ಒಕ್ಕೂಟ ವ್ಯವಸ್ಥೆಗೆ ಧಕ್ಕೆ ಆಗದಿರಲಿ; ನೀತಿ ಆಯೋಗದ ಸಭೆಯಲ್ಲಿ ಸಿಎಂಗಳ ಆಗ್ರಹ

ದೀದಿ, ಪಿಣರಾಯಿ, ಪಟ್ನಾಯಕ್‌, ಬಾಘೇಲ್‌ ಮನವಿ

Team Udayavani, Aug 7, 2022, 9:28 PM IST

21-meeting

ನವದೆಹಲಿ: ಕೇಂದ್ರ ಸರ್ಕಾರವು ಸಾಂವಿಧಾನಾತ್ಮಕವಾಗಿ ರಚನೆಯಾಗಿರುವ ಒಕ್ಕೂಟ ವ್ಯವಸ್ಥೆಗೆ ಧಕ್ಕೆಯಾಗುವಂತೆ ನಡೆದುಕೊಳ್ಳಬಾರದು. ಆಯಾ ರಾಜ್ಯಗಳ ಸ್ವಾಯತ್ತತೆ, ಅಭಿಪ್ರಾಯಗಳಿಗೆ ಅಪಚಾರವಾಗದಂತೆ ಕೇಂದ್ರ ಸರ್ಕಾರ ನಡೆದುಕೊಳ್ಳಬೇಕು ಎಂದು ಹಲವು ರಾಜ್ಯಗಳ ಮುಖ್ಯಮಂತ್ರಿಗಳು, ಕೇಂದ್ರ ಸರ್ಕಾರವನ್ನು ಆಗ್ರಹಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಭಾನುವಾರ ನಡೆದ ನೀತಿ ಆಯೋಗದ ಆಡಳಿತ ಮಂಡಳಿಯ 7ನೇ ವಾರ್ಷಿಕ ಸಭೆಯಲ್ಲಿ ಭಾಗವಹಿಸಿದ್ದ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌, ಕೆಲವು ಕಾನೂನು ರಚಿಸುವಾಗ ಅಥವಾ ಕಾನೂನುಗಳನ್ನು ಪರಿಷ್ಕರಣೆಗೊಳಿಸುವಾಗ ರಾಜ್ಯಗಳೊಂದಿಗೆ ಸಮಾಲೋಚನೆ ನಡೆಸಬೇಕು. ಯಾವುದೇ ರಾಜ್ಯದ ಬಗ್ಗೆ ಕಾನೂನು ರೂಪಿಸುವಾಗ ಅಥವಾ ಕಾನೂನು ಜಾರಿಗೊಳಿಸುವಾಗ ಆಯಾ ರಾಜ್ಯದ ಅಭಿಪ್ರಾಯವನ್ನು ಪಡೆಯಬೇಕು ಎಂದು ಆಗ್ರಹಿಸಿದರು.

ಇದೇ ವೇಳೆ, ಕೊರೊನಾದಿಂದ ಆಗಿರುವ ನಷ್ಟದಿಂದ ಕೇರಳ ಇನ್ನೂ ಆರ್ಥಿಕವಾಗಿ ಮೇಲೆದ್ದಿಲ್ಲ. ಹಾಗಾಗಿ, ಕೇರಳ ರಾಜ್ಯಕ್ಕೆ ನಿಗದಿಪಡಿಸಲಾಗಿರುವ ಸಾಲದ ಮಿತಿಯನ್ನು ಹೆಚ್ಚಿಸಬೇಕು ಎಂದು ಅವರು ಆಗ್ರಹಿಸಿದರು.

 ಏಕಪಕ್ಷೀಯ ನಿರ್ಧಾರಗಳು ಬೇಡ: ದೀದಿ

ಇದೇ ಧಾಟಿಯಲ್ಲಿ ಮಾತನಾಡಿದ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, “ರಾಜ್ಯಗಳ ಅಭಿಪ್ರಾಯಗಳನ್ನು ಕೇಳದೆ ಕೇಂದ್ರ ಸರ್ಕಾರ ಯಾವುದೇ ಯೋಜನೆಯನ್ನು, ಕಾನೂನನ್ನು ಏಕಪಕ್ಷೀಯವಾಗಿ ಜಾರಿಗೊಳಿಸಬಾರದು. ಉದಾಹರಣೆಗೆ, ಇತ್ತೀಚೆಗೆ ಜಾರಿಯಾಗಿರುವ ರಾಷ್ಟ್ರೀಯ ಶಿಕ್ಷಣ ನೀತಿಯ ಬಗ್ಗೆ ಎಲ್ಲಾ ರಾಜ್ಯಗಳ ಅಭಿಪ್ರಾಯವನ್ನು ಪಡೆಯಬೇಕಿತ್ತು. ಇನ್ನು ಮುಂದೆ ಕೇಂದ್ರ, ರಾಜ್ಯಗಳ ಸಹಕಾರದಲ್ಲೇ ಕೇಂದ್ರದ ಎಲ್ಲಾ ಯೋಜನೆಗಳು ಜಾರಿಯಾಗಬೇಕು” ಎಂದು ಹೇಳಿದರು.

ಓಂಬುಡ್ಸ್ಮನ್ಬೇಕು: ಪಟ್ನಾಯಕ್ಸಲಹೆ

ಸಭೆಯಲ್ಲಿ ಮಾತನಾಡಿದ ಒಡಿಶಾ ಮುಖ್ಯಮಂತ್ರಿ ನವೀನ್‌ ಪಟ್ನಾಯಕ್‌, ಯೋಜನೆಗಳ ವಿಚಾರದಲ್ಲಿ ಕೇಂದ್ರ ಹಾಗೂ ರಾಜ್ಯಗಳ ನಡುವೆ ಏರ್ಪಡುವ ವಿವಾದವನ್ನು ನೀತಿ ಆಯೋಗ ಕ್ರಮ ಕೈಗೊಳ್ಳಬೇಕು ಎಂದು ಸಲಹೆ ನೀಡಿದ್ದಾರೆ.

ನೀತಿ ಆಯೋಗದ ಸಭೆಯಲ್ಲಿ ಮಾತನಾಡಿದ ಅವರು, ಕೇಂದ್ರದ ಹಲವಾರು ಯೋಜನೆಗಳು ವಿವಾದಕ್ಕೂ ಈಡಾಗಿರುವ ಉದಾಹರಣೆಗಳುಂಟು. ಇಂಥ ಸಮಸ್ಯೆಗಳನ್ನು ಪರಿಹರಿಸಲು ನೀತಿ ಆಯೋಗವು ಓಂಬುಡ್ಸ್‌ಮನ್‌ನಂಥ ವ್ಯವಸ್ಥೆಯೊಂದನ್ನು ಜಾರಿಗೊಳಿಸಬೇಕು ಎಂದರು.

ಹೆಚ್ಚಿನ ಅನುದಾನಕ್ಕೆ ಮನವಿ

ಒಡಿಶಾವು ಪ್ರತಿ ವರ್ಷವೂ ನೈಸರ್ಗಿಕ ಪ್ರಕೋಪಗಳಿಗೆ ಸಿಲುಕಿ ತತ್ತರಿಸುತ್ತದೆ. ಇದರಿಂದ ರಾಜ್ಯ ಸರ್ಕಾರಕ್ಕೆ ಹೊರೆ ಬೀಳುತ್ತಲೇ ಇದ್ದು, ಕೇಂದ್ರದಿಂದ ಹೆಚ್ಚಿನ ಮಟ್ಟದ ಹಣಕಾಸು ನೆರವು ಬೇಕೆಂದು ಆಗ್ರಹಿಸಿದರು.

ಜಿಎಸ್ಟಿ ಪರಿಹಾರ ಅವಧಿ ಹೆಚ್ಚಿಸಿ

ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಅನುಷ್ಠಾನದಿಂದಾಗಿ ರಾಜ್ಯಗಳಿಗೆ ಆಗುತ್ತಿರುವ ನಷ್ಟವನ್ನು ತುಂಬಿಸಲು ಆಯಾ ರಾಜ್ಯಗಳಿಗೆ ನೀಡಲಾಗುವ ಪರಿಹಾರ ಧನ ಹಂಚಿಕೆ ವ್ಯವಸ್ಥೆಯನ್ನು ಮುಂದಿನ ಐದು ವರ್ಷಗಳಿಗೆ ವಿಸ್ತರಿಸಬೇಕೆಂದು ಛತ್ತೀಸ್‌ಗಡ ಮುಖ್ಯಮಂತ್ರಿ ಭೂಪೇಶ್‌ ಬಾಘೇಲ್‌ ಆಗ್ರಹಿಸಿದ್ದಾರೆ. ಇದೇ ವೇಳೆ, ಛತ್ತೀಸ್‌ಗಡದಲ್ಲಿರುವ ಕಲ್ಲಿದ್ದಲು ಹಾಗೂ ಅಪರೂಪದ ಖನಿಜಗಳಿಗೆ ವಿಧಿಸಲಾಗುವ ರಾಯಲ್ಟಿ ಧನವನ್ನು ಹೆಚ್ಚಿಸಬೇಕು ಎಂದು ಮನವಿ ಮಾಡಿದರು.

ಸಭೆಯಲ್ಲಿ ಮಾತನಾಡಿದ ಅವರು, ಜಿಎಸ್‌ಟಿಯಿಂದಾಗಿ ಪ್ರಸಕ್ತ ಹಣಕಾಸು ವರ್ಷ ಮುಗಿಯುವ ಹೊತ್ತಿಗೆ ಛತ್ತೀಸ್‌ಗಡಕ್ಕೆ 5 ಸಾವಿರ ಕೋಟಿ ರೂ. ನಷ್ಟವಾಗುತ್ತದೆ. ಇದನ್ನು ತುಂಬಿಕೊಡುವ ಬಗ್ಗೆ ಕೇಂದ್ರ ಸರ್ಕಾರ ಯಾವುದೇ ಆಶ್ವಾಸನೆ ನೀಡಿಲ್ಲ. ಎಲ್ಲಾ ರಾಜ್ಯಗಳಿಗೂ ಇದೇ ರೀತಿಯ ಸಮಸ್ಯೆ ಇರುವುದರಿಂದ ಜಿಎಸ್‌ಟಿ ನಷ್ಟಕ್ಕಾಗಿ ನೀಡುವ ಪರಿಹಾರ ಧನ ವಿತರಣೆ ಸೌಲಭ್ಯವನ್ನು ಮುಂದಿನ ಐದು ವರ್ಷಗಳವರೆಗೆ ವಿಸ್ತರಿಸಬೇಕು ಎಂದು ಹೇಳಿದರು.

ನೀತಿ ಆಯೋಗದ ಸಭೆಗೆ ನಿತೀಶ್ಗೈರು

ಪ್ರಧಾನಿ ಮೋದಿ ನೇತೃತ್ವದಲ್ಲಿ ನವದೆಹಲಿಯಲ್ಲಿ ಭಾನುವಾರ ನಡೆದ ನೀತಿ ಆಯೋಗದ ಸಭೆಯಲ್ಲಿ ಬಿಹಾರ ಸಿಎಂ ನಿತೀಶ್‌ ಕುಮಾರ್‌ ಭಾಗವಹಿಸಿಲ್ಲ. ಕೊರೊನಾ ಕಾರಣಕ್ಕಾಗಿ ಸಭೆಗೆ ಗೈರುಹಾಜರಾಗಿದ್ದಾರೆ ಎಂದು ಹೇಳಿಕೆ ನೀಡಲಾಗಿದೆ. ಜೂ.17ರ ಬಳಿಕ ನಿತೀಶ್‌ ಕುಮಾರ್‌ ಗೈರುಹಾಜರಾಗುತ್ತಿರುವ ಕೇಂದ್ರ ಸರ್ಕಾರದ ಮಟ್ಟದ ನಾಲ್ಕನೇ ಮಹತ್ವದ ಸಭೆ ಇದಾಗಿದೆ.

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಪ್ರಮಾಣ ಸ್ವೀಕಾರ ಮತ್ತು ಮಾಜಿ ರಾಷ್ಟ್ರಪತಿ ರಾಮನಾಥ ಕೋವಿಂದ್‌ ಅವರಿಗೆ ವಿದಾಯ ಔತಣಕೂಟ, ಕೇಂದ್ರ ಗೃಹ ಸಚಿವ ಅಮಿತ್‌ ಶಾ ಆಯೋಜಿಸಿದ್ದ ಸಭೆಯಿಂದಲೂ ನಿತೀಶ್‌ ದೂರ ಉಳಿದಿದ್ದರು. ಬಿಹಾರ ಬಿಜೆಪಿ ಘಟಕ ಮತ್ತು ಮುಖ್ಯಮಂತ್ರಿ ನಡುವಿನ ಹೆಚ್ಚಿದ ಭಿನ್ನಮತವೇ ಈ ಬೆಳವಣಿಗೆಗೆ ಕಾರಣ ಎಂದು ಹೇಳಲಾಗುತ್ತಿದೆ.

ಟಾಪ್ ನ್ಯೂಸ್

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.