
“ಭಾರತೀಯ ಕ್ರಿಕೆಟಿಗೆ ದ್ರಾವಿಡ್ ಕೊಡುಗೆ ಅಪಾರ’ : ಗಂಗೂಲಿ
Team Udayavani, Mar 10, 2021, 6:10 AM IST

ಹೊಸದಿಲ್ಲಿ: ಟೀಮ್ ಇಂಡಿಯಾ ಇಂಗ್ಲೆಂಡ್ ವಿರುದ್ಧ 3-1 ಅಂತರದಿಂದ ಟೆಸ್ಟ್ ಸರಣಿ ಗೆದ್ದು, ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ಗೆ ಅರ್ಹತೆ ಪಡೆದ ಬೆನ್ನಲ್ಲೇ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ “ಗೋಡೆ’ ಖ್ಯಾತಿಯ ರಾಹುಲ್ ದ್ರಾವಿಡ್ ಅವರ ಗುಣಗಾನ ಮಾಡಿದ್ದಾರೆ. ತಂಡದಲ್ಲಿ ಮಿಂಚಿದ ಯುವ ಆಟಗಾರರೆಲ್ಲ ದ್ರಾವಿಡ್ ಗರಡಿಯಲ್ಲಿ ಪಳಗಿದವರು ಎಂದಿದ್ದಾರೆ.
ಆಸ್ಟ್ರೇಲಿಯ ಹಾಗೂ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗಳಲ್ಲಿ ಹಿರಿಯ ಆಟಗಾರರಿಗಿಂತ ಯುವ ಆಟಗಾರರೇ ಹೆಚ್ಚು ಮಿಂಚಿದ್ದರು. ರಿಷಭ್ ಪಂತ್, ವಾಷಿಂಗ್ಟನ್ ಸುಂದರ್, ಮೊಹಮ್ಮದ್ ಸಿರಾಜ್ ಸೇರಿದಂತೆ ಕಿರಿಯ ಕ್ರಿಕೆಟಿಗರು ಟೀಮ್ ಇಂಡಿಯಾದಲ್ಲಿ ಅಬ್ಬರಿಸುತ್ತಿದ್ದಾರೆ. ಈ ಯುವ ಪ್ರತಿಭೆಗಳನ್ನು ರಾಷ್ಟ್ರೀಯ ತಂಡಕ್ಕೆ ಕಳುಹಿಸಿದ ಕೀರ್ತಿ ಮಾಜಿ ನಾಯಕ ಹಾಗೂ ನ್ಯಾಶನಲ್ ಕ್ರಿಕೆಟ್ ಅಕಾಡೆಮಿಯ ನಿರ್ದೇಶಕ ರಾಹುಲ್ ದ್ರಾವಿಡ್ಗೆ ಸಲ್ಲುತ್ತದೆ ಎಂದು ಗಂಗೂಲಿ ಹೇಳಿದರು.
ಅದ್ಭುತ ಕಾರ್ಯ ನಿರ್ವಹಣೆ
ಬೆಂಗಳೂರಿನ ನ್ಯಾಶನಲ್ ಕ್ರಿಕೆಟ್ ಅಕಾಡೆಮಿಯಲ್ಲಿ ರಾಹುಲ್ ದ್ರಾವಿಡ್ ಅದ್ಭುತ ಕಾರ್ಯ ನಿರ್ವಹಿಸುತ್ತಿದ್ದಾರೆಂದು ನಾನು ಯಾವಾಗಲೂ ಹೇಳುತ್ತೇನೆ. ಎರಡನೇ ಆಧ್ಯತೆಯ ಹಲವು ಪ್ರತಿಭಾನ್ವಿತ ಆಟಗಾರರನ್ನು ರಾಹುಲ್ ದ್ರಾವಿಡ್ ಭಾರತ ತಂಡಕ್ಕೆ ಕೊಡುಗೆಯಾಗಿ ನೀಡಿದ್ದಾರೆ ಎಂದು ಹೇಳಿದರು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Thailand Open badminton ಸೆಮಿಯಲ್ಲಿ ಸೋತ ಲಕ್ಷ್ಯ ಸೇನ್

French Open Grand Slam-2023: ರುನೆ, ಸ್ವಿಯಾಟೆಕ್, ಗಾಫ್ ಮುನ್ನಡೆ

WTC Final 2023: ಐಪಿಎಲ್ ನ ಆಟವನ್ನು ಮುಂದುವರಿಸುತ್ತೇನೆ ಎಂದ ಅಜಿಂಕ್ಯ ರಹಾನೆ

WTC Final 2023: ಪಂದ್ಯ ರದ್ದಾದರೆ ಅಥವಾ ಡ್ರಾ ಆದರೆ ಚಾಂಪಿಯನ್ ಯಾರು?

ಈ ಸರಣಿಯ ಬಳಿಕ ಟೆಸ್ಟ್ ಕ್ರಿಕೆಟ್ ನಿಂದ ನಿವೃತ್ತಿಯಾಗುತ್ತೇನೆ: ವಾರ್ನರ್ ಅಚ್ಚರಿಯ ಹೇಳಿಕೆ
MUST WATCH

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು
