ನಾಯಿಯ ನಿಷ್ಠೆ ಇಬ್ರಾಹಿಂಗೆ ಇದೆಯಾ?ಭ್ರಷ್ಟಾಚಾರ ಬೆತ್ತಲುಗೊಳಿಸುತ್ತೇನೆ : ಉಗ್ರಪ್ಪ ಕಿಡಿ


Team Udayavani, Feb 16, 2022, 1:08 PM IST

1-asfffa

ಬೆಂಗಳೂರು : ನಾಯಿಗೆ ಇರುವ ನಿಷ್ಠೆ ಇಬ್ರಾಹಿಂಗೆ ಇದೆಯಾ ? ಇವರ ಭ್ರಷ್ಟಾಚಾರವನ್ನ ಬೆತ್ತಲುಗೊಳಿಸುತ್ತೇನೆ, ಎಲ್ಲೇ ಬೇಕಾದರೂ ಆಹ್ವಾನ ನೀಡಲಿ ಬಹಿರಂಗ ಚರ್ಚೆಗೆ ಸಿದ್ಧನಾಗಿದ್ದೇನೆ ಎಂದು ಮಾಜಿ ಸಂಸದ,ಕಾಂಗ್ರೆಸ್ ಹಿರಿಯ ನಾಯಕ ವಿ.ಎಸ್ ಉಗ್ರಪ್ಪ  ಅವರು ಪರಿಷತ್ ಸದಸ್ಯ ಸಿ.ಎಂ ಇಬ್ರಾಹಿಂ ಮೇಲೆ ಬುಧವಾರ ಕಿಡಿ ಕಾರಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ನಾನು ವಾಲ್ಮೀಕಿ ವಂಶದಲ್ಲಿ ಹುಟ್ಟಿದವನು. ನಾನು ಎಂದೂ ಸಂಸ್ಕಾರ ಹೀನಾನಾಗಿ ಮಾತನ್ನಾಡಿಲ್ಲಇಬ್ರಾಹಿಂ ಹಳೆಯ ಸ್ನೇಹಿತರು, ನನ್ನನ್ನ ಕಕ್ಷಿದಾರನೆಂದು ಒಪ್ಪಿಕೊಂಡಿದ್ದಾರೆ. ನನ್ನ ಹೆಸರನ್ನ ವಿನಾಕಾರಣ ಎಳೆದುಕೊಂಡು ಬಂದಿದ್ದಾರೆ. ಇಬ್ರಾಹಿಂ ಸಂಸ್ಕಾರ ಹೀನರಾಗಿದ್ದಾರೆ. ಇಡೀ ಸ್ತ್ರೀಕುಲಕ್ಕೆ ಅಪಮಾನ ಮಾಡಿದ್ದಾರೆ. ವಿಧವೆಯಾದರೆ ಮತ್ತೆ ಮದುವೆಯಾಗಬಾರದು ಎಂಬ ಕಾನೂನು ಇದೆಯಾ ? ವಿಧವೆಯರಿಗೆ ಹೊಸ ಜೀವನ ಕೊಡುವ ಆಶಯ ಇರಬೇಕು. ಅದು ಬಿಟ್ಟು ಹೆಣ್ಣು ಕುಲಕ್ಕೆ ಅಪಮಾನ ಮಾಡುವುದು ಸರಿಯಲ್ಲ ಎಂದು ಕಿಡಿ ಕಾರಿದರು.

ಕೂಡಲೇ ಮಹಿಳೆಯರ ಕ್ಷಮೆಯಾಚಿಸಬೇಕು. ಇಬ್ರಾಹಿಂರನ್ನ ಬೃಹನ್ನಳೆಗೆ ಹೋಲಿಸಿದ ಉಗ್ರಪ್ಪಕರ್ನಾಟಕದಲ್ಲಿ ಯಾರಾದರೂ ಬರೆಹನ್ನಳೆ ಇದ್ದರೆ ಅದು ಇಬ್ರಾಹಿಂ ಮಾತ್ರ. ನನ್ನ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಹೇಳಿದ್ದಾರೆ . ನಾನು ನಲ್ವತ್ತು ವರ್ಷದಿಂದ ವಕೀಲ ವೃತ್ತಿ ಮಾಡುತ್ತಿದ್ದೇನೆ. ಮಾನನಷ್ಟ ಮೊಕದ್ದಮೆ ಹೂಡಲಿ. ಅದನ್ನ ಎದುರಿಸುತ್ತೇನೆ. ಅವರಿಗೆ ಸಿಬಿಐ ಕ್ಲೀನ್ ಚಿಟ್ ಯಾವುದರಲ್ಲಿ ಕೊಟ್ಟಿದೆ
ರೋಲೆಕ್ಸ್ ಪ್ರಕರಣದಲ್ಲಿ ಯಾಕೆ ರಾಜೀನಾಮೆ ನೀಡಿದ್ದರು ? ವಕ್ಫ್ ಬೋರ್ಡ್ ಆಸ್ತಿಯನ್ನ ಕಬಳಿಸಿಲ್ಲವಾ ? ಆ ಜಾಗದಲ್ಲಿ ಕಟ್ಟಿರುವ ಮಳಿಗೆಗಳಿಂದ ಬರುವ ಬಾಡಿಗೆ ಪಡೆಯುತ್ತಿಲ್ಲವಾ ? ಇವರು ಪರಿಷತ್ ನಲ್ಲಿ ಸದಸ್ಯರಾಗಿದ್ದರು. ಯಾವ ಸಮಸ್ಯೆಗಳ ಬಗ್ಗೆ ಹೋರಾಟ ಮಾಡಿದ್ದಾರೆ ಅನ್ನೋದನ್ನ ಹೇಳಲಿ ನೋಡೋಣ. ನಾನು ಅಕ್ರಮ ಗಣಿಗಾರಿಕೆ ಸಂಬಂಧ ವರದಿಯನ್ನ ಕೊಟ್ಟಿದ್ದೇನೆ. ಅಂಗನವಾಡಿಯ ಅಕ್ರಮದ ವರದಿಯನ್ನೂ ಕೊಟ್ಟಿದ್ದೇನೆ. ಭ್ರಷ್ಟಾಚಾರದ ವಿರುದ್ಧ ನಿರಂತರ ಹೋರಾಟ ಮಾಡಿಕೊಂಡು ಬಂದಿದ್ದೇನೆ. ಅವರು ಹಾಕುವ ಮಾನನಷ್ಟ ಮೊಕದ್ದಮೆಯನ್ನ ಎದುರಿಸಲು ಎಲ್ಲಾ ರೀತಿಯ ಸಿದ್ಧತೆ ನಡೆಸಿದ್ದೇನೆ ಎಂದು ಕಿಡಿ ಕಾರಿದ್ದಾರೆ.

ಕಾಂಗ್ರೆಸ್ ಮೇಲೆ ಗೂಬೆ ಕೂರಿಸುವ ಪ್ರಯತ್ನ ನಡೆಯುತ್ತಿದೆ. ಕಾಂಗ್ರೆಸ್ ಸಂವಿಧಾನದ ಮೇಲೆ ವಿಶ್ವಾಸವನ್ನ ಇಟ್ಟಿದೆ. ಸಮಾಜದ ಎಲ್ಲಾ ವರ್ಗದ ಜನರ ಅಭಿವೃದ್ಧಿ ಬಯಸುವ ಪಕ್ಷ ಆದರೆ, ಬಿಜೆಪಿ ಶ್ರೀರಾಮನ ಹೆಸರಿನಲ್ಲಿ ಸಮಾಜವನ್ನ ಒಡೆಯುವ ಪ್ರಯತ್ನ ಮಾಡಿದೆ. ರಾಜ್ಯದಲ್ಲಿ ದತ್ತಪೀಠದ ಹೆಸರಿನಲ್ಲೂ ರಾಜಕೀಯ ನಡೆಸುತ್ತಿದೆ. ಕೇಂದ್ರ, ರಾಜ್ಯ ಸರ್ಕಾರ ಸತ್ತು ಹೋಗಿದೆಯಾ ? ಗುಪ್ತಚರ ಇಲಾಖೆ ಏನು ಮಾಡುತ್ತಿದೆ. ಹಿಜಾಬ್ ಸಂಬಂಧ ಉಂಟಾದ ಗೊಂದಲದ ಬಗ್ಗೆ ಮಾಹಿತಿ ಇರಲಿಲ್ಲವಾ ? ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

ಟಾಪ್ ನ್ಯೂಸ್

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Election Commission: ಪ್ರಿಯಾಂಕ್‌ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು

Election Commission: ಪ್ರಿಯಾಂಕ್‌ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು

Congress party: ಮಾಲೀಕಯ್ಯ ಗುತ್ತೇದಾರ್‌ ಇಂದು ಕಾಂಗ್ರೆಸ್‌ ಸೇರ್ಪಡೆ

Congress party: ಮಾಲೀಕಯ್ಯ ಗುತ್ತೇದಾರ್‌ ಇಂದು ಕಾಂಗ್ರೆಸ್‌ ಸೇರ್ಪಡೆ

Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.