ಜಮ್ಮುವಿಗೆ ಪಾಕ್ನ ಡ್ರೋನ್ ಕಳ್ಳಾಟ : ಸೌಂಜಾನಾ ಗ್ರಾಮದಲ್ಲಿ ಶಸ್ತ್ರಾಸ್ತ್ರ ವಶಕ್ಕೆ
Team Udayavani, Oct 3, 2021, 9:30 PM IST
ಜಮ್ಮು: ಉಗ್ರರಿಗೆ ತರಬೇತಿ ಕೊಟ್ಟು ಜಮ್ಮು ಕಾಶ್ಮೀರದೊಳಗೆ ನುಗ್ಗಿಸುತ್ತಿರುವ ಪಾಕಿಸ್ತಾನ, ಈಗ ಡ್ರೋನ್ ಮೂಲಕ ಶಸ್ತ್ರಾಸ್ತ್ರಗಳನ್ನೂ ತಂದು ಸುರಿಯುತ್ತಿದೆ. ಜಮ್ಮು ಜಿಲ್ಲೆಯ ಆರ್.ಎಸ್.ಪುರ ಸೆಕ್ಟರ್ನ ಸೌಂಜಾನಾ ಎಂಬ ಗ್ರಾಮದಲ್ಲಿ ಈ ಘಟನೆ ನಡೆದಿದೆ.
ಮೂವತ್ತು ಸುತ್ತುಗಳಷ್ಟು ಸಜೀವ ಗುಂಡುಗಳು, ಎ.ಕೆ.ರೈಫಲ್, ಎ.ಕೆ. ರೈಫಲ್ನ 3 ಮ್ಯಾಗಜಿನ್ಗಳು, ಟೆಲೆಸ್ಕೋಪ್ಗಳು ಸ್ಥಳದಲ್ಲಿ ಪತ್ತೆಯಾಗಿವೆ. ಅಂತಾರಾಷ್ಟ್ರೀಯ ಗಡಿ ಪ್ರದೇಶದಿಂದ ಕೇವಲ ಆರು ಕಿಮೀ ದೂರದಲ್ಲಿ ಈ ಘಟನೆ ನಡೆದಿದೆ. ಯಾವುದೋ ಹಾರುವ ವಸ್ತುವಿನ ಮೂಲಕ ಬ್ಯಾಗ್ ಒಂದನ್ನು ಎಸೆಯಲಾಗಿದೆ ಎಂದು ಗ್ರಾಮಸ್ಥರು ಸ್ಥಳೀಯ ಠಾಣೆಗೆ ಮಾಹಿತಿ ನೀಡಿದ್ದರು. ಅದನ್ನು ಆಧರಿಸಿ ಶೋಧ ಕಾರ್ಯ ನಡೆಸಿದಾಗ ಬ್ಯಾಗ್ ಪತ್ತೆಯಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚಂದನ್ ಕೋಹ್ಲಿ ತಿಳಿಸಿದ್ದಾರೆ.
ಈ ಬಗ್ಗೆ ಮಾತನಾಡಿದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು, ಡ್ರೋನ್ ಮೂಲಕ ಶಸ್ತ್ರಾಸ್ತ್ರಗಳನ್ನು ರವಾನಿಸುವ ಮೂಲಕ ಕೇಂದ್ರಾಡಳಿತ ಪ್ರದೇಶದಲ್ಲಿ ಉಗ್ರ ಸಂಘಟನೆಗಳ ಪರವಾಗಿ ಕೆಲಸ ಮಾಡುವವರಿಗೆ ನೆರವಾಗುತ್ತಿದೆ ಎನ್ನುವುದು ಮತ್ತೂಮ್ಮೆ ಸ್ಪಷ್ಟವಾಗಿದೆ ಎಂದಿದ್ದಾರೆ. ಜತೆ ಗ್ರಾಮದಲ್ಲಿ ಪೊಲೀಸ್ ಬಂದೋಬಸ್ತ್ ಮತ್ತು ತನಿಖೆ ಬಿರುಸುಗೊಳಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಸು ದಾಖಲಾಗಿದೆ.
ತಾವಿಯ ನಾಲ್ಕನೇ ಸೇತುವೆ ಸಮೀಪ ಇರುವ ಸೌಂಜಾನಾ ಗ್ರಾಮದಲ್ಲಿ ಇತ್ತೀಚಿನ ದಿನಗಳಲ್ಲಿ ರಾಜಕೀಯ ಕೃಪೆ ಮೂಲಕ ಹೆಚ್ಚಿನ ಪ್ರಮಾಣದಲ್ಲಿ ಭೂ ಒತ್ತುವರಿ ನಡೆಯುತ್ತಿದೆ. ಉಗ್ರ ಸಂಘಟನೆಗಳ ಪರವಾಗಿ ಕೆಲಸ ಮಾಡುವವರೂ ಇಂಥ ಕೃತ್ಯದಲ್ಲಿ ತೊಡಗಿಸಿಕೊಂಡಿರುವ ಸಾಧ್ಯತೆಯೂ ಇಲ್ಲದೇ ಇಲ್ಲ ಎಂದು ಆ ಅಧಿಕಾರಿ ಹೇಳಿಕೊಂಡಿದ್ದಾರೆ.
ಇದನ್ನೂ ಓದಿ :ಉಡುಪಿ ಜಿಲ್ಲೆಯಲ್ಲಿ ಶೇ.80ರಷ್ಟು ಪಡಿತರ ಕಾರ್ಡ್ಗಳ ಇ-ಕೆವೈಸಿ ಪೂರ್ಣ
ಜಮ್ಮುವಿನಲ್ಲಿರುವ ಭಾರತೀಯ ವಾಯುಪಡೆಯ ಕೇಂದ್ರಕ್ಕೆ ಡ್ರೋನ್ ಮೂಲಕ ಎರಡು ಬಾಂಬ್ಗಳನ್ನು ಹಾಕಿ ದಾಳಿ ನಡೆಸುವ ಪ್ರಯತ್ನ ನಡೆಸಲಾಗಿತ್ತು. ಇದಾದ ಬಳಿಕ ಎಲ್ಒಸಿ ಮತ್ತು ಅಂತಾರಾಷ್ಟ್ರೀಯ ಗಡಿ ಪ್ರದೇಶದಲ್ಲಿ ಭಾರೀ ಬಂದೋಬಸ್ತ್ ಏರ್ಪಡಿಸಲಾಗಿದೆ.
ಹಿಂದಿನ ಪ್ರಮುಖ ಡ್ರೋನ್ ಘಟನೆಗಳು :
– ಆ.23- ಅರ್ನಿಯಾ ಸೆಕ್ಟರ್ನಲ್ಲಿ ಕಂಡಿದ್ದ ಡ್ರೋನ್ ಅನ್ನು ಬಿಎಸ್ಎಫ್ ಹೊಡೆದು ಉರುಳಿಸಿದ್ದರು.
– ಜು.24- ಅಖೂ°ರ್ ಸೆಕ್ಟರ್ನಲ್ಲಿ 5 ಕೆಜಿ ಶಸ್ತ್ರಾಸ್ತ್ರ ಹೊಂದಿದ್ದ ಯುಎವಿಗೆ ಗುಂಡು
– 360- 2019ರಿಂದ ಪಾಕಿಸ್ತಾನ ಕಳುಹಿಸಿದ ಯುಎವಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ