ಪೊಲೀಸರಿಗೆ ಕೆಲಸ ಕೊಡುವ ರೀತಿ ಮಾಡಬೇಡಿ : ಗೃಹ ಸಚಿವರ ಎಚ್ಚರಿಕೆ
ಆ್ಯಂಬುಲೆನ್ಸ್ ಗಳು ಕ್ಯೂ ನಿಲ್ಲುವುದು ಬೇಡ...
Team Udayavani, Dec 31, 2021, 2:56 PM IST
ಬೆಂಗಳೂರು : ಇವತ್ತು ಬೆಂಗಳೂರು ನಗರದಲ್ಲಿ 6 ಗಂಟೆಯಿಂದಲೇ ನಿರ್ಭಂದ ಇದೆ, ಹೆಚ್ಚು ಜನ ಸೇರಬಾರದು 10 ಗಂಟೆಯಿಂದ ನೈಟ್ ಕರ್ಫ್ಯೂ ಇದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿ, ಎಂಟು ರಾಜ್ಯಗಳಲ್ಲಿ ಕೊರೊನಾ ಸ್ಪೋಟವಾಗಿದೆ. ನಮ್ಮ ರಾಜ್ಯದಲ್ಲೂ ಕೊರೊನಾ ಹರಡುತ್ತಿದೆ. ಹೀಗಾಗಿ ಸರ್ಕಾರ ಕೆಲ ನಿರ್ಭಂದಗಳನ್ನ ಹಾಕಿದೆ. ನಿರ್ಬಂಧಗಳನ್ನ ಹಾಕಬೇಕು ಎಂದು ಕೇಂದ್ರ ಸರ್ಕಾರ ಸೂಚಿಸಿದೆ. ಜನರು ಇದಕ್ಕೆ ಸಹಕರಿಸಬೇಕು. ಅವರವರ ಮನೆಯಲ್ಲೇ ಸೆಲೆಬ್ರೇಶನ್ ಮಾಡಬೇಕು. ಗುಂಪುಗೂಡಿ ಸೆಲೆಬ್ರೇಶನ್ ಮಾಡಬಾರದು. ಪೊಲೀಸರಿಗೆ ಕೆಲಸ ಕೊಡುವ ರೀತಿ ಮಾಡಬೇಡಿ. ದಯವಿಟ್ಟು ಸಾರ್ವಜನಿಕರು ಸಹಕರಿಸಿ ಎಂದರು.
ಹೋಟೆಲ್, ಪಬ್, ರೆಸ್ಟೋರೆಂಟ್ ಮಾಲೀಕರಿಗೆ ಆರ್ಥಿಕ ನಷ್ಟ ವಿಚಾರಕ್ಕೆ ಪ್ರತಿಕ್ರಿಯಿಸಿ, ಈ ನಿರ್ಬಂಧಗಳನ್ನ ಹಾಕಲು ನಮಗೆ ಸಂತೋಷವಿಲ್ಲ ನಮಗೆ ನೋವಿದೆ. ಹೋಟೆಲ್ ಪಬ್ ಅವರವರ ವ್ಯಾಪರ ಮಾಡುತ್ತಿದ್ದಾರೆ. ಆದರೆ ಸದ್ಯ ಬದುಕು ಮುಖ್ಯ. ನಾವೂ ಈಗಾಗಲೇ ಸ್ಮಶಾನದಲ್ಲಿ ಆ್ಯಂಬುಲೆನ್ಸ್ ಗಳು ಕ್ಯೂ ನಿಲ್ಲುತ್ತಿದ್ದುದನ್ನ ನೋಡಿದ್ದೇವೆ. ಮಾಧ್ಯಮಗಳಲ್ಲಿ ಅದನ್ನ ನೋಡುವಾಗ ತುಂಬಾ ನೋವಾಗಿದೆ. ಅದು ಆಗಬಾರದು ಅಂತಾ ಈ ರೀತಿ ನಿರ್ಬಂಧ ಮಾಡುತ್ತಿದ್ದೇವೆ. ರಾಜ್ಯದ ಎಲ್ಕಾ ಕಡೆ ಇದೆ ಅನ್ವಯಯಾಗಲಿದೆ. ಕರಾವಳಿ ಭಾಗದಲ್ಲೂ ಇದು ಅನ್ವಯವಾಗಲಿದೆ ಎಂದರು.
ಕಾಂಗ್ರೆಸ್ ಪಾದಯಾತ್ರೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಪಾದಯಾತ್ರೆಯಿಂದ ಏನೂ ಆಗುವುದಿಲ್ಲ. ಆರೂವರೆ ವರ್ಷ ಕಾಂಗ್ರೆಸ್ ಅಧಿಕಾರದಲ್ಲಿ ಇತ್ತು ಆಗ ಅವರು ಏನೂ ಮಾಡಲಿಲ್ಲ. ಪಾದಯಾತ್ರೆಯ ಸ್ಟಂಟ್ ನಿಂದ ಚುನಾವಣೆ ಗೆಲ್ಲಲಾಗುವುದಿಲ್ಲ. ಪಾದಯಾತ್ರೆಯಿಂದ ಚುನಾವಣೆ ಗೆಲ್ಲುತ್ತೇವೆ ಅನ್ನುವುದು ಅವರ ಭ್ರಮೆ. ಪಾದಯಾತ್ರೆಗೆ ಅನುಮತಿ ಕೊಡುವ ಬಗ್ಗೆ ನಿರ್ಧಾರ ತಗೆದುಕೊಳ್ಳುತ್ತೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
Congress ಅಭ್ಯರ್ಥಿ ಡಿ.ಕೆ. ಸುರೇಶ್ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ
Congress ವಿರುದ್ಧ ಬಿಜೆಪಿ ಕ್ಯೂಆರ್ ಕೋಡ್ ಸಮರ
OBC ವರ್ಗಕ್ಕೆ ಕಾಂಗ್ರೆಸ್ನಿಂದ ಅನ್ಯಾಯ: ಸುನಿಲ್ ಕುಮಾರ್
Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ
MUST WATCH
ಹೊಸ ಸೇರ್ಪಡೆ
ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ