ದೇಶವನ್ನು ದುರ್ಬಲಗೊಳಿಸಲು ಬಿಡುವುದಿಲ್ಲ : ದಿನೇಶ್ ಗುಂಡೂರಾವ್ ಕಿಡಿ
Team Udayavani, Dec 29, 2021, 5:06 PM IST
ಪಣಜಿ: ಕಾಂಗ್ರೆಸ್ ಪಕ್ಷವನ್ನು ನಾಶಪಡಿಸಲು ಪ್ರಯತ್ನಿಸಿದರೆ, ನಮ್ಮ ದೇಶವನ್ನು ದುರ್ಬಲಗೊಳಿಸಲು ಪ್ರಯತ್ನಿಸಿದರೆ ಅದಕ್ಕೆ ನಾವು ಬಿಡುವುದಿಲ್ಲ , ಜನರ ಧ್ವನಿಯನ್ನು ಮೌನಗೊಳಿಸಲು ಬಿಡುವುದಿಲ್ಲ ಎಂದು ಗೋವಾ ಕಾಂಗ್ರೆಸ್ ಪ್ರಭಾರಿ ದಿನೇಶ್ ಗುಂಡೂರಾವ್ ನುಡಿದರು.
ಪಣಜಿಯಲ್ಲಿ ಕಾಂಗ್ರೆಸ್ ನ 137 ನೇಯ ಸಂಸ್ಥಾಪನಾ ದಿನದ ಸಂದರ್ಭದಲ್ಲಿ ಮಾತನಾಡಿದ ಅವರು, ದೇಶದ ಜನರು ಇಂದು ಮಾತನಾಡಲು, ಅಭಿಪ್ರಾಯ ವ್ಯಕ್ತಪಡಿಸಲು ಭಯಪಡುವ ಸ್ಥಿತಿ ಬಿಜೆಪಿ ನಿರ್ಮಾಣಮಾಡಿದೆ. ಆಡಳಿತ ಪಕ್ಷದ ಇಚ್ಛೆಗೆ ವಿರುದ್ಧವಾಗಿ ಮಾತನಾಡಿದರೆ ದಾಳಿ, ಅವಮಾನ ಎದುರಿಸಬೇಕಾಗುತ್ತದೆ ಎಂಬುದು ಜನತೆಗೆ ಗೊತ್ತಿದೆ. ಹೀಗಾಗಿ ಅನ್ಯಾಯದ ವಿರುದ್ಧ ಧ್ವನಿಯೆತ್ತುತ್ತಿಲ್ಲ ಎಂದು ದಿನೇಶ್ ಗುಂಡೂರಾವ್ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.
ಈ ಸಂದರ್ಭದಲ್ಲಿ ಗೋವಾ ಪ್ರದೇಶ ಕಾಂಗ್ರೆಸ್ ಸಮೀತಿ ಅಧ್ಯಕ್ಷ ಗಿರೀಶ್ ಚೋಡಕರ್, ಕಾಂಗ್ರೆಸ್ ಹಿರಿಯ ನಾಯಕ ಪ್ರತಾಪಸಿಂಹ ರಾಣೆ, ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್