ಹೆಣ್ಣುಮಕ್ಕಳ ಶಿಕ್ಷಣ ಹಾಳು ಮಾಡಬೇಡಿ: ಎಚ್.ಡಿ.ಕುಮಾರಸ್ವಾಮಿ

ಹಿಜಾಬ್ ವಿವಾದದ ಹಿಂದಿರುವ ಆ ಕಾಣದ ಕೈಗಳನ್ನು ಪತ್ತೆ ಹಚ್ಚಬೇಕು

Team Udayavani, Mar 17, 2022, 6:39 PM IST

hdk

ಬೆಂಗಳೂರು: ಹಿಜಾಬ್ ಅಥವಾ ಬೇರೆ ಯಾವುದೇ ವಿಷಯಕ್ಕಿಂತ ಹೆಣ್ಣು ಮಕ್ಕಳ ಶಿಕ್ಷಣ ಬಹಳ ಮುಖ್ಯ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಗುರುವಾರ ಹೇಳಿದ್ದಾರೆ.

ವಿಧಾನಸೌಧ ಬಳಿ ಮಾಧ್ಯಮಗಳ ಜತೆ ಮಾತನಾಡಿದ ಅವರು; ವಿವಿಧ ಬಗೆಯ ಶಾಲಾ ಸಮವಸ್ತ್ರಗಳ  ಫೋಟೋಗಳನ್ನು ಪ್ರದರ್ಶನ ಮಾಡಿ,

ಒಬ್ಬ ಹೆಣ್ಣು ಮಗು ಕಲಿತರೆ ಆ ಕುಟುಂಬಕ್ಕೆ ಬೆಳಕು ಬಂದಂತೆ. ಹೀಗಾಗಿ ಎಲ್ಲ ರಾಜಕೀಯ ಪಕ್ಷಗಳು ಈ ವಿಷಯದಲ್ಲಿ ಜವಾಬ್ದಾರಿಯಿಂದ ವರ್ತಿಸಬೇಕು ಎಂದು ಅವರು ಪ್ರತಿಪಾದಿಸಿದರು.

ನ್ಯಾಯಾಲಯದ ತೀರ್ಪು ಬಂದಿದೆ. ತೀರ್ಪು ಪಾಲನೆ ಎಲ್ಲರ ಕರ್ತವ್ಯ. ಇನ್ನಾದರೂ ಸರಕಾರ ತಾಯಿ ಹೃದಯದಿಂದ ಹೆಣ್ಣು ಮಕ್ಕಳ ಶಿಕ್ಷಣದ ಬಗ್ಗೆ ಉದಾತ್ತವಾಗಿ ಹೆಜ್ಜೆ ಇಡಬೇಕು. ಮಕ್ಕಳ‌ ಹಾಲಿನಂತಹ ಮನಸ್ಸನ್ನ ಒಡೆಯಬಾರದು ಎಂದರು.

ಹಾಗೆಯೇ; ರಾಜಕೀಯ ಉದೇಶದಿಂದ ಮುಂಚೂಣಿಗೆ ಬಂದ ಈ ಎಲ್ಲ ಅನಪೇಕ್ಷಿತ ವಿವಾದಗಳಿಂದ ಮಕ್ಕಳಿಗೆ ಅನ್ಯಾಯ ಆಗಿದೆ. ನಿಜಕ್ಕೂ ಅವರೇ ಬಲಿಪಶುಗಳು.  ಇದನ್ನು ಸರಕಾರವಾಗಲಿ ಅಥವಾ ಮಕ್ಕಳು, ಪೋಷಕರು ಲಘುವಾಗಿ ಪರಿಗಣಿಸಬಾರದು ಎಂದು ಮಾಜಿ ಮುಖ್ಯಮಂತ್ರಿಗಳು ಮನವಿ ಮಾಡಿದರು.

ಸದನದಲ್ಲಿ ಚರ್ಚೆಗೆ ಕಾಯುತ್ತಿದ್ದೇನೆ

ಈಗಾಗಲೇ ಶಿಕ್ಷಣ ವ್ಯವಸ್ಥೆಯ ಬಗ್ಗೆ ಮಾತನಾಡಲು  ವಿಧಾನಸಭೆಯಲ್ಲಿ ನಿಲುವಳಿ ಸೂಚನೆ ಮಂಡಿಸಿದ್ದೇನೆ. ಸಭಾಧ್ಯಕ್ಷರು ಇವತ್ತು ಅವಕಾಶ ಕೊಡುತ್ತಾರೋ, ನಾಳೆ ಕೊಡುತ್ತಾರೋ ಎಂದು ಕಾಯುತ್ತಿದ್ದೇನೆ ಎಂದು ಕುಮಾರಸ್ವಾಮಿ ಅವರು ಹೇಳಿದರು.

ಕಾಣದ ಕೈಗಳು ಯಾವು?

ಶಿಕ್ಷಣ ಕ್ಷೇತ್ರದಲ್ಲಿ ಮಕ್ಕಳ‌ ಮೇಲೆ ಕೆಟ್ಟ ಪರಿಣಾಮ ಬೀರುವಂತಹ ಘಟನೆಗಳು ನಡೆಯುತ್ತಿವೆ. ನ್ಯಾಯಾಲಯವೇ ಈ ಘಟನೆಗಳ ಹಿಂದೆ ಕಾಣದ ಕೈಗಳು ಇವೆ ಎಂದು ಹೇಳಿದೆ. ಆ ಕಾಣದ ಕೈಗಳನ್ನು ಪತ್ತೆ ಹಚ್ಚಬೇಕು ಹಾಗೂ ಸರಕಾರವು ಕಾಣದ ಆ ಕೈಗಳ ಹೆಸರುಗಳನ್ನು ಬಹಿರಂಗಪಡಿಸಬೇಕು ಎಂದು ಇದೇ ವೇಳೆಯಲ್ಲಿ ಮಾಜಿ ಮುಖ್ಯಮಂತ್ರಿಗಳು ಒತ್ತಾಯ ಮಾಡಿದರು.

ನಾನು ಸರಕಾರ ಮತ್ತು ಮುಸ್ಲಿಂ ಬಾಂಧವರನ್ನು ವಿನಂತಿ ಮಾಡುತ್ತೇನೆ. ಯಾವ ರಾಜಕೀಯ ಪಕ್ಷವೂ ಹೆಣ್ಣು ಮಕ್ಕಳ ಶಿಕ್ಷಣದಲ್ಲಿ ಆಟ ಆಡುವುದು ಬೇಡ. ಅದರಲ್ಲೂ ಮುಸ್ಲಿಂ ಹೆಣ್ಣು ಮಕ್ಕಳ ಶಿಕ್ಷಣ‌ ಬಹುಮುಖ್ಯ. ಆ ಸಮುದಾಯದಲ್ಲಿ ಬಡತನ ಜಾಸ್ತಿ ಇದ್ದು, ಅನಕ್ಷರತೆಯೂ ಇದೆ. ಸಾಕ್ಷರತೆ ಬಂದರೆ ಎಲ್ಲ ಸಮಸ್ಯೆಗಳಿಗೆ ತಾನಾಗಿಯೇ ಪರಿಹಾರ ಸಿಗುತ್ತದೆ. ನನ್ನ ಕಾಳಜಿ ಇಷ್ಟೇ ಎಂದು ಕುಮಾರಸ್ವಾಮಿ ಅವರು ಪ್ರತಿಪಾದಿಸಿದರು.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.