ಅನ್ಯಮತೀಯರಿಗೆ ಮರುಳಾದರೆ ಉಗ್ರರ ಕ್ಯಾಂಪಿಗೆ: ಶಾಸಕ ಡಾ.ಭರತ್ ಶೆಟ್ಟಿ ಎಚ್ಚರಿಕೆ
Team Udayavani, Jan 6, 2022, 1:30 PM IST
ಸುರತ್ಕಲ್: ಅನ್ಯಮತೀಯರ ಪ್ರೀತಿ-ಪ್ರೇಮದ ನಾಟಕಕ್ಕೆ ಮರುಳಾದರೆ ಉಗ್ರರ ಕ್ಯಾಂಪು ಸೇರಬೇಕಾದೀತು ಎಂದು ಎಂದು ಶಾಸಕ ಡಾ. ಭರತ್ ಶೆಟ್ಟಿ ವೈ ಎಚ್ಚರಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಕಾಂಗ್ರೆಸ್ ನ ಮಾಜಿ ಶಾಸಕರೊಬ್ಬರ ಕುಟುಂಬದ ಕೆಲ ಸದಸ್ಯರಿಂದ ಐಸಿಸ್ ಉಗ್ರ ಸಂಘಟನೆಗೆ ಸ್ಥಳೀಯ ಯುವಕರ ಸೇರ್ಪಡೆಗೆ ವ್ಯವಸ್ಥಿತ ಸಂಚು ನಡೆಸಿರುವುದು ಆಘಾತಕಾರಿ ಯಾಗಿದೆ ಎಂದು ಶಾಸಕರು ಹೇಳಿದ್ದಾರೆ.
ಈ ಕುಟುಂಬದ ಯುವಕನೊಬ್ಬನನ್ನು ಪ್ರೀತಿಸಿ ಮದುವೆಯಾದ ಹಿಂದೂ ಯುವತಿಗೆ ತನ್ನ ತಪ್ಪಿನ ಅರಿವಾಗುವ ಮುನ್ನವೇ ಮತಾಂತರ ಗೊಳಿಸಿದ್ದು ಮಾತ್ರವಲ್ಲದೆ, ಯಾವುದೇ ಕರುಣೆಯನ್ನು ಕೂಡ ತೋರಿಸದೆ ಉಗ್ರ ಚಟುವಟಿಕೆಗೆ ಬಳಸಿಕೊಂಡಿರುವುದು ಸಾಬೀತಾಗಿದೆ. ಈ ಪ್ರಕರಣ
ಹಿಂದೂ ಸಂಘಟನೆಗಳ ಲವ್ ಜಿಹಾದ್ ಕೂಗಿಗೆ ಉತ್ತರವನ್ನು ನೀಡಿದೆ ಎಂದರು.
ವೋಟ್ ಬ್ಯಾಂಕ್ ರಾಜಕಾರಣ, ತುಷ್ಟೀಕರಣ ನೀತಿಯಿಂದ ಕೆಲವೊಂದು ರಾಜಕೀಯ ಪಕ್ಷಗಳು ಮತಾಂತರ, ಲವ್ ಜಿಹಾದ್ ಬಗ್ಗೆ ಮೌನ ತಾಳಿದ್ದು ರಾಜಕೀಯ ನಾಯಕರ ದ್ವಿಮುಖ ನೀತಿಯನ್ನು ಬಯಲಿಗೆಳೆದಿದೆ. ಪ್ರೀತಿ-ಪ್ರೇಮದ ನಾಟಕವಾಡಿ ಮತಾಂತರ ಮಾಡಿ ಉಗ್ರ ಕೃತ್ಯಗಳಿಗೆ ಬಳಸಿಕೊಳ್ಳುವ ವ್ಯವಸ್ಥಿತ ಸಂಚಿನ ಬಗ್ಗೆ ಕೇರಳ ಸಹಿತ ಹಲವಡೆ ಪ್ರಕರಣಗಳು ಕಂಡು ಬಂದರು ,ಬಿಜೆಪಿ ಪಕ್ಷವನ್ನು ಹೊರತುಪಡಿಸಿ ಅನ್ಯ ರಾಜಕೀಯ ಪಕ್ಷಗಳು ಆಡಳಿತದಲ್ಲಿರುವ ಸರಕಾರಗಳು ನಿರ್ಲಕ್ಷ್ಯ ಧೋರಣೆಯನ್ನು ತಾಳುತ್ತಾ ಇಲ್ಲಿಯವರೆಗೆ ಬಂದಿದ್ದರಿಂದ ಮತಾಂತರ ಹಾಗೂ ಉಗ್ರ ಚಟುವಟಿಕೆ ಕಬಂಧಬಾಹು ಇಷ್ಟು ಬೆಳೆಯಲು ಕಾರಣವಾಗಿದೆ ಎಂದು ಆರೋಪಿಸಿದ್ದಾರೆ.
ಉಳ್ಳಾಲ ಉಗ್ರ ಚಟುವಟಿಕೆಯ ಪ್ರಕರಣವನ್ನು ಕೇಂದ್ರೀಯ ತನಿಖಾ ದಳ ಸಮಗ್ರವಾಗಿ ತನಿಖೆ ಕೈಗೆತ್ತಿಕೊಂಡಿದ್ದು ಉಗ್ರಗಾಮಿ ಚಟುವಟಿಕೆಯನ್ನು ಬೇರುಸಹಿತ ಕಿತ್ತೆಸೆಯಲು ಜಿಲ್ಲಾ ಸಮುದಾಯ ಒಗ್ಗೂಡಿ ತನಿಖಾ ದಳಕ್ಕೆ ಸಹಕರಿಸಬೇಕಿದೆ ಎಂದರು.
ಯಾರು ಕೂಡ ಉಗ್ರಗಾಮಿ ಚಟುವಟಿಕೆಗೆ ಪ್ರೇರಣೆ, ಬೆಂಬಲ ನೀಡದೆ ಸುರಕ್ಷಿತ ದಕ್ಷಿಣ ಕನ್ನಡ ಜಿಲ್ಲೆಯನ್ನಾಗಿ ಮುಂದೆಯೂ ಇರುವಂತೆ ಮಾಡಲು ಎಲ್ಲರೂ ಸಹಕರಿಸಬೇಕು. ಪೋಷಕರನ್ನು ಹಿರಿಯರ ಮಾತನ್ನು ಕಡೆಗಣಿಸಿ ಪ್ರೀತಿಗೆ ಮರುಳಾಗಿ ಕುಟುಂಬದಿಂದ ಹೊರನಡೆಯುವ ಹಿಂದೂ ಸಮುದಾಯದ ಯುವತಿಯರು ಈ ಘಟನೆಯಿಂದ ಎಚ್ಚೆತ್ತು ಕೊಳ್ಳಬೇಕು ಎಂದು ಶಾಸಕ ಭರತ್ ಶೆಟ್ಟಿ ವೈ ಕಳಕಳಿಯ ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ