40 ಪರ್ಸೆಂಟ್ ಸರ್ಕಾರ ಎಂಬುದನ್ನು ಒಪ್ಪಿಕೊಳ್ಳುವಿರಾ ?
Team Udayavani, Nov 26, 2022, 6:30 AM IST
ಬೆಂಗಳೂರು: ಇಂಧನ ಇಲಾಖೆಯ ಕಮಿಷನ್ ವ್ಯವಹಾರದ ಬಗ್ಗೆ ಈಗ ಲೋಕಾಯುಕ್ತದಲ್ಲಿ ದೂರು ದಾಖಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ ಈಗಲಾದರೂ ನಿಮ್ಮದು 40 ಪರ್ಸೆಂಟ್ ಸರ್ಕಾರ ಎಂಬುವುದನ್ನು ಒಪ್ಪಿಕೊಳ್ಳುವಿರಾ ಎಂದು ಕಾಂಗ್ರೆಸ್ ಟ್ವಿಟರ್ನಲ್ಲಿ ಕೆಣಕಿದೆ.
ಈ ಬಗ್ಗೆ ಸರಣಿ ಟ್ವಿಟ್ ಮಾಡಿರುವ ಕಾಂಗ್ರೆಸ್ “ಎಲ್ಲಿದೆ ಕಮಿಷನ್, ದಾಖಲೆ ಕೊಡಿ” ಇದು ಕರ್ನಾಟಕ ಬಿಜೆಪಿ ಪಕ್ಷದ ಪಕ್ಷದ ಬಂಡತನದ ಮಾತುಗಳಾಗಿದ್ದವು. ಮಾನ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ ಎಲ್ಲಾ ಕಮಿಷನ್ ಆರೋಪಗಳನ್ನೂ ತನಿಖೆಗೆ ವಹಿಸುವಿರಾ ಎಂದು ಪ್ರಶ್ನಿಸಿದೆ.
ಬಿಜೆಪಿ ರಾಜ್ಯಾಧ್ಯಕ್ಷ ನಳಿಕುಮಾರ್ ಕಟೀಲ್ ವಿರುದ್ದವೂ ವಾಗ್ಧಾಳಿ ನಡೆಸಿರುವ ಕಾಂಗ್ರೆಸ್, ಮಂಗಳೂರಿನ ಸೂರತ್ಕಲ್ ಟೋಲ್ ಗೇಟ್ ಸಂಗ್ರಹ ಕೇಂದ್ರ ರದ್ದಾಗಿದ್ದು ನಮ್ಮ ಮನವಿ ಸ್ಪಂದಿಸಿದ ಕೇಂದ್ರ ಸಚಿವ ಗಡ್ಕರಿ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ನಾಗರಿಕರ ಪರವಾಗಿ ಧನ್ಯವಾದ ಹೇಳಿದ್ದೀರಿ. ಮಾನ್ಯ ಕಟೀಲು ಅವರೇ, ಯಾವುದಕ್ಕೆ ಈ ಧನ್ಯವಾದ. ಜನರಿಗೆ ಮಂಕುಬೂದಿ ಎರಚಲು ಸಹಕರಿಸಿದ್ದಕ್ಕಾ? ದ್ರೋಹ ಎಸಗಿದ್ದಕ್ಕಾ? ಟೋಲ್ ಸಂಗ್ರಹವನ್ನು ನಾಲ್ಕು ಕಿ.ಮಿ ದೂರಕ್ಕೆ ವರ್ಗಾಯಿಸಿದ್ದಕ್ಕಾ ಎಂದು ವಾಗ್ಧಾಳಿ ನಡೆಸಿದೆ.
ಸುರತ್ಕಲ್ ಟೋಲ್ ರದ್ದು ಎನ್ನುವುದು ಬಿಜೆಪಿಯ ಶತಮಾನದ ಜೋಕ್ಸ್ ಎಂದು ಲೇವಡಿ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
MUST WATCH
ಹೊಸ ಸೇರ್ಪಡೆ
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ
Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್ರಾಜ್ ಮೌರ್ಯ
Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ