ಕನ್ನಡಿಗರನ್ನು ಕೆಣಕಿದರೆ ಮಲಗಿದ ಸಿಂಹವನ್ನು ಎಚ್ಚರಿಸಿದಂತೆ: ಡಾ|ಮನು ಬಳಿಗಾರ
Team Udayavani, Jan 30, 2021, 7:42 PM IST
ಕಾಗವಾಡ(ಮಿರ್ಜಿ ಅಣ್ಣಾರಾಯ ವೇದಿಕೆ): ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ ಠಾಕ್ರೆ ಅವರ ಒಡಕು ಹುಟ್ಟಿಸುವ ಧ್ವನಿ ಬಗ್ಗೆ ಜನರು ನಿರ್ಲಕ್ಷ ವಹಿಸಿ ಕಸದ ಬುಟ್ಟಿಗೆ ಹಾಕಿದ್ದಾರೆ ಎಂದು ಕನ್ನಡ ಸಾಹಿತ್ಯ ಪರಿಷತ್ ರಾಜ್ಯಾಧ್ಯಕ್ಷ ಡಾ|ಮನು ಬಳಿಗಾರ ಹೇಳಿದರು.
ಬೆಳಗಾವಿ ಜಿಲ್ಲಾ 14ನೇ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಶನಿವಾರ ಮಾತನಾಡಿದ ಅವರು, ಕರ್ನಾಟಕದವರನ್ನು ಕೆಣಕಿದರೆ ಮಲಗಿದ ಸಿಂಹವನ್ನು ಎಚ್ಚರಿಸಿದಂತೆ. ಹೀಗಾಗಿ ಮಲಗಿದ ಸಿಂಹದ ಮೀಸೆ ಎಳೆದು ಕೆಣಕುವ ಕೆಲಸ ಮಹಾರಾಷ್ಟ್ರದ ನಾಯಕರು ಮಾಡಬಾರದೆಂದು ಎಚ್ಚರಿಸಿದರು.
ಗಡಿ ವಿವಾದ ಬಗ್ಗೆ ರಾಜಕಾರಣಿಗಳು ಸ್ವಾರ್ಥಕ್ಕಾಗಿ ಹೇಳಿಕೆ ನೀಡುತ್ತಿದ್ದಾರೆ. ರಾಜಕಾರಣಕ್ಕಾಗಿ ಅವಿವೇಕಿತನದ ಹೇಳಿಕೆ ಕೊಡುತ್ತಿರುವವರಿಗೆ ಜನರು ಬುದ್ಧಿ ಕಲಿಸಿದ್ದಾರೆ ಎಂದರು.
ಹಾವೇರಿಯಲ್ಲಿ ಅಖೀಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಬಗ್ಗೆ ಸರ್ಕಾರ ಸ್ಪಷ್ಟ ನಿರ್ಧಾರ ತೆಗೆದುಕೊಳ್ಳಬೇಕು. ಕೊರೊನಾ ನಿಯಮಾವಳಿ ಸಡಿಲಿಕೆ ಆಗಬೇಕೆಂದು ಒತ್ತಾಯಿಸಿದರು.
ಇದನ್ನೂ ಓದಿ:ಯೋಗಿ ಆದಿತ್ಯನಾಥರಂತೆ ಸುತ್ತೂರು ಶ್ರೀಗಳನ್ನು ಸಿಎಂ ಮಾಡಿ! ರೈತ ಹಿತರಕ್ಷಣಾ ಸಮಿತಿ ಒತ್ತಾಯ
ಪರರ ವಿಚಾರಗಳ ಬಗ್ಗೆ ಮನ್ನಣೆ ನೀಡಬೇಕು ಎಂಬುದನ್ನು ಕರ್ನಾಟಕ ಸಾವಿರಾರು ವರ್ಷಗಳಿಂದ ಕಲಿಸಿ ಕೊಟ್ಟಿದೆ. ಸೌಹಾರ್ದಯುತವಾಗಿ ಬದುಕು ಕಟ್ಟಿಕೊಂಡಿರುವ ನಾಡು ನಮ್ಮದು. ಭಾಷೆಯ ಮೆರಗು ತಿಳಿದರೆ ಸೌಹಾರ್ದತೆ ಹೆಚ್ಚಾಗುತ್ತದೆ ಎಂದರು.
ಕೋವಿಡ್ ಪರಿಣಾಮ ಕುರಿತು ಸಮ್ಮೇಳನದಲ್ಲಿ ಗೋಷ್ಠಿ ಇರಲಿದೆ. ಕೊರೊನಾ ಉಂಟು ಮಾಡಿದ ಪರಿಣಾಮಗಳ ಕುರಿತು ಚರ್ಚೆಯಾಗಲಿದೆ. ನಷ್ಟ ಉಂಟಾಗಿದ್ದು, ಅದರಿಂದ ಹೊರ ಬರುವುದು ಹೇಗೆ, ಈ ಪರಿಸ್ಥಿತಿಯಲ್ಲಿ ಉದ್ಯೋಗ ಸೃಷ್ಟಿಸುವುದು ಹೇಗೆಂಬ ಸಮಾಲೋಚನೆ ನಡೆಸಲಾಗುವುದು. ಆರೋಗ್ಯ ಜಾಗೃತಿ ಮೂಡಿಸಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ
Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್ ಹೇಳಿಕೆ
ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…
Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ
Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್ಗೆ ಗೆಲುವು: ಮುನಿಯಪ್ಪ ವಿಶ್ವಾಸ
MUST WATCH
ಹೊಸ ಸೇರ್ಪಡೆ
Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ
Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್ ಹೇಳಿಕೆ
ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…
Kollywood: ದಳಪತಿ ವಿಜಯ್ ʼGOATʼ ಸಿನಿಮಾದಲ್ಲಿ ಧೋನಿ, ರುತ್ ರಾಜ್ ನಟನೆ?
Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ