ಆಂಬ್ಯುಲೆನ್ಸ್ ಓಡಿಸಿ ಗಮನ ಸೆಳೆದ ಖಾನಾಪುರ ಶಾಸಕಿ ಡಾ. ಅಂಜಲಿ ನಿಂಬಾಳ್ಕರ್
Team Udayavani, Jun 11, 2021, 7:26 PM IST
ಬೆಳಗಾವಿ: ಖಾನಾಪುರ ಕಾಂಗ್ರೆಸ್ ಶಾಸಕಿ ಡಾ. ಅಂಜಲಿ ನಿಂಬಾಳ್ಕರ್ ಅವರು ತಾಲೂಕು ಆಸ್ಪತ್ರೆಯಲ್ಲಿ ನೂತನ ಆಂಬ್ಯುಲೆನ್ಸ್ಗೆ ಚಾಲನೆ ನೀಡಿದ ಬಳಿಕ ಸ್ವತಃ ಆಂಬ್ಯುಲೆನ್ಸ್ ಓಡಿಸುವ ಮೂಲಕ ಗಮನಸೆಳೆದರು.
ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಅನುದಾನದಡಿ ತಾಲೂಕು ಆಸ್ಪತ್ರೆಯ ಆವರಣದಲ್ಲಿ ನಾಲ್ಕು ಆಂಬ್ಯುಲೆನ್ಸ್ಗಳಿಗೆ ಚಾಲನೆ ನೀಡಿದ ನಂತರ ಖಾನಾಪುರ ಪಟ್ಟಣದಲ್ಲಿ ಆ್ಯಂಬುಲೆನ್ಸ್ ಓಡಿಸಿದರು. ಶಾಸಕಿ ನಿಂಬಾಳ್ಕರ್ ಅವರು ಆಂಬ್ಯುಲೆನ್ಸ್ ಓಡಿಸುತ್ತಿರುವುದುನ್ನು ಸಾರ್ವಜನಿಕರು ರಸ್ತೆ ಬದಿ ನಿಂತು ನೋಡುತ್ತಿರುವುದು ಕಂಡು ಬಂತು.
ಕೊರೊನಾ ಸೋಂಕಿಗೆ ತತ್ತರಿಸಿರುವ ಕ್ಷೇತ್ರದ ಜನತೆಗೆ ನೆರವಾಗಿರುವ ಶಾಸಕಿ ನಿಂಬಾಳ್ಕರ್ ಅವರು ಕೆಲವು ದಿನಗಳಿಂದ ಆಸ್ಪತ್ರೆಗೆ ಅಗತ್ಯ ಇರುವ ಸೌಲಭ್ಯವನ್ನು ಒದಗಿಸುವಲ್ಲಿ ನಿರತರಾಗಿದ್ದಾರೆ. ಆಂಬ್ಯುಲೆನ್ಸ್ ಕೊರತೆಯಿಂದ ಜನರು ನಿತ್ಯ ತೊಂದರೆ ಅನುಭವಿಸುತ್ತಿದ್ದರು. ಇವರ ನೆರವಿಗೆ ನಿಂತಿದ್ದಾರೆ.
ಇದನ್ನೂ ಓದಿ :ಕೋವಿಡ್ : ರಾಜ್ಯದಲ್ಲಿಂದು 14975 ಸೋಂಕಿತರು ಗುಣಮುಖ, 8249 ಜನರಿಗೆ ಪಾಸಿಟಿವ್
ಕ್ಷೇತ್ರದ ಬಹಳಷ್ಟು ಜನ ಗೋವಾ ಹಾಗೂ ಮಹಾರಾಷ್ಟ್ರದಲ್ಲಿ ಕೆಲಸಕ್ಕೆ ಹೋಗಿರುತ್ತಾರೆ. ಅಲ್ಲಿಂದ ಬಂದ ವಲಸಿಗರಿಗೆ ಕೊರೊನಾ ಸೋಂಕು ಒಕ್ಕರಿಸಿದೆ. ವಲಸಿಗರಿಂದ ಕ್ಷೇತ್ರದ ಗ್ರಾಮೀಣ ಭಾಗಗಳಲ್ಲಿ ಕೊರೊನಾ ಸೋಂಕು ಹೆಚ್ಚಳಕ್ಕೆ ಮುಖ್ಯ ಕಾರಣವಾಗಿದೆ. ಹೀಗಾಗಿ ಹೇಗಾದರೂ ಮಾಡಿ ಕೊರೊನಾ ಮುಕ್ತ ಮಾಡಲು ಶ್ರಮಿಸುತ್ತಿದ್ದೇನೆ ಎಂದು ಶಾಸಕಿ ನಿಂಬಾಳ್ಕರ್ ಹೇಳಿದರು.
ಕಳೆದ ವಾರ ಶಾಸಕಿ ಅಂಜಲಿ ನಿಂಬಾಳ್ಕರ್ ತಮ್ಮ ಸ್ವಂತ ಖರ್ಚಿನಲ್ಲಿ 8 ಆಕ್ಸಿಜನ್ ಕಾನ್ಸಂಟ್ರೇಟರ್ಗಳನ್ನು ಖರೀದಿಸಿ ತಾಲೂಕು ಆಸ್ಪತ್ರೆಗೆ ನೀಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ