ಹಸಿದು ಒದ್ದಾಡುತ್ತಿರುವ ಕಾಂಗ್ರೆಸ್‌ಗೆ ಅಧಿಕಾರ ನೀಡಬೇಡಿ : ತೇಜಸ್ವಿ ಸೂರ್ಯ

ಇನ್ನೊಬ್ಬರ ತೆಲೆ ಮೇಲೆ ಬಾಟಲ್ ಹೊಡೆದು ಶಾಸಕರಗಿಲ್ಲ ಬಿಜೆಪಿ ನಾಯಕರು, ಶಾಸಕ ಗಣೇಶ್ ವಿರುದ್ದ ಕಿಡಿ

Team Udayavani, Mar 21, 2023, 12:54 AM IST

r ashok 1

ಕುರುಗೋಡು: ರಾಜ್ಯದಲ್ಲಿ ಹಸಿದು ಒದ್ದಾಡುವ ಸ್ಥಿತಿ ಕಾಂಗ್ರೆಸ್‌ಗೆ ಬಂದಿದ್ದು, ಇಂತಹ ಕಾಂಗ್ರೆಸ್‌ ಅಧಿಕಾರ ಕೊಟ್ಟರೆ ರಾಜ್ಯವನ್ನೇ ತಿಂದು ತೇಗಲಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಯುವ ಘಟಕ ಅಧ್ಯಕ್ಷ ಸಂಸದ ತೇಜಸ್ವಿ ಸೂರ್ಯ ಗುಡುಗಿದರು.

ಪಟ್ಟಣದ ಜಯದೇವ ಪೆಟ್ರೋಲ್ ಬಂಕ್ ಬಳಿಯಲ್ಲಿರುವ ಆವರಣದಲ್ಲಿ ಮಾಜಿ ಶಾಸಕ ಟಿ.ಎಚ್.ಸುರೇಶ್ ಬಾಬು ನೇತೃತ್ವದಲ್ಲಿ ಮಂಗಳವಾರ ಸಂಜೆ ಹಮ್ಮಿಕೊಂಡಿದ್ದ ಯುವ ಚೈತನ್ಯ ಸಮಾವೇಶ ಉದ್ಘಾಟಿಸಿದ ನಂತರ ಜನರನ್ನುದ್ದೇಶಿಸಿ ಮಾತನಾಡಿ, ಬಡ ಜನರ ಆರೋಗ್ಯದ ದೃಷ್ಟಿಯಿಂದ ನಮ್ಮ ಕ್ಷೇತ್ರದಲ್ಲಿ ಉಚಿತ ಡಯಾಲಿಸಸ್ ಕೇಂದ್ರಗಳನ್ನು ಸ್ಥಾಪಿಸಿ, ಅವಕಾಶ ಮಾಡಿಕೊಟ್ಟಿರುವೆ. ನರೇಂದ್ರ ಮೋದಿ ಸರ್ಕಾರದ ಯೋಜನೆಗಳು ಡಬಲ್ ಇಂಜಿನ್ ಭಾಗ್ಯದ ಕರ್ನಾಟಕದ ಹಳ್ಳಿ ಹಳ್ಳಿಯ ಜನತೆಗೆ ನೇರವಾಗಿ ತಲುಪುತ್ತಿವೆ.

ಡಬಲ್ ಇಂಜಿನ್ ಯಿಂದ ಕೇಂದ್ರ ಮತ್ತು ರಾಜ್ಯ ಯೋಜನೆಗಳು ರಾಜ್ಯದ ಜನತೆಗೆ ಮುಟ್ಟುತ್ತಿವೆ. ಗಂಗಾವತಿಯಲ್ಲಿ ಆಯುಷ್ಮಾನ್ ಭಾರತ್ ಯೋಜನೆಯಿಂದ 24500 ಜನಕ್ಕೆ 10 ಕೋಟಿಯಷ್ಟು ಉಪಯೋಗವಾಗಿದೆ. ಕಂಪ್ಲಿ ಕ್ಷೇತ್ರದಲ್ಲಿ ಶಾಸಕರು ಇದ್ದರೂ ಏಕೆ? ಆಗಿಲ್ಲಾ ಎಂಬ ಪ್ರಶ್ನೆಯನ್ನು ಸ್ಥಳೀಯ ಶಾಸಕರಿಗೆ ಹಾಕಿದರು. ಜಲಜೀವನ್ ಯೋಜನೆಯಿಂದ 33 ಸಾವಿರದ ಮನೆಗೆ ಪೈಪ್ನಲ್ಲಿ ನೀರು ಬರುತ್ತಿದೆ. ಕಂಪ್ಲಿ ಕ್ಷೇತ್ರದಲ್ಲಿ ಯಾಕೆ ಈ ಯೋಜನೆ ಬರುತ್ತಿಲ್ಲ. ಕಂಪ್ಲಿಯ ನಾಲಾಯಕ್ ಶಾಸಕರಿಗೆ ಕೇಳಬೇಕಾಗಿದೆ.

ಯುವಕರಿಗೆ ಗ್ಯಾರಂಟಿ ಎಂದು ಹೇಳುವ ರಾಹುಲ್ ಗಾಂಧಿಯವರ ಮಾತು ಕೇಳಿದರೆ, ಯುವಕನ ಆಶೋತ್ತರಗಳಿಂದ ಎಷ್ಟು ದೂರ ಉಳಿದಿದೆ ಎಂಬುದು ತಿಳಿಯುತ್ತದೆ. ಯುವಕರ ಸಂಬಳದ ಮಹತ್ವ ರಾಹುಲ್ ಗಾಂಧಿಗೇನು ಗೊತ್ತು. ರಾಹುಲ್ ಗಾಂಧಿ ಎಲ್ಲಿ ಕೆಲಸ ಮಾಡಿಲ್ಲ. ತಾಯಿಯ ಪಾಕೀಟ್ ಮನಿಯಿಂದ ರಾಹುಲ್ ಬದುಕುತ್ತಿದ್ದು, ಯುವಕರ ಸಂಕಷ್ಟವೇನು ಗೊತ್ತು. ಹಣ ಕೇಳುವುದು ಕಾಂಗ್ರೆಸ್ ಪದ್ದತಿಯಾಗಿದೆ.

ಯುವಕರಿಗೆ ಮುದ್ರಾ ಯೋಜನೆಯಲ್ಲಿ ಸಾಲ ಕೊಡುತ್ತಿದ್ದಾರೆ ನರೇಂದ್ರ ಮೋದಿಯವರು. ವಿದ್ಯಾ ನಿಧಿಯೊಂದಿಗೆ 10 ಲಕ್ಷ ವಿದ್ಯಾ ನಿಧಿ ನೀಡಲಾಗಿದೆ. ಕರ್ನಾಟಕದಲ್ಲಿ ಬಿಜೆಪಿ ಪರ್ವವಿದೆ. ಬರುವ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಬಹುಮತದೊಂದಿಗೆ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ. ಸುಳ್ಳು ಸುಳ್ಳು ಲಾಜಿಕ್ ನೊಂದಿಗೆ ಜನರಿಂದ ಕಾಂಗ್ರೆಸ್ ದೂರವಾಗಿದೆ. ದೇಶದ ಮೂಲೆ ಮೂಲೆಯಲ್ಲಿ ಬಿಜೆಪಿ ಹವಾವಿದೆ. ಕರ್ನಾಟಕದಲ್ಲಿ ಬಿಜೆಪಿ ಪಕ್ಷ ಅಧಿಕಾರ ಬರುವುದು ಸಂಶಯವಿಲ್ಲ. ಹಸಿದು ಒದ್ದಾಡುವ ಸ್ಥಿತಿ ಕಾಂಗ್ರೆಸ್ಗೆ ಬಂದಿದ್ದು, ಅಧಿಕಾರ ಸಿಕ್ಕರೆ ಕರ್ನಾಟಕವನ್ನೇ ಗುಡಿಸಿ ಗುಂಡಾಂತರ ಮಾಡಲಿದ್ದಾರೆ. ಹಾಗಾಗಿ ಕಾಂಗ್ರೆಸ್ ಅಧಿಕಾರ ನೀಡಬಾರದು. ಕಾಂಗ್ರೆಸ್ನಲ್ಲಿ ಅರ್ಜಿಗೆ 2 ಲಕ್ಷ ಬಿಡುತ್ತಿಲ್ಲ.

ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ, ಕೊಳ್ಳೆ ಹೊಡೆಯಲಿದ್ದಾರೆ. ಬರುವ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳಿಗೆ ಮತ ನೀಡುವ ಮೂಲಕ ಕ್ಷೇತ್ರದ ಅಭಿವೃದ್ಧಿಗೆ ಕೈಜೋಡಿಸಬೇಕು. ಕಮಿಷನ್ ಶಾಸಕನನ್ನು ಕಂಪ್ಲಿ ಕ್ಷೇತ್ರದಿಂದ ತೊಲಗಿಸಲು ಸಂಕಲ್ಪ ಮಾಡಬೇಕು ಎಂದರು.

ಮಾಜಿ ಶಾಸಕ ಟಿ.ಎಚ್.ಸುರೇಶ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಮೊದಲ ಬಾರಿಗೆ ಬಳ್ಳಾರಿ ಜಿಲ್ಲೆಯ ಕಂಪ್ಲಿಗೆ ಬಂದಿದ್ದಾರೆ. ಇಡೀ ದೇಶದಲ್ಲಿ ಯುವಕರಿಗೆ ಶಕ್ತಿ ತುಂಬುತ್ತಿದ್ದಾರೆ. ಯುವಕರನ್ನು ಬೆಳೆಸುವ ಪಾರ್ಟಿ ಬಿಜೆಪಿಯಾಗಿದೆ. ಯುವಕರಿಗೆ ಬಿಜೆಪಿ ಹೆಚ್ಚಿನ ಆಧ್ಯತೆ ನೀಡಿದೆ. ಕಂಪ್ಲಿ ಕ್ಷೇತ್ರಕ್ಕೆ ಕೋಟ್ಯಾಂತರ ಅನುದಾನ ಕೊಟ್ಟಿರುವಂತಹ ಸರ್ಕಾರ ಬಿಜೆಪಿಯಾಗಿದೆ. ಕೇವಲ ಒಂದು ತಿಂಗಳು ಇದೆ. ಈಗಾಗಲೇ ಕಾಂಗ್ರೆಸ್ಗೆ ನಡುಕ ಹುಟ್ಟಿದೆ. ಬಿಜೆಪಿ ಜನರ ಮನಸ್ಸಿನಲ್ಲಿದೆ. ಕೆಲವರು ಬಿಜೆಪಿ ಪಕ್ಷದ ಬ್ಯಾನರ್ಗಳನ್ನು ತೆಗೆಸುವ ಕೆಲಸ ಮಾಡುತ್ತಿದ್ದಾರೆ.

ರಾಷ್ಟ್ರೀಯ ಅಧ್ಯಕ್ಷರು ಕಂಪ್ಲಿಗೆ ಬಂದಿದ್ದರಿಂದ ಯುವಕರಲ್ಲಿ ಉತ್ಸವ, ಹುಮ್ಮಸ್ಸು ಬಂದಿದೆ. ಕಾಂಗ್ರೆಸ್ ಪಾರ್ಟಿಗೆ ಗ್ಯಾರಂಟಿ ಇಲ್ಲ. ಗ್ಯಾರಂಟಿ ಕಾರ್ಡ್ ಕೊಡುತ್ತಿದ್ದಾರೆ. ಕಾಂಗ್ರೆಸ್ ನವರು ಅಧಿಕಾರ ಹಿಡಿಯುವ ಹುಚ್ಚುತನ ಕಾಣುತ್ತಿದ್ದಾರೆ.

ನಮ್ಮ ಎರಡು ಅವಧಿಯಲ್ಲಿ ಸಾಕಷ್ಟು ಅನುದಾನ ತಂದು ಕಂಪ್ಲಿ ಕ್ಷೇತ್ರವನ್ನು ಅಭಿವೃದ್ಧಿಪಡಿಸಿರುವೆ. ಕಂಪ್ಲಿ ಮತ್ತು ಕುರುಗೋಡು ತಾಲೂಕು ಮಾಡಿದೆ ಕೀರ್ತಿ ಬಿಜೆಪಿಯಾಗಿದೆ. ಹಾಲಿ ಶಾಸಕರು ನಾನು ಅನುದಾನ ತಂದಿದ್ದೇನೆ ಎಂದು ಜಂಬಕೊಚ್ಚಿಕೊಳ್ಳುತ್ತಿದ್ದಾರೆ. ಆದರೆ, ಬಿಜೆಪಿ ಸರ್ಕಾರದಿಂದ ಹಾಗೂ ಸಚಿವ ಬಿ.ಶ್ರೀರಾಮುಲು ಅವರು ಕೊಟ್ಟಂತಹ ಅನುದಾನದಿಂದ ಕಂಪ್ಲಿ ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸಗಳು ಆಗುತ್ತಿವೆ. ಕಂಪ್ಲಿ ಕ್ಷೇತ್ರವನ್ನು ಕಮಿಷನ್ ಕ್ಷೇತ್ರವನ್ನಾಗಿ ಮಾಡಿದ್ದಾರೆ.

ಕಂಪ್ಲಿ ಕ್ಷೇತ್ರದಲ್ಲಿ ಕಾರ್ಯಕರ್ತರು ಒಗ್ಗಟ್ಟಾಗಿ ಬಿಜೆಪಿ ಪಕ್ಷವನ್ನು ಗೆಲ್ಲಿಸಬೇಕು. ಚುನಾವಣೆಯನ್ನು ಒಗ್ಗಟ್ಟಿನಿಂದ ಎದುರಿಸೋಣ. ಅಧಿಕಾರ ಇಲ್ಲದಿಂದದ್ದರೂ ಕಂಪ್ಲಿ ಕ್ಷೇತ್ರದ ಜನರ ಸಂಪರ್ಕದಲ್ಲಿರುವೆ. ಈ ಬಾರಿ ಚುನಾವಣೆಯಲ್ಲಿ ಕಂಪ್ಲಿ ಕ್ಷೇತ್ರದಲ್ಲಿ ಬಿಜೆಪಿ ಬಾವುಟ ಹಾರಿಸಬೇಕು. ಕಂಪ್ಲಿ ಕ್ಷೇತ್ರದಲ್ಲಿ ದೌರ್ಜನ್ಯ ನಡೆಯುತ್ತಿದೆ. ಹತ್ತು ವರ್ಷದ ವೈಭವವನ್ನು ಮತ್ತೇ ಮರುಕಳಿಸಬೇಕು. ಸಿಎಂ ಅವರು ನೂರು ಹಾಸಿಗೆ ಆಸ್ಪತ್ರೆ ಕಾಮಗಾರಿಗೆ ಅಡಿಗಲ್ಲು ಭೂಮಿ ಪೂಜೆ ಸಲ್ಲಿಸಿದರೂ, ಕಮಿಷನ್ ಗಾಗಿ ಮತ್ತೇ ಭೂಮಿ ಪೂಜೆಯನ್ನು ಹಾಲಿ ಶಾಸಕರು ಮಾಡುತ್ತಿದ್ದಾರೆ.

ಗ್ಯಾರಂಟಿ ಕಾರ್ಡಿನಿಂದ ಜನತೆಗೆ ಮಂಕುಬೂದಿ ಹಚ್ಚುವ ಕೆಲಸಕ್ಕೆ ಕೈಯಾಕಿದ್ದಾರೆ. ಕಾಂಗ್ರೆಸ್ ಸಿಎಂ ಪಟ್ಟಕ್ಕಾಗಿ ಜಟಾಪಾಟಿ ನಡೆದಿದೆ. ಹಾಲಿ ಶಾಸಕರಿಗೆ ಗೆಲ್ಲುವುದಕ್ಕೆ ಒಬ್ಬರು ಬೇಕು, ಈಗ ಟಿಕೆಟ್ ಗಾಗಿ ಮತ್ತೊಬ್ಬರು ಬೇಕಾಗಿದ್ದಾರೆ. ಶಿಸ್ತಿನ ಸಿಪಾಯಿ ಬಿಜೆಪಿ ಪಕ್ಷವಾಗಿದೆ. ಹಿಂದಿನ ಚುನಾವಣೆಯಲ್ಲಿ ಕೆಲವೊಂದು ತಪ್ಪಿನಿಂದಾಗಿ ಅಧಿಕಾರ ತಪ್ಪಿದೆ. ನಿಷ್ಠಾವಂತ ಕಾರ್ಯಕರ್ತರಿಗೆ ಒಳ್ಳೆಯ ಸ್ಥಾನಮಾನಗಳಿವೆ. ಮನೆ ಮಗನಂತೆ ಜನರು ಕಾಣುತ್ತಿದ್ದಾರೆ. ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಪಕ್ಷವನ್ನು ಗೆಲ್ಲಿಸಿ ತರುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದರು.

ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಮುರಾಹರಿಗೌಡ, ನಿಗಮ ಮಂಡಳಿ ಅಧ್ಯಕ್ಷ ಗುತ್ತಿಗೆನೂರು ವಿರೂಪಾಕ್ಷಗೌಡ, ಯುವ ಮೋರ್ಚದ ರಾಜ್ಯಾಧ್ಯಕ್ಷ ಸಂದೀಪ್ ಕುಮಾರ್, ಯುವ ಘಟಕದ ಜಿಲ್ಲಾಧ್ಯಕ್ಷ ಆರ್.ಸೋಮಶೇಖರ್, ಕಂಪ್ಲಿ ಮಂಡಲ ಅಧ್ಯಕ್ಷ ಅಳ್ಳಳ್ಳಿ ವಿರೇಶ, ಪ್ರಧಾನ ಕಾರ್ಯದರ್ಶಿಗಳಾದ ಸುಧಾಕರ, ಕೆ.ಸುನೀಲ್ ಕುಮಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೆ.ಎಸ್.ಅಶೋಕ, ಕಂಪ್ಲಿ ಮಂಡಲ ಯುವ ಘಟಕ ಅಧ್ಯಕ್ಷ ನಟರಾಜಗೌಡ, ಮಹಿಳಾ ಮೋರ್ಚದ ಜಿಲ್ಲಾಧ್ಯಕ್ಷೆ ಸುಗುಣಾ, ಮುಖಂಡರಾದ ಶಿವಶಂಕರ, ಪ್ರಶಾಂತ್ ಕೆ.ವಿ, ಅಂಬರೀಶ, ಮುರ್ರೆಲಿಂಗನಗೌಡ, ಕೆ.ರಾಮಲಿಂಗಪ್ಪ, ಯರ್ರೆಂಗಳಿ ತಿಮ್ಮಾರೆಡ್ಡಿ, ಅಡಿವಿಸ್ವಾಮಿ, ಬಸವಲಿಂಗಪ್ಪ, ಎಂ.ರಾಜಣ್ಣ, ಎನ್.ಜಯದೇವಗೌಡ, ಜೆ.ಸೋಮಶೇಖರಗೌಡ, ಪ್ರವನ್ ಮೇಟಿ, ಪ್ರೇಮ್ ಕುಮಾರ್, ಬೆಸೇಜ್ ರೆಡ್ಡಿ, ಪ್ರಕಾಶಗೌಡ, ಸಂಜಯಗೌಡ, ಅರುಣ್ ಬಾಲಚಂದ್ರ, ತಿಮ್ಮಪ್ಪ, ಶರಣಗೌಡ್ರು, ಕೆ.ಹೂವಣ್ಣ, ಯರ್ರಿಸ್ವಾಮಿ, ಪ್ರಕಾಶಗೌಡ ಸೇರಿದಂತೆ ಸಾಕಷ್ಟು ಕಾರ್ಯಕರ್ತರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Prabhu chouhan

Cow ಕಾಯ್ದೆ: ಸಚಿವ ವೆಂಕಟೇಶ್ ವಿರುದ್ಧ ಪ್ರಭು ಚೌಹಾಣ್ ಕಿಡಿ

1-asdadsa

ಪ್ರತಿಗ್ರಾಮದಲ್ಲೂ ಕಲ್ಯಾಣಿ ನಿರ್ಮಿಸಲು ಸಾಲುಮರದ ತಿಮ್ಮಕ್ಕ ಮನವಿ

1-goa

Goa ಆಕರ್ಷಣೆ; ಹೊಸ ಜುವಾರಿ ಸೇತುವೆಯ ಮೇಲೆ ಅವಳಿ ಗೋಪುರಗಳು

Moodlakatte : ರೈಲು ಹಳಿಯಲ್ಲಿ ಶವ ಪತ್ತೆ

Moodlakatte : ರೈಲು ಹಳಿಯಲ್ಲಿ ಶವ ಪತ್ತೆ

vijayendra

PSI ಹಗರಣ; ನನ್ನ ಹೆಸರು ತೇಲಿ ಬಿಟ್ಟಿದ್ದಾರೆ‌, ತನಿಖೆ ಮಾಡಲಿ:ಬಿ‌.ವೈ.ವಿಜಯೇಂದ್ರ

1-scsad

KSOU ಶೀಘ್ರದಲ್ಲಿ ಮುಕ್ತ ವಿವಿಯಿಂದ ಆನ್ ಲೈನ್ ಕೋಸ್೯ : ಕುಲಪತಿ ಪ್ರೊ ಹಲ್ಸೆ

police crime

Shivamogga ಬಂಧಿಸಲು ತೆರಳಿದ್ದ ವೇಳೆ ದಾಳಿ; ಆರೋಪಿಗೆ ಪೊಲೀಸರ ಗುಂಡು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹರಪನಹಳ್ಳಿ: ರೈಲು ಡಿಕ್ಕಿ ಹೊಡೆದು ನಾಲ್ಕು ಕುರಿಗಳು ಸಾವು

ಹರಪನಹಳ್ಳಿ: ರೈಲು ಡಿಕ್ಕಿ ಹೊಡೆದು ನಾಲ್ಕು ಕುರಿಗಳು ಸಾವು

ಮೈಸೂರು ದುರ್ಘಟನೆ; ಸಂಗನಕ್ಕಲ್ಲು ಗ್ರಾಮದಲ್ಲಿ ಸಾಮೂಹಿಕ ಅಂತ್ಯಕ್ರಿಯೆ

ಮೈಸೂರು ದುರ್ಘಟನೆ; ಸಂಗನಕ್ಕಲ್ಲು ಗ್ರಾಮದಲ್ಲಿ ಸಾಮೂಹಿಕ ಅಂತ್ಯಕ್ರಿಯೆ

1-sasd

T Narasipura ಭೀಕರ ಅಪಘಾತ: ಮೈಸೂರು ಆಸ್ಪತ್ರೆಗೆ ಸಚಿವ ನಾಗೇಂದ್ರ ಭೇಟಿ

ಹೊಸಪೇಟೆ: ಸುಡು ಬಿಸಿಲಲ್ಲೂ ಹಂಪಿಗೆ ಪ್ರವಾಸಿಗರ ದಂಡು!

ಹೊಸಪೇಟೆ: ಸುಡು ಬಿಸಿಲಲ್ಲೂ ಹಂಪಿಗೆ ಪ್ರವಾಸಿಗರ ದಂಡು!

TRUCK BUS ACCIDENT

Accident: ಲಾರಿ, ಬಸ್ ನಡುವೆ ಡಿಕ್ಕಿ- ಡ್ರೈವರ್, ಪ್ರಯಾಣಿಕರು ಪ್ರಾಣಪಾಯದಿಂದ ಪಾರು

MUST WATCH

udayavani youtube

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

udayavani youtube

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

udayavani youtube

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

ಹೊಸ ಸೇರ್ಪಡೆ

Perampalli: ಡಿವೈಡರ್‌ ಮೇಲೇರಿದ ಕಾರು!

Perampalli: ಡಿವೈಡರ್‌ ಮೇಲೇರಿದ ಕಾರು!

Prabhu chouhan

Cow ಕಾಯ್ದೆ: ಸಚಿವ ವೆಂಕಟೇಶ್ ವಿರುದ್ಧ ಪ್ರಭು ಚೌಹಾಣ್ ಕಿಡಿ

1-asdadsa

ಪ್ರತಿಗ್ರಾಮದಲ್ಲೂ ಕಲ್ಯಾಣಿ ನಿರ್ಮಿಸಲು ಸಾಲುಮರದ ತಿಮ್ಮಕ್ಕ ಮನವಿ

1-goa

Goa ಆಕರ್ಷಣೆ; ಹೊಸ ಜುವಾರಿ ಸೇತುವೆಯ ಮೇಲೆ ಅವಳಿ ಗೋಪುರಗಳು

Moodlakatte : ರೈಲು ಹಳಿಯಲ್ಲಿ ಶವ ಪತ್ತೆ

Moodlakatte : ರೈಲು ಹಳಿಯಲ್ಲಿ ಶವ ಪತ್ತೆ