ಡಿಎಂಕೆ ವರಿಷ್ಠ ಎಂಕೆ ಸ್ಟಾಲಿನ್ ತಮಿಳುನಾಡು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ
ವಿಶೇಷ ಯೋಜನೆ ಸೇರಿದಂತೆ ಹಲವು ಖಾತೆಗಳನ್ನು ತಮ್ಮ ಬಳಿ ಇಟ್ಟುಕೊಂಡಿರುವುದಾಗಿ ವರದಿ ಹೇಳಿದೆ.
Team Udayavani, May 7, 2021, 10:51 AM IST
ಚೆನ್ನೈ: ದ್ರಾವಿಡ ಮುನ್ನೇತ್ರಾ ಕಳಗಂ(ಡಿಎಂಕೆ) ಪಕ್ಷದ ವರಿಷ್ಠ ಎಂ.ಕೆ.ಸ್ಟಾಲಿನ್ ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಶುಕ್ರವಾರ (ಮೇ 07) ಪ್ರಮಾಣವಚನ ಸ್ವೀಕರಿಸಿದರು.
ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ಎಂ.ಕೆ.ಸ್ಟಾಲಿನ್ ಗೆ ಗವರ್ನರ್ ಬನ್ವಾರಿಲಾಲ್ ಪುರೋಹಿತ್ ಅವರು ಪ್ರತಿಜ್ಞಾವಿಧಿ ಬೋಧಿಸಿದರು. ಅಲ್ಲದೇ ಈ ಸಂದರ್ಭದಲ್ಲಿ ಪಕ್ಷದ 33 ಮಂದಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿರುವುದಾಗಿ ವರದಿ ತಿಳಿಸಿದೆ.
19 ಮಂದಿ ಮಾಜಿ ಸಚಿವರು ಹಾಗೂ 15 ಮಂದಿ ಹೊಸ ಮುಖಗಳು, ಇಬ್ಬರು ಮಹಿಳೆಯರು ಸೇರಿದಂತೆ 33 ಮಂದಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಸಚಿವರು ಹಾಗೂ ಅವರಿಗೆ ಎಂಕೆ ಸ್ಟಾಲಿನ್ ಅವರು ಹಂಚಿಕೆ ಮಾಡಿದ್ದ ಖಾತೆಗಳಿಗೆ ಗವರ್ನರ್ ಗುರುವಾರ ಅಂಕಿತ ಹಾಕಿದ್ದರು. ಸ್ಟಾಲಿನ್ ಪುತ್ರ ಉದಯನಿಧಿ ಹೆಸರು ಸಚಿವರ ಪಟ್ಟಿಯಲ್ಲಿ ಇಲ್ಲ ಎಂದು ವರದಿ ತಿಳಿಸಿದೆ.
ತಮಿಳುನಾಡು ಚುನಾವಣೆಯಲ್ಲಿ ಡಿಎಂಕೆ ಮತ್ತು ಮೈತ್ರಿಪಕ್ಷಗಳು ಸ್ಪರ್ಧಿಸಿದ್ದು, ಡಿಎಂಕೆ ಮೈತ್ರಿಕೂಟ ಸಂಪೂರ್ಣ ಬಹುಮತ ಪಡೆದಿತ್ತು. ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಗೃಹ, ಸಾಮಾನ್ಯ ಆಡಳಿತ, ವಿಶೇಷ ಯೋಜನೆ ಸೇರಿದಂತೆ ಹಲವು ಖಾತೆಗಳನ್ನು ತಮ್ಮ ಬಳಿ ಇಟ್ಟುಕೊಂಡಿರುವುದಾಗಿ ವರದಿ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
MUST WATCH
ಹೊಸ ಸೇರ್ಪಡೆ
EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ
Kasaragod ವಿವಿಪ್ಯಾಟ್ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ
ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ವ್ಯಂಗ್ಯ
ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ