ನೋಟು ವಿನಿಮಯಕ್ಕೆ ದಾಖಲೆ ಅಗತ್ಯವಿಲ್ಲ: SBI ಸ್ಪಷ್ಟನೆ

ಅರ್ಜಿ ತುಂಬಬೇಕಾಗಿಲ್ಲ, ಗುರುತಿನ ಚೀಟಿಯೂ ಬೇಕಾಗಿಲ್ಲ: ನಾಳೆಯಿಂದ ದೇಶಾದ್ಯಂತ ಶುರುವಾಗಲಿದೆ ಪ್ರಕ್ರಿಯೆ

Team Udayavani, May 22, 2023, 7:12 AM IST

money

ನವದೆಹಲಿ: ಎರಡು ಸಾವಿರ ರೂ. ನೋಟುಗಳನ್ನು ವಾಪಸ್‌ ಪಡೆಯುವ ಪ್ರಕ್ರಿಯೆ ಬ್ಯಾಂಕ್‌ ಶಾಖೆಗಳಲ್ಲಿ ಮಂಗಳವಾರ (ಮೇ 23)ದಿಂದ ಶುರುವಾಗಲಿದೆ. ಅದಕ್ಕಾಗಿ ಯಾವುದೇ ಫಾರಂಗಳನ್ನು ಭರ್ತಿ ಮಾಡುವುದು ಅಥವಾ ಗುರುತಿನ ಚೀಟಿ ನೀಡುವ ಅಗತ್ಯವಿಲ್ಲವೆಂದು ಎಸ್‌ಬಿಐ ಭಾನುವಾರ ಪ್ರಕಟಿಸಿದೆ.

2 ಸಾವಿರ ರೂ. ನೋಟು ವಿನಿಮಯ ಮಾಡಲು ಕೋರಿಕೆ ರಸೀತಿ (ರಿಕ್ವಿಸಿಷನ್‌ ಸ್ಲಿಪ್‌), ಗುರುತಿನ ಚೀಟಿ ನೀಡಬೇಕು, ಫಾರಂ ಭರ್ತಿ ಮಾಡಿಕೊಡಬೇಕು ಎಂದು ಹಲವು ಮಾಧ್ಯಮಗಳಲ್ಲಿ ವರದಿಗಳು ಪ್ರಕಟವಾಗಿದ್ದವು. ಈ ಎಲ್ಲಾ ಗೊಂದಲಗಳಿಗೆ ತೆರೆ ಎಳೆಯುವಂತೆ, “ನೋಟು ವಿನಿಮಯ ಕೌಂಟರ್‌ಗಳಲ್ಲಿ ಒಂದು ಬಾರಿಗೆ ಒಬ್ಬರಿಂದ 20 ಸಾವಿರ ರೂ.ವರೆಗೆ ಕೋರಿಕೆ ರಸೀತಿ ಇಲ್ಲದೆ ಸ್ವೀಕರಿಸಬೇಕು’ ಎಂದು ಸ್ಥಳೀಯ ಪ್ರಧಾನ ಕಚೇರಿಗಳಿಗೆ ಕಳುಹಿಸಲಾಗಿರುವ ಸೂಚನೆಯಲ್ಲಿ ಎಸ್‌ಬಿಐ ಮುಖ್ಯ ಜನರಲ್‌ ಮ್ಯಾನೇಜರ್‌ ಸ್ಪಷ್ಟಪಡಿಸಿದ್ದಾರೆ.

ವಿನಿಮಯ ಸಂದರ್ಭದಲ್ಲಿ ಆಧಾರ್‌ ಕಾರ್ಡ್‌ ಸೇರಿದಂತೆ ಯಾವುದೇ ಗುರುತಿನ ಚೀಟಿ ಸಲ್ಲಿಸಬೇಕಾಗಿಲ್ಲ. ಸ್ವಂತ ಖಾತೆಗೆ 2 ಸಾವಿರ ರೂ. ನೋಟುಗಳನ್ನು ಠೇವಣಿ ಇರಿಸಲು ಆರ್‌ಬಿಐ ಮಿತಿ ಹೇರಿಲ್ಲ. ಆದರೆ, ಅಗತ್ಯಕ್ಕೆ ತಕ್ಕಂತೆ “ನಿಮ್ಮ ಗ್ರಾಹಕರನ್ನು ಅರಿಯಿರಿ’ (ಕೆವೈಸಿ) ಪ್ರಕ್ರಿಯೆಗಳನ್ನು ಕೇಳಿದಲ್ಲಿ ನೀಡಬೇಕಾಗುತ್ತದೆ ಎಂದಿದ್ದಾರೆ.

ಶನಿವಾರದಿಂದಲೇ ಶುರು:
ಅಧಿಕೃತವಾಗಿ ಮಂಗಳವಾರದಿಂದ ನೋಟು ವಿನಿಮಯ ಪ್ರಕ್ರಿಯೆ ಆರಂಭವಾಗುವುದಿದ್ದರೂ, ಶನಿವಾರವೇ ದೇಶದ ಕೆಲವು ಭಾಗಗಳಲ್ಲಿ ಬ್ಯಾಂಕ್‌ಗಳ ಶಾಖೆಗಳಿಗೆ ಗ್ರಾಹಕರು ವಿನಿಮಯಕ್ಕಾಗಿ ಆಗಮಿಸಿದ್ದರು. ಕೆಲವು ಮಂದಿ ಕ್ಯಾಶ್‌ ಡೆಪಾಸಿಟ್‌ ಮಷಿನ್‌ಗಳನ್ನು ಬಳಕೆ ಮಾಡಿಕೊಂಡದ್ದೂ ಬೆಳಕಿಗೆ ಬಂದಿದೆ. ಇತರ ಪ್ರಕರಣಗಳಲ್ಲಿ ಸಾರ್ವಜನಿಕರು ಚಿನ್ನಾಭರಣಗಳನ್ನು 2 ಸಾವಿರ ರೂ. ನೋಟುಗಳ ಮೂಲಕ ಖರೀದಿ ಮಾಡಲು ಪ್ರಯತ್ನ ಮಾಡಿದ್ದರು. ಕೆಲವು ಚಿನ್ನಾಭರಣ ಮಳಿಗೆಗಳಲ್ಲಿ 2 ಸಾವಿರ ರೂ. ನೋಟುಗಳನ್ನು ಸ್ವೀಕರಿಸಲು ಒಪ್ಪಿಕೊಳ್ಳಲಿಲ್ಲ ಎಂದು ಹೇಳಲಾಗಿದೆ.

ಮತ್ತೂಮ್ಮೆ ಬರಬಹುದು?
ಒಂದು ಬಾರಿ ವ್ಯಕ್ತಿ 20 ಸಾವಿರ ರೂ.ಗಳನ್ನು ವಿನಿಮಯ ಮಾಡಿಕೊಂಡ ಬಳಿಕ ಅದೇ ವ್ಯಕ್ತಿ ಮತ್ತೂಂದು ಬಾರಿ ಸರತಿಯಲ್ಲಿ ನಿಂತು ನೋಟುಗಳ ವಿನಿಮಯ ಮಾಡಿಕೊಳ್ಳಲು ಅವಕಾಶ ಇದೆ ಎಂದು ಮೂಲಗಳು ತಿಳಿಸಿವೆ..

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.