ಶೇ.70ರಷ್ಟು ಜನರಿಗೆ ಕೋವಿಡ್ ಲಸಿಕೆ ನೀಡದೆ ಮುಂಬಯಿ ಲಾಕ್ ಡೌನ್ ತೆರವು ಬೇಡ: ಸಮಿತಿ
ಎರಡನೇ ಕೋವಿಡ್ ಅಲೆಯ ಬಿಕ್ಕಟ್ಟಿನಲ್ಲಿದ್ದು, ಶೀಘ್ರವೇ ಮೂರನೇ ಅಲೆ ಸಾಧ್ಯತೆ ಇದೆ ಎಂದು ಎಚ್ಚರಿಸಿದರು.
Team Udayavani, Jun 19, 2021, 11:36 AM IST
ನವದೆಹಲಿ:ಮಹಾರಾಷ್ಟ್ರದಲ್ಲಿ ಶೇ.70ರಷ್ಟು ಜನರಿಗೆ ಲಸಿಕೆ ನೀಡದೆ ವಾಣಿಜ್ಯ ನಗರಿ ಮುಂಬಯಿಯಲ್ಲಿ ಲಾಕ್ ಡೌನ್ ಸಡಿಲಿಸಬಾರದು ಎಂದು ರಾಜ್ಯ ಕೋವಿಡ್ 19 ಟಾಸ್ಕ್ ಫೋರ್ಸ್ ಸಲಹೆ ನೀಡಿರುವುದಾಗಿ ವರದಿ ತಿಳಿಸಿದೆ.
ಇದನ್ನೂ ಓದಿ:ಮೂರನೇ ಅಲೆಯಿಂದ ತಪ್ಪಿಸಲಾಗದು, 6 ರಿಂದ 8 ವಾರದೊಳಗೆ ಅಪ್ಪಳಿಸುವ ಸಾಧ್ಯತೆ: ಏಮ್ಸ್ ಮುಖ್ಯಸ್ಥ
ರಾಜ್ಯದ ಕೋವಿಡ್ 19 ಟಾಸ್ಕ್ ಫೋರ್ಸ್ ಸಮಿತಿಯ ಸದಸ್ಯ ಡಾ.ಶಶಾಂಕ್ ಜೋಶಿ ಇಂಡಿಯಾ ಟುಡೇ ಟಿವಿಗೆ ನೀಡಿದ ಸಂದರ್ಶನದಲ್ಲಿ, ರಾಜ್ಯದ ಶೇ.70 ಪ್ರತಿಶತದಷ್ಟು ಜನರು ಕೋವಿಡ್ ಲಸಿಕೆ ಪಡೆಯದೇ ವಾಣಿಜ್ಯ ನಗರಿ ಮುಂಬಯಿಯಲ್ಲಿ ಲಾಕ್ ಡೌನ್ ತೆರವುಗೊಳಿಸಬಾರದು ಎಂದು ತಿಳಿಸಿದ್ದಾರೆ.
ಅಲ್ಲದೇ ಸ್ಥಳೀಯ ರೈಲು ಸಂಚಾರ ಯಾವಾಗ ಆರಂಭಿಸಬಹುದು ಎಂಬ ಪ್ರಶ್ನೆಗೆ ಉತ್ತರಿಸಿದ ಜೋಶಿ ಅವರು, ಸ್ಥಳೀಯ ರೈಲುಗಳ ಸಂಚಾರದ ಬಗ್ಗೆ ನಾವು ಈಗ ಆಲೋಚಿಸಬಾರದು, ಯಾಕೆಂದರೆ ನಾವು ಇನ್ನೂ ಅಪಾಯದ ಪರಿಸ್ಥಿತಿಯಿಂದ ಹೊರಬಂದಿಲ್ಲ. ಈ ನಿಟ್ಟಿನಲ್ಲಿ ನಾವು ಮತ್ತೆ ಅದೇ ತಪ್ಪನ್ನು ಮಾಡಲು ಹೋಗಬಾರದು. ಈಗಾಗಲೇ ಒಂದು ಮತ್ತು ಎರಡನೇ ಕೋವಿಡ್ ಅಲೆಯ ಬಿಕ್ಕಟ್ಟಿನಲ್ಲಿದ್ದು, ಶೀಘ್ರವೇ ಮೂರನೇ ಅಲೆ ಸಾಧ್ಯತೆ ಇದೆ ಎಂದು ಎಚ್ಚರಿಸಿದರು.
ಒಂದು ವೇಳೆ ಜನರು ಸಾಮಾಜಿಕ ಅಂತರ, ಮಾಸ್ಕ್ ಧರಿಸದೇ ನಿರ್ಲಕ್ಷ್ಯ ತೋರಿದರೆ ರಾಜ್ಯದಲ್ಲಿ ಮೂರನೇ ಕೋವಿಡ್ ಅಲೆ ಎದುರಿಸಬೇಕಾದ ಸಾಧ್ಯತೆ ಇದೆ ಎಂದು ಮಹಾರಾಷ್ಟ್ರ ಆರೋಗ್ಯ ಸಚಿವ ರಾಜೇಶ್ ಟೋಪೆ ಎಚ್ಚರಿಸಿದ್ದಾರೆ ಎಂದು ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ