ಡಿಕೆಶಿವಕುಮಾರ್ ಅವರೇ, ತಮಿಳುನಾಡಿಗೆ ಪಾದಯಾತ್ರೆ ಮಾಡಿದರೆ ಲಾಭವಾಗಬಹುದು: ಬಿಜೆಪಿ
Team Udayavani, Mar 22, 2022, 12:23 PM IST
ಬೆಂಗಳೂರು: ಮೇಕೆದಾಟು ಯೋಜನೆಯನ್ನು ಜಾರಿಗೊಳಿಸಲು ಬಿಡುವುದಿಲ್ಲ ಎಂದು ತಮಿಳುನಾಡು ಸರ್ಕಾರ ವಿಧಾನಸಭೆಯಲ್ಲಿ ನಿರ್ಣಯ ತೆಗೆದುಕೊಂಡಿದೆ. ತಮ್ಮದೇ ಮೈತ್ರಿ ಪಕ್ಷದ ಸರ್ಕಾರ ತೆಗೆದುಕೊಂಡಿರುವ ನಿರ್ಧಾರದ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಏಕೆ ಮೌನವಾಗಿದ್ದಾರೆ? ತಮಿಳುನಾಡಿಗೆ ಪಾದಯಾತ್ರೆ ಮಾಡುವುದೆಂದು ಎಂದು ಕರ್ನಾಟಕ ಬಿಜೆಪಿ ಪ್ರಶ್ನಿಸಿದೆ.
ಸಾಮಾಜಿಕ ಜಾಲತಾಣದಲ್ಲಿ ಸರಣಿ ಪೋಸ್ಟ್ ಮಾಡಿರುವ ಕರ್ನಾಟಕ ಬಿಜೆಪಿಯು, ರಾಹುಲ್ ಗಾಂಧಿ ತಮಿಳುನಾಡು ಸಿಎಂ ಸ್ಟ್ಯಾಲಿನ್ ಅವರ ಜೊತೆ ಇತ್ತೀಚೆಗೆ ವೇದಿಕೆ ಹಂಚಿಕೊಂಡಿದ್ದರು. ಆದರೆ ಅಧಿಕಾರದ ದಾಹದಲ್ಲಿರುವ ಕಾಂಗ್ರೆಸ್ ನಾಯಕ ರಾಹುಲ್ ಕರ್ನಾಟಕದ ಪರವಾಗಿ ಮಾತನಾಡಲು ಹಿಂಜರಿದರು. ಡಿಕೆಶಿಯವರೇ, ಇಲ್ಲಿ ಪಾದಯಾತ್ರೆ ಮಾಡುವ ಬದಲು ತಮಿಳುನಾಡಿನ ಕಡೆಗೆ ಪಾದ ಬೆಳೆಸಿದ್ದರೆ ಏನಾದರೂ ಲಾಭವಾಗುತ್ತಿತ್ತಲ್ಲವೇ ಎಂದು ಕುಟುಕಿದೆ.
ರಾಜಕೀಯ ಲಾಭಕ್ಕಾಗಿ ಡಿಕೆ ಶಿವಕುಮಾರ್ ಅವರು ಒಂದಲ್ಲ ಎರಡು ಬಾರಿ ಮೇಕೆದಾಟು ಪಾದಯಾತ್ರೆ ಮಾಡಿದ್ದಾರೆ. ಎರಡು ಬಾರಿ ಸುಳ್ಳಿನ ಜಾತ್ರೆ ಮಾಡಿ ಅಭ್ಯಾಸವಿರುವ ಡಿಕೆಶಿ ಅವರಿಗೆ ಮತ್ತೊಂದು ಬಾರಿ ಪಾದಯಾತ್ರೆ ಮಾಡುವುದು ಕಷ್ಟವೇನಿಲ್ಲ. ಮೂರನೇ ಬಾರಿ, ರಾಜ್ಯದ ಹಿತದೃಷ್ಟಿಯಿಂದ ತಮಿಳುನಾಡು ಕಡೆಗೆ ಪಾದಯಾತ್ರೆ ಮಾಡಿ ಎಂದು ಬಿಜೆಪಿ ಪೋಸ್ಟ್ ಮಾಡಿದೆ.
ಇದನ್ನೂ ಓದಿ:ಮೇಕೆದಾಟು ಕುರಿತ ತಮಿಳುನಾಡು ನಿರ್ಣಯಕ್ಕೂ ನಮಗೂ ಸಂಬಂಧವಿಲ್ಲ: ಕುಮಾರಸ್ವಾಮಿ
ಮೇಕೆದಾಟು ಪಾದಯಾತ್ರೆಯ ಮೂಲಕ ಬೆಂಗಳೂರಿನ 15ಕ್ಕೂ ಹೆಚ್ಚು ವಿಧಾನಸಭಾ ಕ್ಷೇತ್ರಗಳಲ್ಲಿ ಪಾದಯಾತ್ರೆ ಮಾಡಿರುವುದಾಗಿ ಡಿಕೆಶಿ ಹೇಳಿದ್ದಾರೆ. ಅದು ನೀರಿಗಾಗಿ ಅಲ್ಲ, ರಾಜಕೀಯ ಲಾಭಕ್ಕಾಗಿ ಎಂಬುದು ಡಿಕೆ ಶಿವಕುಮಾರ್ ಅವರ ಹೇಳಿಕೆಯಲ್ಲೇ ಸ್ಪಷ್ಟವಾಗುತ್ತದೆ. ಹೋಳಿ ಹಬ್ಬ ಮುಗಿದಿದೆ, ಕಾಂಗ್ರೆಸ್ಸಿಗರ ನಿಜ ಬಣ್ಣ ಬಯಲಾಗುತ್ತಿದೆ. ಕುಡಿಯುವ ನೀರಿಗಾಗಿ ರಾಜ್ಯ ಬಿಜೆಪಿ ಸರ್ಕಾರ ಮಾಡುತ್ತಿರುವ ಯೋಜನೆಗೆ ತಮಿಳುನಾಡಿನ ಕಾಂಗ್ರೆಸ್ ಮೈತ್ರಿ ಸರ್ಕಾರ ಅಡ್ಡಗಾಲು ಹಾಕುತ್ತಿದೆ. ಡಿಕೆಶಿ ಅವರಿಗೆ ತಮಿಳುನಾಡು ಸರ್ಕಾರದ ವಿರುದ್ಧ ಧ್ವನಿ ಎತ್ತುವ ತಾಕತ್ತು ಇದೆಯೇ? ನೀರಿನ ರಾಜಕಾರಣ ಮಾಡಿ ಸಿಎಂ ಆಗುತ್ತೇನೆ ಎನ್ನುವ ಭ್ರಮೆಯಿಂದ ಹೊರಗೆ ಬನ್ನಿ ಎಂದು ರಾಜ್ಯ ಬಿಜೆಪಿ ಟೀಕೆ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ