ಕಿತ್ತು ಹೋದ ಬಸ್ಸಿನ ಚಕ್ರ ! ಅಪಾಯ ತಪ್ಪಿಸಿ ಪ್ರಯಾಣಿಕರ ಜೀವ ರಕ್ಷಿಸಿದ ಬಸ್ ಚಾಲಕ
Team Udayavani, Oct 14, 2020, 11:39 AM IST
ವಿಜಯಪುರ: ಚಲಿಸುತ್ತಿದ್ದ ಬಸ್ಸಿನ ಹಿಂದಿ ಚಕ್ರ ಕಳಚಿ ಬಿದ್ದರೂ ಸಂಭವನೀಯ ಭಾರಿ ಅಪಾಯವನ್ನು ತಪ್ಪಿಸುವಲ್ಲಿ ಸಮಯ ಪ್ರಜ್ಞೆ ಮೆರೆಯುವಲ್ಲಿ ಚಾಲಕ ಯಶಸ್ವಿಯಾಗಿದ್ದಾನೆ.
ಬುಧವಾರ ಬೆಳಿಗ್ಗೆ ಮುದ್ದೇಬಿಹಾಳ ಪಟ್ಟಣದಿಂದ ನಾರಾಯಣಪುರಗೆ ಹೊರಟಿದ್ದ ಸಾರಿಗೆ ಸಂಸ್ಥೆಯ ಬಸ್, ನಾಲತವಾಡ ಬಳಿ ಬರುತ್ತಲೇ ಬಸ್ಸಿನ ಹಿಂಬದಿ ಚಕ್ರ ಕಳಚಿದೆ. ಕೂಡಲೇ ಎಚ್ಚೆತ್ತ ಚಾಲಕ ಬಸವರಾಜ ಕರಿಭಾವಿ, ತಮ್ಮಲ್ಲಿನ ಚಾಲನಾ ಕೌಶಲ್ಯದಿಂದ ಬಸ್ ನಿಯಂತ್ರಣಕ್ಕೆ ತಂದು, ಸುರಕ್ಷಿತವಾಗಿ ನಿಲ್ಲಿಸಿದ್ದಾರೆ.
ನಾಲತವಾಡ ಪಟ್ಟಣದ ಹೆಸ್ಕಾಂ ಕಛೇರಿ ಎದುರು ಈ ಘಟನೆ ನಡೆದಿದ್ದು ಘಟನೆ ಸಂಭವಿಸಿದ ಸ್ಥಳದಲ್ಲಿ ರಸ್ತೆ ಇಳಿಜಾರಿನಿಂದ ಕೂಡಿದ್ದರೂ ಸಮಯ ಪ್ರಜ್ಞೆ ಮೆರೆದ ಚಾಲಕ ಅಪಘಾತದ ಅಪಾಯ ತಪ್ಪಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಇದನ್ನೂ ಓದಿ: ರೋಣ : ಭಾರಿ ಮಳೆಗೆ ಮನೆ ಕುಸಿದು ಬಿದ್ದು 70 ವರ್ಷದ ವೃದ್ಧೆ ಸಾವು
ಚಕ್ರ ಕಳಚಿ ಸುಮಾರು 200 ಮೀಟರ್ ದೂರಕ್ಕೆ ಹೋಗಿದ್ದ ಬಸ್ ನಲ್ಲಿ ಐವರು ಪ್ರಯಾಣಿಕರು, ಕಂಡಕ್ಟರ್ ಸೇರಿ ಏಳು ಮಂದಿ ಪ್ರಯಾಣಿಸುತ್ತಿದ್ದರು. ಚಾಲಕ ಬಸವರಾಜ ಅಪಾಯ ಎದುರಾದರೂ ಧೃತಿಗೆಡದೆ ನಮ್ಮ ಜೀವ ರಕ್ಷಿಸಿದ್ದಾರೆ ಎಂದು ಪ್ರಯಾಣಿಕರು ಕೃತಜ್ಞತೆ ಸಲ್ಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
MUST WATCH
ಹೊಸ ಸೇರ್ಪಡೆ
ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ
Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!