
ತಾ.ಪಂ.,ಜಿ.ಪಂ: ಕ್ಷೇತ್ರ ಪುನರ್ ವಿಂಗಡನೆ ಮೀಸಲು ನಿಗದಿ: ಹೈಕೋರ್ಟ್ ಗಡುವು ಪಾಲನೆ ಅನುಮಾನ!
Team Udayavani, Aug 9, 2022, 6:50 AM IST

ಬೆಂಗಳೂರು: ರಾಜ್ಯದ ಜಿ.ಪಂ., ತಾ.ಪಂ. ಕ್ಷೇತ್ರ ಪುನರ್ ವಿಂಗಡನೆ ಮತ್ತು ಮೀಸಲಾತಿ ನಿಗದಿಗೆ ಸಂಬಂಧಿಸಿ ಹೈಕೋರ್ಟ್ ನೀಡಿರುವ ಗಡುವನ್ನು ಸರಕಾರ ಪಾಲಿಸುವ ಲಕ್ಷಣ ಕಂಡು ಬರುತ್ತಿಲ್ಲ.
ಕ್ಷೇತ್ರ ಪುನರ್ ವಿಂಗಡನೆ ಮತ್ತು ಮೀಸಲಾತಿ ನಿಗದಿ ಪ್ರಕ್ರಿಯೆಯನ್ನು 12 ವಾರಗಳಲ್ಲಿ ಪೂರ್ಣಗೊಳಿಸುವಂತೆ 2022ರ ಮೇ 24ರಂದು ಹೈಕೋರ್ಟ್ ಆದೇಶಿಸಿದ್ದು, ರಾಜ್ಯ ಚುನಾವಣ ಆಯೋಗದ ಪ್ರಕಾರ ಆ ಗಡುವು ಆಗಸ್ಟ್ 16ಕ್ಕೆ ಮುಗಿಯಲಿದೆ.
ಆದರೆ ಇನ್ನೂ ಕ್ಷೇತ್ರ ಪುನರ್ವಿಂಗಡನೆ ಕಾರ್ಯವೇ ಮುಗಿದಿಲ್ಲ. ಮೀಸಲಾತಿ ನಿಗದಿಯಂತೂ ದೂರದ ಮಾತು.
ಕ್ಷೇತ್ರ ಪುನರ್ ವಿಂಗಡನೆ ಹಾಗೂ ಒಬಿಸಿ ಸಹಿತ ಒಟ್ಟಾರೆ ಮೀಸಲು ನಿಗದಿಯನ್ನು 12 ವಾರಗಳಲ್ಲಿ ಪೂರ್ಣಗೊಳಿಸಬೇಕು. ಅದಾದ ಒಂದು ವಾರದಲ್ಲಿ ಚುನಾವಣ ಆಯೋಗ ಚುನಾವಣ ಪ್ರಕ್ರಿಯೆ ಆರಂಭಿಸಬೇಕೆಂದು ಹೈಕೋರ್ಟ್ ಹೇಳಿತ್ತು. ಆದರೆ ಈವರೆಗೆ ಕ್ಷೇತ್ರಗಳ ಪುನರ್ವಿಂಗಡನೆಯ ಕರಡನ್ನೂ ಪ್ರಕಟಿಸಲಾಗಿಲ್ಲ. ಕ್ಷೇತ್ರಗಳು ಅಂತಿಮಗೊಂಡ ಬಳಿಕವಷ್ಟೇ ಮೀಸಲಾತಿ ವಿಚಾರ ಬರುತ್ತದೆ. ಕ್ಷೇತ್ರ ಮತ್ತು ಮೀಸಲಾತಿ ಚಿತ್ರಣ ಸ್ಪಷ್ಟವಾದ ಬಳಿಕ ಇತರ ಪ್ರಕ್ರಿಯೆ ಆರಂಭಿಸಬೇಕಾಗುತ್ತದೆ.
ಕ್ಷೇತ್ರ ಪುನರ್ ವಿಂಗಡನೆ ಪ್ರಕ್ರಿಯೆ ನಿಗದಿತ ವೇಗದಲ್ಲಿ ಸಾಗುತ್ತಿಲ್ಲ. ಜುಲೈ ತಿಂಗಳಲ್ಲೇ ಕರಡು ಹೊರಡಿ ಸಲಾಗುತ್ತದೆ ಎನ್ನಲಾಗಿತ್ತು. ಆದರೆ ಸೀಮಾ ನಿರ್ಣಯ ಆಯೋಗ ಇನ್ನೂ ಕರಡು ಪ್ರಕಟಿಸಿಲ್ಲ. ಅಲ್ಲದೆ, ಒಬಿಸಿ ವರ್ಗಗಳಿಗೆ ಮೀಸಲಾತಿ ನೀಡುವ ಸಂಬಂಧ ನ್ಯಾ| ಭಕ್ತವತ್ಸಲ ಸಮಿತಿ ಶಿಫಾರಸು ಆಧರಿಸಿ ಮೀಸಲಾತಿ ನಿಗದಿಗೆ ಕ್ರಮ ಕೈಗೊಳ್ಳಬೇಕಾಗಿದೆ. ಸದ್ಯದ ಸ್ಥಿತಿಯನ್ನು ಗಮನಿಸಿದರೆ ಇದು ಅಷ್ಟೊಂದು ಬೇಗ ಮುಗಿಯವ ಕೆಲಸವಲ್ಲ.
ಏನಾಗಿತ್ತು?
ಕಳೆದ ಎಪ್ರಿಲ್ , ಮೇ ಮತ್ತು ಜೂನ್ ತಿಂಗಳಲ್ಲಿ ಅವಧಿ ಪೂರ್ಣ ಗೊಂಡ ರಾಜ್ಯದ ಜಿ.ಪಂ. ಹಾಗೂ ತಾ.ಪಂ. ಗಳಿಗೆ ಸಾರ್ವತ್ರಿಕ ಚುನಾ ವಣೆ ನಡೆಸಲು ಸಿದ್ಧತೆ ಆರಂಭಿಸಿದ್ದ ಆಯೋಗವು ಈ ಸಂಬಂಧ ಕ್ಷೇತ್ರ ಪುನರ್ವಿಂಗಡನೆ ಮಾಡಿ ಮತದಾರರ ಅಂತಿಮ ಪಟ್ಟಿ ಪ್ರಕಟಿಸಿತ್ತು. ಅಂತೆಯೇ ಮೀಸಲಾತಿ ಕರಡನ್ನೂ ಪ್ರಕಟಿಸಲಾಗಿತ್ತು. ಚುನಾವಣೆಗೆ ದಿನಾಂಕ ಘೋಷಿಸಬೇಕು ಎನ್ನುವಷ್ಟರಲ್ಲಿ ಕ್ಷೇತ್ರ ಪುನರ್ ವಿಂಗಡಣೆ ಮತ್ತು ಮೀಸಲಾತಿ ಅಧಿಕಾರವನ್ನು ಚುನಾವಣ ಆಯೋಗದಿಂದ ಹಿಂಪಡೆದ ಸರಕಾರ, ಸೀಮಾ ನಿರ್ಣಯ ಆಯೋಗವನ್ನು ರಚಿಸಿತ್ತು. ಇದನ್ನು ಪ್ರಶ್ನಿಸಿ ಚುನಾವಣ ಆಯೋಗ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿತ್ತು.
ಜಿ.ಪಂ., ತಾ.ಪಂ. ಕ್ಷೇತ್ರಗಳ ಪುನರ್ ವಿಂಗಡಣೆ ಪ್ರಕ್ರಿಯೆ ಮುಗಿದಿದೆ. ಆದಷ್ಟು ಬೇಗ ಕರಡು ಹೊರಡಿಸಲಾಗುವುದು.
– ಎಂ. ಲಕ್ಷ್ಮೀನಾರಾಯಣ, ಅಧ್ಯಕ್ಷರು, ಸೀಮಾ ನಿರ್ಣಯ ಆಯೋಗ.
ನಿಗದಿತ ಸಮಯದಲ್ಲಿ ಚುನಾವಣೆ ನಡೆಯಬೇಕು ಎಂಬುದು ಆಯೋಗದ ನಿಲುವು. ಅದಕ್ಕಾಗಿಯೇ ಆಯೋಗ ಹೈಕೋರ್ಟ್ ಮೊರೆ ಹೋಗಿದೆ. ನ್ಯಾಯಾಲಯ ಸರಕಾರಕ್ಕೆ 12 ವಾರಗಳ ಗಡುವು ನೀಡಿದ್ದು, ಅದರ ಬಗ್ಗೆ ಸರಕಾರದ ಅಭಿಪ್ರಾಯ ಮತ್ತು ನ್ಯಾಯಾಲಯದಲ್ಲಿ ಏನಾಗಲಿದೆ ಎಂಬುದನ್ನು ಕಾದು ನೋಡಬೇಕಿದೆ.
– ಡಾ| ಬಿ. ಬಸವರಾಜು,
ರಾಜ್ಯ ಚುನಾವಣ ಆಯುಕ್ತರು
– ರಫೀಕ್ ಅಹ್ಮದ್
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಂಗಾವತಿ: ಕಿಷ್ಕಿಂಧಾ ಅಂಜನಾದ್ರಿ ಹುಂಡಿ ಎಣಿಕೆ 26.23 ಲಕ್ಷ ರೂ.ಸಂಗ್ರಹ

ಕೊಡಗು ಜಿಲ್ಲಾಡಳಿತದ ಪ್ರಯತ್ನಕ್ಕೆ ಸಂದ ಜಯ: ಕುವೈತ್ ನಲ್ಲಿ ಸಿಲುಕಿದ್ದ ಮಹಿಳೆ ಸುರಕ್ಷಿತವಾಗಿ ತಾಯ್ನಾಡಿಗೆ

ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು

ಉದ್ದಿಮೆಗಳ ಖಾತಾ ಬದಲಾವಣೆ ಸಮಸ್ಯೆಗೆ ತ್ವರಿತ ಪರಿಹಾರ: ಅತಿಕ್

ನಲುಗಿದ ನೇಮಕ: ಶಿಕ್ಷಕರ ನೇಮಕಾತಿ: ತಕರಾರು ಅರ್ಜಿಗೆ ಹೈಕೋರ್ಟ್ ಪುರಸ್ಕಾರ
MUST WATCH

ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan
ಹೊಸ ಸೇರ್ಪಡೆ

ಕಿರುಕುಳದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು ಆ ಸಂದರ್ಭದ ಸಹಜ ಪ್ರಕ್ರಿಯೆ: ಸಾನ್ಯಾ ಅಯ್ಯರ್

ಗಂಗಾವತಿ: ಕಿಷ್ಕಿಂಧಾ ಅಂಜನಾದ್ರಿ ಹುಂಡಿ ಎಣಿಕೆ 26.23 ಲಕ್ಷ ರೂ.ಸಂಗ್ರಹ

ಪಠಾಣ್ ಅಬ್ಬರಕ್ಕೆ ನಡುಗಿದ ಬಾಕ್ಸಾಫೀಸ್: ಭಾರತದಲ್ಲೇ 300 ಕೋಟಿ ಗಳಿಸಿದ ಶಾರುಖ್ ಸಿನಿಮಾ

ಕೋಮುಗಲಭೆ ಸೃಷ್ಟಿಸುತ್ತಿದೆ ಬಿಜೆಪಿ ಸರ್ಕಾರ; ಆನಂದ ನ್ಯಾಮಗೌಡ

ಉಡುಪಿ: ನಾಗಬನದಲ್ಲಿ ಶ್ರೀಗಂಧ ಮರ ಕಳವು… ಆರೋಪಿ ಬಂಧನ, ಸೊತ್ತು ವಶ