ಆರ್ಯನ್ ಖಾನ್ ಡ್ರಗ್ಸ್ ಕೇಸ್; ಬಾಲಿವುಡ್ ಅನ್ನು ಮುಂಬಯಿನಿಂದ ಸ್ಥಳಾಂತರಿಸಲು ಬಿಜೆಪಿ ಸಂಚು ?
ಸಮೀರ್ ವಾಂಖೇಡೆ ಭಯದಿಂದ ಬಂಧನದಿಂದ ರಕ್ಷಣೆ ಕೋರಿ ಬಾಂಬೆ ಹೈಕೋರ್ಟ್ ಮೆಟ್ಟಿಲೇರಿರುವುದಾಗಿ ಮಲಿಕ್ ತಿಳಿಸಿದ್ದಾರೆ.
Team Udayavani, Oct 29, 2021, 11:55 AM IST
ಮುಂಬಯಿ: ಐಶಾರಾಮಿ ಹಡಗಿನಲ್ಲಿನ ಡ್ರಗ್ಸ್ ಪ್ರಕರಣ ಭಾರತೀಯ ಜನತಾ ಪಕ್ಷದ ವ್ಯವಸ್ಥಿತ ಸಂಚು ಇದಾಗಿದೆ ಎಂದು ಮಹಾರಾಷ್ಟ್ರ ಸಚಿವ ನವಾಬ್ ಮಲಿಕ್ ಆರೋಪಿಸಿದ್ದು, ಇದು ಬಾಲಿವುಡ್ ಅನ್ನು ಮುಂಬೈನಿಂದ ಸ್ಥಳಾಂತರಿಸುವ ಬಿಜೆಪಿಯ ಪಿತೂರಿಯಾಗಿದೆ ಎಂದು ಹೇಳಿದರು.
ಇದನ್ನೂ ಓದಿ:ಡ್ರಗ್ಸ್ ವಿರುದ್ಧ ನಾನು ಯುದ್ಧ ಸಾರಿದ್ದೇನೆ: ಸಿಎಂ ಬಸವರಾಜ ಬೊಮ್ಮಾಯಿ
ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಇತ್ತೀಚೆಗೆ ನೋಯ್ಡಾದಲ್ಲಿ ಫಿಲ್ಮ್ ಸಿಟಿ ಸ್ಥಾಪಿಸುವ ಕುರಿತು ಸಿನಿಮಾ ಕ್ಷೇತ್ರದ ಗಣ್ಯರ ಜತೆ ಸಭೆಗಳನ್ನು ನಡೆಸಿರುವ ಬಗ್ಗೆ ಮಲಿಕ್ ಉಲ್ಲೇಖಿಸಿದ್ದಾರೆ.
ಬಾಲಿವುಡ್ ಅನ್ನು ಮಹಾರಾಷ್ಟ್ರದಿಂದ ಸ್ಥಳಾಂತರಿಸುವ ಬಿಜೆಪಿ ಸಂಚು ಇದಾಗಿದೆ ಎಂದು ನವಾಬ್ ಮಲಿಕ್ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಹೇಳಿದರು. ಎನ್ ಸಿಬಿ ಅಧಿಕಾರಿ ಸಮೀರ್ ವಾಂಖೇಡೆ ಭಯದಿಂದ ಬಂಧನದಿಂದ ರಕ್ಷಣೆ ಕೋರಿ ಬಾಂಬೆ ಹೈಕೋರ್ಟ್ ಮೆಟ್ಟಿಲೇರಿರುವುದಾಗಿ ಮಲಿಕ್ ತಿಳಿಸಿದ್ದಾರೆ.
ಈಗ ಪರಿಸ್ಥಿತಿ ಸಂಪೂರ್ಣ ಬದಲಾಗಿದೆ. ಆರ್ಯನ್ ಖಾನ್ ನನ್ನು ಎನ್ ಸಿಬಿ ಕಚೇರಿಗೆ ಎಳೆದ ವ್ಯಕ್ತಿ(ಕಿರಣ್ ಗೋಸಾವಿ) ಜೈಲು ಕಂಬಿ ಎಣಿಸುತ್ತಿದ್ದಾರೆ.ಆರ್ಯನ್ ಖಾನ್ ಮತ್ತು ಇತರರಿಗೆ ಜಾಮೀನು ನೀಡದಂತೆ ನೋಡಿಕೊಂಡಿದ್ದ ವ್ಯಕ್ತಿ ಇದೀಗ ಸ್ವತಃ ನಿನ್ನೆ ಕೋರ್ಟ್ ಬಾಗಿಲು ಬಡಿಯುವಂತಾಗಿದೆ ಎಂದು ಮಲಿಕ್ ವ್ಯಂಗ್ಯವಾಡಿರುವುದಾಗಿ ವರದಿ ತಿಳಿಸಿದೆ.
ಕಿರಣ್ ಗೋಸ್ವಾಮಿ ಡ್ರಗ್ಸ್ ಪ್ರಕರಣದ ಸಾಕ್ಷಿದಾರನಾಗಿದ್ದು, ಈತನನ್ನು 2018ರ ವಂಚನೆ ಪ್ರಕರಣದಲ್ಲಿ ಪುಣೆ ಪೊಲೀಸರು ಬುಧವಾರ ರಾತ್ರಿ ಬಂಧಿಸಿದ್ದರು. ಅಕ್ಟೋಬರ್ 3ರಂದು ಗೋವಾ ಮೂಲದ ಐಶಾರಾಮಿ ಹಡಗಿನ ಮೇಲೆ ಎನ್ ಸಿಬಿ ದಾಳಿ ನಡೆಸಿದ್ದ ಸಂದರ್ಭದಲ್ಲಿ ಆರ್ಯನ್ ಖಾನ್ ಜತೆ ಸೆಲ್ಫಿ ತೆಗೆದುಕೊಂಡಿದ್ದ ಕಿರಣ್ ಗೋಸಾವಿ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್ ನಲ್ಲಿ ಬಂಧನ
Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!
Loksabha election; ಕಾಂಗ್ರೆಸ್ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ
Lok Sabha Election; ಕೇಜ್ರಿವಾಲ್ ಸೆರೆ ಆಪ್ಗೆ ವರವೇ? ಶಾಪವೇ?
Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್ ಗೆ ಸುಪ್ರೀಂ
MUST WATCH
ಹೊಸ ಸೇರ್ಪಡೆ
Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್ ನಲ್ಲಿ ಬಂಧನ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
Dakshina Kannada; ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ