗೆ ಸ್ಥಳಾಂತರ ಮಾಡುವ ಹುನ್ನಾರದ ವಿಚಾರ ಕೇಳಿ ಕನ್ನಡಿಗರು ದಿಗ್ಭ್ರಾಂತರಾಗಿದ್ದಾರೆ. ಒಕ್ಕೂಟ ವ್ಯವಸ್ಥೆಯಲ್ಲಿ ಕೇಂದ್ರ ಸರ್ಕಾರ ನಿರಂತರವಾಗಿ ಜನರ ಭಾವನೆಗೆ ಧಕ್ಕೆ ತಂದು ಈ ರೀತಿಯ ದ್ರೋಹ ಬಗೆದು, ಮಲತಾಯಿ ಧೋರಣೆ ತಾಳುತ್ತಿದೆ. ಈ ನಡೆಯು ಒಕ್ಕೂಟ ವ್ಯವಸ್ಥೆ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿದೆ.

ಹೀಗಾಗಿ ಇಸ್ರೋ ಯೋಜನೆ ಸ್ಥಳಾಂತರದ ಪ್ರಸ್ತಾವನೆ ಕೈಬಿಡುವಂತೆ ಕೋರಿ ನಾನು ಪ್ರಧಾನಮಂತ್ರಿಗಳಿಗೆ ಪತ್ರ ಬರೆದಿದ್ದು, ಅದರ ಪ್ರತಿಯನ್ನು ತಮಗೂ ಲಗತ್ತಿಸಲಾಗಿದೆ.

ಹೀಗಾಗಿ ಈ ವಿಚಾರದಲ್ಲಿ ತಾವುಗಳು ಪ್ರಧಾನಿಗಳ ಬಳಿಗೆ ರಾಜ್ಯದ ಸಂಸದರ ನಿಯೋಗವನ್ನು ಕರೆದುಕೊಂಡು ಹೋಗಿ, ನಿಮ್ಮ ಕಚೇರಿಯ ಮೂಲಕ ಒತ್ತಡ ಹೇರಿ, ಈ ಮೇಲ್ಕಂಡ ವಿಚಾರದ ಬಗ್ಗೆ ಅವರಿಗೆ ಮನದಟ್ಟು ಮಾಡಿಕೊಡಿ. ಈ ಯೋಜನೆ ಸ್ಥಳಾಂತರ ಪ್ರಸ್ತಾವನೆ ಕೈಬಿಡುವಂತೆ ಮಾಡಿ ಕನ್ನಡಿಗರ ಸ್ವಾಭಿಮಾನ, ಆತ್ಮಗೌರವ ಎತ್ತಿ ಹಿಡಿಯಿರಿ ಎಂದು ನಿಮ್ಮಲ್ಲಿ ಈ ಮೂಲಕ ಮನವಿ ಮಾಡುತ್ತೇನೆ.

ಧನ್ಯವಾದಗಳು.

ಟಾಪ್ ನ್ಯೂಸ್

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

1-eqwewq

Sunil Narine ನಿವೃತ್ತಿ ತೊರೆದು ಟಿ20 ವಿಶ್ವಕಪ್‌ ಆಡಲಿ: ಪೊವೆಲ್‌

IND VS PAK

ಸಮಸ್ಯೆ ಸೌಹಾರ್ದವಾಗಿ ಬಗೆಹರಿಸಿಕೊಳ್ಳಿ: ಭಾರತ, ಪಾಕ್‌ಗೆ ಅಮೆರಿಕ ಸಲಹೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.