ಅಮಾಸೆಬೈಲಿಗೆ ಇಸಿಜಿ ಯಂತ್ರ ಕೊಡುಗೆಯ ಭರವಸೆ ನೀಡಿದ ಹೃದ್ರೋಗ ತಜ್ಞ ಡಾ| ಪದ್ಮನಾಭ ಕಾಮತ್
Team Udayavani, Apr 21, 2021, 7:15 AM IST
ಕುಂದಾಪುರ : ಸಾರ್ವಜನಿಕ ಆಸ್ಪತ್ರೆಯಿಲ್ಲದೆ ತುರ್ತು ಚಿಕಿತ್ಸೆಗಾಗಿ ಹತ್ತಾರು ಕಿ.ಮೀ. ದೂರ ಸಂಚರಿಸ ಬೇಕಾದ ಅನಿವಾರ್ಯತೆಯಿರುವ ಅಮಾಸೆಬೈಲಿನ ಜನರಿಗೆ ನೆರವಾಗುವ ನಿಟ್ಟಿನಲ್ಲಿ ಹೃದ್ರೋಗ ವೈದ್ಯರೊಬ್ಬರು ಇಸಿಜಿ ಯಂತ್ರವನ್ನು ಕೊಡುಗೆಯಾಗಿ ನೀಡಲು ಮುಂದಾಗಿದ್ದಾರೆ.
ಅಮಾಸೆಬೈಲಿನಲ್ಲಿ ಆಸ್ಪತ್ರೆಯಿಲ್ಲದೆ ಜನ ಅನುಭವಿಸುತ್ತಿರುವ ಸಂಕಷ್ಟದ ಕುರಿತಂತೆ ಉದಯವಾಣಿಯಲ್ಲಿ ಎ. 20ರಂದು ಪ್ರಕಟಗೊಂಡ ವರದಿಗೆ ಸ್ಪಂದಿಸಿದ ಕೆಎಂಸಿ ಮಂಗಳೂರಿನ ಹೃದ್ರೋಗ ವಿಭಾಗದ ಮುಖ್ಯಸ್ಥ ಡಾ| ಪದ್ಮನಾಭ ಕಾಮತ್ “ಕಾರ್ಡಿಯೋಲಜಿ ಆಟ್ ಡೋರ್ ಸ್ಟೆಪ್ ಫೌಂಡೇಶನ್’ ಮೂಲಕವಾಗಿ ಅಲ್ಲಿಗೆ ಇಸಿಜಿ ಯಂತ್ರ ನೀಡುವುದಾಗಿ ತಿಳಿಸಿದ್ದಾರೆ.
ಈ ಕುರಿತಂತೆ “ಉದಯವಾಣಿ’ ಜತೆ ಮಾತನಾಡಿದ ಕುಂದಾಪುರ ಆರೋಗ್ಯಾಧಿಕಾರಿ ಡಾ| ನಾಗಭೂಷಣ ಉಡುಪ ಅವರು, “ಉದಯವಾಣಿ’ ಯಲ್ಲಿ ಪ್ರಕಟಗೊಂಡ ವರದಿಯನ್ನು ನೋಡಿ ಡಾ| ಪದ್ಮನಾಭ ಕಾಮತ್ ಕರೆ ಮಾಡಿ, ಅಲ್ಲಿಗೆ ಇಸಿಜಿ ಯಂತ್ರ ಕೊಡುವುದಾಗಿ ತಿಳಿಸಿದ್ದಾರೆ. ಅದನ್ನು ಸದ್ಯ ಅಮಾಸೆಬೈಲಿನಲ್ಲಿರುವ ಆಯುಷ್ ಆರೋಗ್ಯ ಮತ್ತು ಕ್ಷೇಮ ಕೇಂದ್ರದಲ್ಲಿಟ್ಟು, ಒಬ್ಬರಿಗೆ ತರಬೇತಿ ನೀಡಿ, ಅದರ ಬಗ್ಗೆ ತಿಳಿಸಿಕೊಟ್ಟು, ಜನರಿಗೆ ನೆರವಾಗುವಂತೆ ಮಾಡಲಾಗುವುದು ಎಂದವರು ತಿಳಿಸಿದ್ದಾರೆ.
ಉದಯವಾಣಿ ವರದಿ: ಅಮಾಸೆಬೈಲಿನ ಕೆಳಸುಂಕ, ಕೆಲಾ, ಶ್ಯಾಮೆಹಕ್ಲು, ತೊಂಬಟ್ಟು, ನಡಂಬೂರು ಮತ್ತಿತರ ಭಾಗದ ಜನರು ತುರ್ತು ಚಿಕಿತ್ಸೆಗಾಗಿ 20-25 ಕಿ.ಮೀ. ದೂರ ಸಂಚರಿಸಬೇಕಾಗಿದ್ದು, ಈ ಬಗ್ಗೆ “ಉದಯವಾಣಿ’ ಎ. 20 ರಂದು ವಿಶೇಷ ವರದಿ ಪ್ರಕಟಿಸಿ ಗಮನಸೆಳೆದಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ
Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ
Kerala-ಕರ್ನಾಟಕ-ತಮಿಳುನಾಡು ತ್ರಿಜಂಕ್ಷನ್: ಮತ್ತೆ ನಕ್ಸಲರ ಸದ್ದು?
Hebri; ಸ್ಕೂಟಿಗೆ ಕಾರು ಢಿಕ್ಕಿ,ಸವಾರ ಸ್ಥಳದಲ್ಲೇ ಸಾವು
Temple History: ಶ್ರೀ ವಡಭಾಂಡೇಶ್ವರ ಬಲರಾಮ ದೇವಸ್ಥಾನ; ಹಿನ್ನೆಲೆ, ಇತಿಹಾಸ,ವಿಶೇಷಗಳು
MUST WATCH
ಹೊಸ ಸೇರ್ಪಡೆ
Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ
Telangana: ಜಾರ್ಖಂಡ್ ಗವರ್ನರ್ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ
Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ
ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ
Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ