ಸಾವಯವ ಕೃಷಿಯೇ ಪರಮೋನ್ನತ ಪರಿಹಾರ: ಡಾ| ಭಾಗವತ್‌


Team Udayavani, Mar 3, 2021, 8:45 AM IST

ಸಾವಯವ ಕೃಷಿಯೇ ಪರಮೋನ್ನತ ಪರಿಹಾರ: ಡಾ| ಭಾಗವತ್‌

ಮಣಿಪಾಲ : ಸಾವಯವ ಕೃಷಿಗೆ ಒತ್ತು ನೀಡುವುದು ಮತ್ತು ಬೆಳೆದ ಉತ್ಪನ್ನಗಳಿಗೆ ಯೋಗ್ಯ ಬೆಲೆ, ಅಗತ್ಯವಾದ ಮಾರುಕಟ್ಟೆ ಕಲ್ಪಿಸುವುದೇ ಕೃಷಿ ಕ್ಷೇತ್ರದ ಸುಧಾರಣೆಗೆ ಇರುವ ಅತ್ಯುತ್ತಮ ಮಾರ್ಗ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘಚಾಲಕ ಡಾ| ಮೋಹನ್‌ ಭಾಗವತ್‌ ಅಭಿಪ್ರಾಯಪಟ್ಟಿದ್ದಾರೆ.

ಮಣಿಪಾಲ ಸಮೂಹ ಸಂಸ್ಥೆಗಳಿಗೆ ಮಂಗಳವಾರ ಭೇಟಿ ನೀಡಿದ ಸಂದರ್ಭ “ಉದಯವಾಣಿ’ ಸಂಪಾದಕೀಯ ಬಳಗದೊಂದಿಗೆ ಅಭಿಪ್ರಾಯವನ್ನು ಹಂಚಿಕೊಂಡರು.

ಸ್ಥಳೀಯ ಕೃಷಿ ಪದ್ಧತಿಯನ್ನು ಮತ್ತಷ್ಟು ಸದೃಢಗೊಳಿಸಬೇಕಾಗಿದೆ. ಜತೆಗೆ ಸ್ಥಳೀಯ ಕೃಷಿ ಉತ್ಪನ್ನಗಳಿಗೆ ಸೂಕ್ತ ಮಾರುಕಟ್ಟೆಯನ್ನು ಒದಗಿಸಬೇಕು. ಕೃಷಿ ಉತ್ಪನ್ನಗಳನ್ನು ಹಾಳಾಗದಂತೆ ಕಾಪಾಡಿ ಕೊಳ್ಳುವ ವ್ಯವಸ್ಥೆ ಮತ್ತು ತಂತ್ರಜ್ಞಾನ ಸ್ಥಳೀಯ ನೆಲೆಯಲ್ಲೇ ಲಭ್ಯವಾಗುವಂತೆ ಮಾಡಬೇಕು. ಇವೆಲ್ಲ ಜತೆಯಾಗಿ ಸಾಧ್ಯವಾದರೆ ಕೃಷಿ ಕ್ಷೇತ್ರ ಉಚ್ಛ್ರಾಯ ಸ್ಥಿತಿಯನ್ನು ತಲುಪಬಲ್ಲುದು ಎಂದು ಡಾ| ಭಾಗವತ್‌ ಪ್ರತಿಪಾದಿಸಿದರು.

ವಿಷಮುಕ್ತ- ಉಪಯುಕ್ತ ಸಾವಯವ ಕೃಷಿ
ವಿಷಮುಕ್ತ – ಉಪಯುಕ್ತ ಸಾವಯವ ಕೃಷಿಗೆ ಒತ್ತು ನೀಡಬೇಕು. ಇದು ಎಲ್ಲರ ಆರೋಗ್ಯವನ್ನೂ ಕಾಪಾಡಲಿದೆ. ಕಾಲೇಜು, ಪ್ರಯೋಗಾಲಯಗಳಲ್ಲಿ ಹೇಳಿಕೊಡುವ ವೈಜ್ಞಾನಿಕತೆ, ಕೌಶಲ ನಮ್ಮ ಪಾರಂಪರಿಕ ಕೃಷಿ ಪದ್ಧತಿಯಲ್ಲಿದೆ. ಆಧುನಿಕ ಕೃಷಿ ತಂತ್ರಜ್ಞಾನ – ವಿಜ್ಞಾನ ಬಳಕೆಗೆ ಬರುವುದಕ್ಕೆ ಮುನ್ನವೇ ನಮ್ಮ ದೇಶದ ಪಾರಂಪರಿಕ ಕೃಷಿ ಪದ್ಧತಿಯಲ್ಲಿ ಈ ಬಗೆಗಿನ ಒಳನೋಟಗಳು ಇದ್ದವು. ಅವು ಪ್ರಾಯೋಗಿಕ ಬಳಕೆಯ ಅನುಭವದ ಮೂಲಕ ಶ್ರುತಪಟ್ಟವು ಆಗಿದ್ದವು. ಹಿಂದೆ ಅತೀ ಹೆಚ್ಚು ಆಹಾರ ಧಾನ್ಯದ ತಳಿಗಳನ್ನು ನಮ್ಮ ದೇಶವೇ ಹೊಂದಿತ್ತು. ಇಂದಿಗೂ ನೂರಾರು ಅತ್ಯುತ್ತಮವಾದ ಮತ್ತು ನಮ್ಮ ದೇಶದ ವಾತಾವರಣಕ್ಕೆ ಒಗ್ಗಿಕೊಳ್ಳಬಲ್ಲ ಆಹಾರ ತಳಿಗಳು ಉಳಿದಿವೆ. ಅವುಗಳನ್ನು ಪುನರುಜ್ಜೀವನಗೊಳಿಸಬೇಕಿದೆ. ಬಿಹಾರ ದಲ್ಲಿ 12 ಎಕ್ರೆ ಸ್ಥಳದಲ್ಲಿ ಜೈವಿಕ ಕೃಷಿ ವಿಧಾನದಲ್ಲಿ ಉತ್ತಮ ಲಾಭ ಗಳಿಸಿದ ಉದಾಹರಣೆಯೂ ಇದೆ. ಇಲ್ಲಿ ಸೀಡ್ಸ್‌ (ಬೀಜ)ನಿಂದ ಹಿಡಿದು ಪೆಸ್ಟಿಸೈಡ್ಸ್‌ (ಕೀಟನಾಶಕ) ವರೆಗೆ ಎಲ್ಲವೂ ದೇಸೀತನದಿಂದ ಕೂಡಿವೆ. ಸಾವಯವ ಕೃಷಿಯನ್ನು ಅನುಸರಿಸುತ್ತಿರುವ ಬಹುತೇಕ ಎಲ್ಲ ರೈತರು ಇಳುವರಿ ವೃದ್ಧಿ – ಆದಾಯ ವೃದ್ಧಿಯ ದುಪ್ಪಟ್ಟು ಪ್ರಯೋಜನವನ್ನು ಅನುಭವಿಸುತ್ತಿದ್ದಾರೆ. ಮಿಶ್ರ ಕೃಷಿಯನ್ನು ನಾವು ಹೆಚ್ಚು ಹೆಚ್ಚು ಅವಲಂಬಿಸಬೇಕು. ಎಷ್ಟೋ ಕಡೆಗಳಲ್ಲಿ ಅತ್ಯಾಧುನಿಕ ಶಿಕ್ಷಣ ಪಡೆದ ಯುವಕರು ಕೃಷಿ ಕಾರ್ಯಕ್ಕೆ ಹಿಂದಿರುಗುತ್ತಿರುವುದು ಆಶಾದಾಯಕ ಬೆಳವಣಿಗೆ ಎಂದು ಡಾ| ಭಾಗವತ್‌ ತಿಳಿಸಿದರು.

ಟಾಪ್ ನ್ಯೂಸ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.