ಮನೆ ಬಾಗಿಲಿಗೆ ಮಾದಕ ವಸ್ತುಗಳು : ಸಿಸಿಬಿ ಪೊಲೀಸರಿಂದ ಜಾರ್ಖಂಡ್‌ ಮೂಲದ ಇಬ್ಬರ ಬಂಧನ


Team Udayavani, Sep 3, 2021, 9:15 PM IST

ಮನೆ ಬಾಗಿಲಿಗೆ ಮಾದಕ ವಸ್ತುಗಳು : ಸಿಸಿಬಿ ಪೊಲೀಸರಿಂದ ಜಾರ್ಖಂಡ್‌ ಮೂಲದ ಇಬ್ಬರ ಬಂಧನ

ಬೆಂಗಳೂರು : ಗ್ರಾಹಕರ ಬೇಡಿಕೆಗೆ ತಕ್ಕಂತೆ ಮನೆ ಬಾಗಿಲಿಗೆ ಡ್ರಗ್ಸ್‌ ಪೂರೈಕೆ ಮಾಡುತ್ತಿದ್ದ ಜಾರ್ಖಂಡ್‌ ಮೂಲದ ಇಬ್ಬರು ಆರೋಪಿಗಳನ್ನು ಕೇಂದ್ರ ಅಪರಾಧ ವಿಭಾಗ(ಸಿಸಿಬಿ) ಪೊಲೀಸರು ಬಂಧಿಸಿದ್ದಾರೆ.

ಜಾರ್ಖಂಡ್‌ ಮೂಲದ ವಿಕಾಸ್‌ ಕುಮಾರ್‌ ಸಿಂಗ್‌(25) ಮತ್ತು ಶಿವಂ ಸಿಂಗ್‌(27) ಬಂಧಿತರು. ಅವರಿಂದ ಎರಡು ಕೋಟಿ ರೂ. ಮೌಲ್ಯದ 150 ಎಂಡಿಎಂಎ, XYC ಮಾತ್ರೆಗಳು, 400 ಗ್ರಾಂ ಚರಸ್‌, 180 ಎಲ್‌ ಎಡಿ ಮಾತ್ರೆಗಳು, 3,520 ಗ್ರಾಂ ಹ್ಯಾಶಿಷ್‌ ಆಯಿಲ್‌, 50 ಗ್ರಾಂ ಹೈಡ್ರೋ ಗಾಂಜಾ, 30 ಕೆ.ಜಿ. ಗಾಂಜಾ, 2 ಮೊಬೈಲ್‌ ಗಳು, ಎರಡು ಎಲೆಕ್ಟ್ರಾನಿಕ್‌ ತೂಕದ ಯಂತ್ರಗಳನ್ನು ವಶಕ್ಕೆ ಪಡೆಯಲಾಗಿದೆ. ಇದೇ ವೇಳೆ ರೋಹಿತ್‌, ರವಿ, ಸೈಯದ್‌, ಅಕ್ಷಯ್‌ ಕುಮಾರ್‌ ಎಂಬುವರು ತಲೆಮರೆಸಿಕೊಂಡಿದ್ದು, ಹುಡುಕಾಟ ನಡೆಯುತ್ತಿದೆ ಎಂದು ಪೊಲೀಸರು ಹೇಳಿದರು.

ಆರೋಪಿಗಳು ಬಿಹಾರ ಮೂಲದ ದೆಹಲಿಯಲ್ಲಿರುವ ಅಕ್ಷಯ್‌ ಕುಮಾರ್‌, ಡಾರ್ಕ್‌ ವೆಬ್‌ ಸೈಟ್‌ನ ಟಾರ್‌ ಬ್ರೌಸರ್‌ ಬಳಸಿಕೊಂಡು ವಿಕರ್‌- ಮಿ-ವೆಬ್‌ ಸೈಟ್‌ನಿಂದ ವಿದೇಶಿ ಮಾರಾಟಗಾರನಿಗೆ ಬಿಟ್‌ ಕಾಯಿನ್‌ ಮೂಲಕ ಹಣ ಕಳುಹಿಸಿ ಕಡಿಮೆ ಬೆಲೆಗೆ ಮಾದಕ ವಸ್ತುಗಳನ್ನು ಬುಕ್‌ ಮಾಡುತ್ತಿದ್ದ.

ಆತ ಗಾಂಜಾ, ಹ್ಯಾಶಿಷ್‌ ಆಯಿಲ್‌, XYC ಮಾತ್ರೆಗಳು, ಚರಸ್‌, ಎಲ್‌ ಎಸ್‌ಡಿ ಮಾತ್ರೆಗಳು, ಹೈಡ್ರೋ ಗಾಂಜಾ ಕಳುಹಿಸುತ್ತಿದ್ದ. ಅಕ್ಷಯ್‌ ಕುಮಾರ್‌ ಅವುಗಳನ್ನು ಬೆಂಗಳೂರಿನ ಆರೋಪಿಗಳಿಗೆ ಕಳುಹಿಸಿ ನಿರ್ದಿಷ್ಟ ಗ್ರಾಹಕರಿಗೆ ಮನೆ ಬಾಗಿಲಿಗೆ ಡೆಲಿವರಿ ಮಾಡಿಸುತ್ತಿದ್ದ ಎಂದು ಸಿಸಿಬಿ ಪೊಲೀಸರು ಹೇಳಿದರು.

ಮನೆ ಬಾಗಿಲಿಗೆ ಡ್ರಗ್ಸ್‌
ವಿಕಾಸ್‌ ಕುಮಾರ್‌, ಶಿವಂ, ರೋಹಿತ್‌, ರವಿ, ಸೈಯದ್‌ ಗೆ ಮಾಸಿಕ ಇಂತಿಷ್ಟು ಸಂಬಳ ನಿಗದಿ ಪಡಿಸಿ ವೈಟ್‌ ಫೀಲ್ಡ್‌ನಲ್ಲಿ ಬಾಡಿಗೆ ಮನೆ ಮಾಡಿ, ಆ ಬಾಡಿಗೆ ಮೊತ್ತವನ್ನು ಅಕ್ಷಯ್‌ ಕುಮಾರ್‌ ಪಾವತಿಸುತ್ತಿದ್ದ. ಬಳಿಕ ನಿರ್ದಿಷ್ಟ ಗ್ರಾಹಕರು ಆರೋಪಿಗಳಿಗೆ ವಾಟ್ಸ್‌ ಆ್ಯಪ್‌ ಮೂಲಕ ಸಂದೇಶ ಅಥವಾ ಕರೆ ಮಾಡಿ ಇಂತಹ ಡ್ರಗ್ಸ್‌ ಬೇಕೆಂದು ಮನವಿ ಮಾಡುತ್ತಿದ್ದರು. ಅದರಂತೆ ಅವರಿಗೆ ಸಣ್ಣ-ಸಣ್ಣ ಪ್ಯಾಕೆಟ್‌ಗಳ ಮೂಲಕ ಮನೆ ಬಾಗಿಲಿಗೆ ಪೂರೈಕೆ ಮಾಡುತ್ತಿದ್ದರು.

ಇತ್ತೀಚೆಗೆ ವೈಟ್‌ ಫೀಲ್ಡ್‌ ಠಾಣಾ ವ್ಯಾಪ್ತಿಯಲ್ಲಿ ಮಾರಾಟ ಮಾಡುವಾಗ ಮಾಲು ಸಮೇತ ಸಿಕ್ಕಿ ಬಿದ್ದಿದ್ದಾರೆ. ಬಳಿಕ ಅವರನ್ನು ಮನೆಗೆ ಕರೆದೊಯ್ದು ಪರಿಶೀಲಿಸಿದಾಗ ಸಾಕಷ್ಟು ನಾನಾ ರೀತಿಯ ಡ್ರಗ್ಸ್‌ ಗಳು ಪತ್ತೆಯಾಗಿವೆ.

ಇನ್ನು ತಲೆಮರೆಸಿಕೊಂಡಿರುವ ರೋಹಿತ್‌, ರವಿ, ಸೈಯದ್‌ ಮೂಲಕ ಐಟಿ-ಬಿಟಿ ಕಂಪನಿಯ ಉದ್ಯೋಗಿಗಳಿಗೆ ಮಾದಕ ವಸ್ತು ಪೂರೈಕೆ ಮಾಡುತ್ತಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ ಎಂದು ಪೊಲೀಸರು ಹೇಳಿದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.