
ರಾಹುಲ್ ಮದುವೆ ಆಗುವುದಿಲ್ಲ ಯಾಕೆ ಗೊತ್ತಾ?… ; ನಳಿನ್ ಹೇಳಿಕೆ ವೈರಲ್
ಹೇಳಿಕೆ ಬೆಂಬಲಿಸುವುದಿಲ್ಲ ಎಂದ ಸಚಿವ ಡಾ.ಕೆ ಸುಧಾಕರ್
Team Udayavani, Mar 6, 2023, 5:12 PM IST

ಬೆಂಗಳೂರು: ಪಕ್ಷದ ಬಹಿರಂಗ ಸಮಾವೇಶದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಕುರಿತು ನೀಡಿರುವ ಹೇಳಿಕೆ ವಿವಾದಕ್ಕೆ ಮತ್ತು ವಿಪಕ್ಷದ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸದ್ಯ ವಿಡಿಯೋ ವೈರಲ್ ಆಗುತ್ತಿದೆ.
ನಳಿನ್ ಕುಮಾರ್ ಅವರು ಭಾಷಣದ ನಡುವೆ ರಾಹುಲ್ ಗಾಂಧಿ ಮತ್ತು ಸಿದ್ದರಾಮಯ್ಯ ಅವರನ್ನು ಟೀಕಿಸಿದ್ದು, ರಾಹುಲ್ ಗಾಂಧಿ ಮತ್ತು ಸಿದ್ದರಾಮಯ್ಯ ಕೋವಿಡ್ 19 ಲಸಿಕೆ ತೆಗೆದುಕೊಳ್ಳಬೇಡಿ, ತೆಗೆದುಕೊಂಡರೆ ಮಕ್ಕಳಾಗುವುದಿಲ್ಲ ಎಂದರು. ಆದರೆ ಸಿದ್ದರಾಮಯ್ಯ, ರಾಹುಲ್ ಅವರು ಲಸಿಕೆ ತೆಗೆದುಕೊಂಡರು. ಲಸಿಕೆ ತೆಗೆದುಕೊಂಡ ಕಾರಣಕ್ಕೇ ರಾಹುಲ್ ಗಾಂಧಿ ಮದುವೆಯಾಗುತ್ತಿಲ್ಲ ಎಂದು ಎಂಎಲ್ಸಿ ಮಂಜುನಾಥ್ ಅವರು ಹೇಳಿದರು ಎಂದು ಹೇಳಿಕೆ ನೀಡಿದ್ದಾರೆ.
ನಳಿನ್ ಕುಮಾರ್ ಅವರ ಹೇಳಿಕೆಗೆ ಸಾಮಾಜಿಕ ತಾಣದಲ್ಲಿ ಮಾತ್ರವಲ್ಲದೆ ಕಾಂಗ್ರೆಸ್ ವಲಯದಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.
Verbal Diarrhea BJP president @nalinkateel
Rahul asked people not to take Covid19 vaccines saying it would make them infertile, but they secretly took it. Rahul Gandhi is not getting married because he cannot have children”
Where is Indian Media now? pic.twitter.com/1wopqmvudw
— Bole Bharat (@bole_bharat) March 6, 2023
ಸುಧಾಕರ್ ಪ್ರತಿಕ್ರಿಯೆ
ನಮ್ಮ ಪಕ್ಷದ ಅಧ್ಯಕ್ಷರು ಯಾವ ಸಂದರ್ಭದಲ್ಲಿ ಆ ಟೀಕೆ ಮಾಡಿದ್ದಾರೆಂದು ನನಗೆ ಗೊತ್ತಿಲ್ಲ. ಆದರೆ ನಾನು ಈ ಕಾಮೆಂಟ್ನಿಂದ ದೂರವಿರಲು ಬಯಸುತ್ತೇನೆ. ಈ ಹೇಳಿಕೆಯನ್ನು ಬೆಂಬಲಿಸಲು ನಾನು ಬಯಸುವುದಿಲ್ಲ ಎಂದು ಹೇಳಿಕೆಗೆ ಕುರಿತು ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಪ್ರತಿಕ್ರಿಯಿಸಿದ್ದಾರೆ.
I don’t know in what context our president has made that remark but I’d like to keep myself away from this comment and I don’t want to support this comment: Karnataka Minister K Sudhakar on State BJP chief Nalinkumar Kateel’s remarks against Rahul Gandhi over COVID-19 vaccine pic.twitter.com/ozXtC14nr1
— ANI (@ANI) March 6, 2023
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ

MP Election: ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ… ಮೂವರು ಕೆಂದ್ರ ಸಚಿವರು ಕಣಕ್ಕೆ

Hosapete: ಬಸ್ ಪಲ್ಟಿ; 10ಕ್ಕೂ ಹೆಚ್ಚು ಜನರಿಗೆ ಗಾಯ, ಚಾಲಕನ ಸ್ಥಿತಿ ಗಂಭೀರ

UV Fusion: ನಂಬಿಕೆಗಿಂತ ದೊಡ್ಡದು ಬೇರೇನಿಲ್ಲ

Daily Horoscope: ಸಜ್ಜನರ ಸೋಗುಹಾಕಿದ ವಂಚಕರ ಬಗ್ಗೆ ಎಚ್ಚರ, ಉದ್ಯೋಗಸ್ಥರಿಗೆ ಕೈತುಂಬಾ ಕೆಲಸ

KSRTC Bus: ಬಾಗಿಲಿದ್ದರೂ ಮುಚ್ಚುವವರಿಲ್ಲ! ಪ್ರಾಣಕ್ಕೆ ಎರವಾಗುತ್ತಿದೆ ಅಜಾಗರೂಕತೆ