ತಾ.ಪಂ.,ಜಿ.ಪಂ: ಕ್ಷೇತ್ರ ಪುನರ್‌ ವಿಂಗಡನೆ ಮೀಸಲು ನಿಗದಿ: ಹೈಕೋರ್ಟ್‌ ಗಡುವು ಪಾಲನೆ ಅನುಮಾನ!


Team Udayavani, Aug 9, 2022, 6:50 AM IST

ತಾ.ಪಂ.,ಜಿ.ಪಂ: ಕ್ಷೇತ್ರ ಪುನರ್‌ ವಿಂಗಡನೆ ಮೀಸಲು ನಿಗದಿ: ಹೈಕೋರ್ಟ್‌ ಗಡುವು ಪಾಲನೆ ಅನುಮಾನ!

ಬೆಂಗಳೂರು: ರಾಜ್ಯದ ಜಿ.ಪಂ., ತಾ.ಪಂ. ಕ್ಷೇತ್ರ ಪುನರ್‌ ವಿಂಗಡನೆ ಮತ್ತು ಮೀಸಲಾತಿ ನಿಗದಿಗೆ ಸಂಬಂಧಿಸಿ ಹೈಕೋರ್ಟ್‌ ನೀಡಿರುವ ಗಡುವನ್ನು ಸರಕಾರ ಪಾಲಿಸುವ ಲಕ್ಷಣ ಕಂಡು ಬರುತ್ತಿಲ್ಲ.

ಕ್ಷೇತ್ರ ಪುನರ್‌ ವಿಂಗಡನೆ ಮತ್ತು ಮೀಸಲಾತಿ ನಿಗದಿ ಪ್ರಕ್ರಿಯೆಯನ್ನು 12 ವಾರಗಳಲ್ಲಿ ಪೂರ್ಣಗೊಳಿಸುವಂತೆ 2022ರ ಮೇ 24ರಂದು ಹೈಕೋರ್ಟ್‌ ಆದೇಶಿಸಿದ್ದು, ರಾಜ್ಯ ಚುನಾವಣ ಆಯೋಗದ ಪ್ರಕಾರ ಆ ಗಡುವು ಆಗಸ್ಟ್‌ 16ಕ್ಕೆ ಮುಗಿಯಲಿದೆ.

ಆದರೆ ಇನ್ನೂ ಕ್ಷೇತ್ರ ಪುನರ್‌ವಿಂಗಡನೆ ಕಾರ್ಯವೇ ಮುಗಿದಿಲ್ಲ. ಮೀಸಲಾತಿ ನಿಗದಿಯಂತೂ ದೂರದ ಮಾತು.
ಕ್ಷೇತ್ರ ಪುನರ್‌ ವಿಂಗಡನೆ ಹಾಗೂ ಒಬಿಸಿ ಸಹಿತ ಒಟ್ಟಾರೆ ಮೀಸಲು ನಿಗದಿಯನ್ನು 12 ವಾರಗಳಲ್ಲಿ ಪೂರ್ಣಗೊಳಿಸಬೇಕು. ಅದಾದ ಒಂದು ವಾರದಲ್ಲಿ ಚುನಾವಣ ಆಯೋಗ ಚುನಾವಣ ಪ್ರಕ್ರಿಯೆ ಆರಂಭಿಸಬೇಕೆಂದು ಹೈಕೋರ್ಟ್‌ ಹೇಳಿತ್ತು. ಆದರೆ ಈವರೆಗೆ ಕ್ಷೇತ್ರಗಳ ಪುನರ್‌ವಿಂಗಡನೆಯ ಕರಡನ್ನೂ ಪ್ರಕಟಿಸಲಾಗಿಲ್ಲ. ಕ್ಷೇತ್ರಗಳು ಅಂತಿಮಗೊಂಡ ಬಳಿಕವಷ್ಟೇ ಮೀಸಲಾತಿ ವಿಚಾರ ಬರುತ್ತದೆ. ಕ್ಷೇತ್ರ ಮತ್ತು ಮೀಸಲಾತಿ ಚಿತ್ರಣ ಸ್ಪಷ್ಟವಾದ ಬಳಿಕ ಇತರ ಪ್ರಕ್ರಿಯೆ ಆರಂಭಿಸಬೇಕಾಗುತ್ತದೆ.

ಕ್ಷೇತ್ರ ಪುನರ್‌ ವಿಂಗಡನೆ ಪ್ರಕ್ರಿಯೆ ನಿಗದಿತ ವೇಗದಲ್ಲಿ ಸಾಗುತ್ತಿಲ್ಲ. ಜುಲೈ ತಿಂಗಳಲ್ಲೇ ಕರಡು ಹೊರಡಿ ಸಲಾಗುತ್ತದೆ ಎನ್ನಲಾಗಿತ್ತು. ಆದರೆ ಸೀಮಾ ನಿರ್ಣಯ ಆಯೋಗ ಇನ್ನೂ ಕರಡು ಪ್ರಕಟಿಸಿಲ್ಲ. ಅಲ್ಲದೆ, ಒಬಿಸಿ ವರ್ಗಗಳಿಗೆ ಮೀಸಲಾತಿ ನೀಡುವ ಸಂಬಂಧ ನ್ಯಾ| ಭಕ್ತವತ್ಸಲ ಸಮಿತಿ ಶಿಫಾರಸು ಆಧರಿಸಿ ಮೀಸಲಾತಿ ನಿಗದಿಗೆ ಕ್ರಮ ಕೈಗೊಳ್ಳಬೇಕಾಗಿದೆ. ಸದ್ಯದ ಸ್ಥಿತಿಯನ್ನು ಗಮನಿಸಿದರೆ ಇದು ಅಷ್ಟೊಂದು ಬೇಗ ಮುಗಿಯವ ಕೆಲಸವಲ್ಲ.

ಏನಾಗಿತ್ತು?
ಕಳೆದ ಎಪ್ರಿಲ್ , ಮೇ ಮತ್ತು ಜೂನ್‌ ತಿಂಗಳಲ್ಲಿ ಅವಧಿ ಪೂರ್ಣ ಗೊಂಡ ರಾಜ್ಯದ ಜಿ.ಪಂ. ಹಾಗೂ ತಾ.ಪಂ. ಗಳಿಗೆ ಸಾರ್ವತ್ರಿಕ ಚುನಾ ವಣೆ ನಡೆಸಲು ಸಿದ್ಧತೆ ಆರಂಭಿಸಿದ್ದ ಆಯೋಗವು ಈ ಸಂಬಂಧ ಕ್ಷೇತ್ರ ಪುನರ್‌ವಿಂಗಡನೆ ಮಾಡಿ ಮತದಾರರ ಅಂತಿಮ ಪಟ್ಟಿ ಪ್ರಕಟಿಸಿತ್ತು. ಅಂತೆಯೇ ಮೀಸಲಾತಿ ಕರಡನ್ನೂ ಪ್ರಕಟಿಸಲಾಗಿತ್ತು. ಚುನಾವಣೆಗೆ ದಿನಾಂಕ ಘೋಷಿಸಬೇಕು ಎನ್ನುವಷ್ಟರಲ್ಲಿ ಕ್ಷೇತ್ರ ಪುನರ್‌ ವಿಂಗಡಣೆ ಮತ್ತು ಮೀಸಲಾತಿ ಅಧಿಕಾರವನ್ನು ಚುನಾವಣ ಆಯೋಗದಿಂದ ಹಿಂಪಡೆದ ಸರಕಾರ, ಸೀಮಾ ನಿರ್ಣಯ ಆಯೋಗವನ್ನು ರಚಿಸಿತ್ತು. ಇದನ್ನು ಪ್ರಶ್ನಿಸಿ ಚುನಾವಣ ಆಯೋಗ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು.

ಜಿ.ಪಂ., ತಾ.ಪಂ. ಕ್ಷೇತ್ರಗಳ ಪುನರ್‌ ವಿಂಗಡಣೆ ಪ್ರಕ್ರಿಯೆ ಮುಗಿದಿದೆ. ಆದಷ್ಟು ಬೇಗ ಕರಡು ಹೊರಡಿಸಲಾಗುವುದು.
– ಎಂ. ಲಕ್ಷ್ಮೀನಾರಾಯಣ, ಅಧ್ಯಕ್ಷರು, ಸೀಮಾ ನಿರ್ಣಯ ಆಯೋಗ.

ನಿಗದಿತ ಸಮಯದಲ್ಲಿ ಚುನಾವಣೆ ನಡೆಯಬೇಕು ಎಂಬುದು ಆಯೋಗದ ನಿಲುವು. ಅದಕ್ಕಾಗಿಯೇ ಆಯೋಗ ಹೈಕೋರ್ಟ್‌ ಮೊರೆ ಹೋಗಿದೆ. ನ್ಯಾಯಾಲಯ ಸರಕಾರಕ್ಕೆ 12 ವಾರಗಳ ಗಡುವು ನೀಡಿದ್ದು, ಅದರ ಬಗ್ಗೆ ಸರಕಾರದ ಅಭಿಪ್ರಾಯ ಮತ್ತು ನ್ಯಾಯಾಲಯದಲ್ಲಿ ಏನಾಗಲಿದೆ ಎಂಬುದನ್ನು ಕಾದು ನೋಡಬೇಕಿದೆ.
– ಡಾ| ಬಿ. ಬಸವರಾಜು,
ರಾಜ್ಯ ಚುನಾವಣ ಆಯುಕ್ತರು

– ರಫೀಕ್‌ ಅಹ್ಮದ್‌

ಟಾಪ್ ನ್ಯೂಸ್

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.