ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮೆರವಣಿಗೆ ವೇಳೆ ಹಿಂಸಾಚಾರ
Team Udayavani, Apr 2, 2023, 10:11 PM IST
ಕೋಲ್ಕತಾ : ಪಶ್ಚಿಮ ಬಂಗಾಳದ ಹೂಗ್ಲಿಯಲ್ಲಿ ಭಾನುವಾರ ರಾಮನವಮಿ ವಿಷಯವಾಗಿ ಬಿಜೆಪಿ ಮೆರವಣಿಗೆ ನಡೆಸುತ್ತಿದ್ದ ವೇಳೆ ಹಿಂಸಾಚಾರ ನಡೆದಿದೆ. ಈ ವಾರದ ಆರಂಭದಲ್ಲಿ ಹೌರಾದಲ್ಲಿ ರಾಮನವಮಿ ಮೆರವಣಿಗೆಯ ಸಂದರ್ಭದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆಗಳು ಸಂಭವಿಸಿದ್ದವು.
ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ದಿಲೀಪ್ ಘೋಷ್ ಅವರು ಇಂದು ‘ರಾಮ ನವಮಿ ಶೋಭಾ ಯಾತ್ರೆ’ಯಲ್ಲಿ ಭಾಗವಹಿಸಿದ್ದರು. ಮೆರವಣಿಗೆ ವೇಳೆ ಕಲ್ಲು ತೂರಾಟದ ನಡುವೆ ಜನರು ಸುರಕ್ಷತೆಗಾಗಿ ಓಡುತ್ತಿರುವ ದೃಶ್ಯಗಳು ವೈರಲ್ ಆಗಿವೆ.
ಹಿಂಸಾಚಾರಕ್ಕೆ ಕಾರಣರಾದವರ ವಿರುದ್ಧ ಇಂದು ರಾತ್ರಿ ಆರೋಪ ಹೊರಿಸಿ ಜೈಲಿಗೆ ಹಾಕಲಾಗುವುದು ಎಂದು ಬಂಗಾಳದ ರಾಜ್ಯಪಾಲ ಸಿವಿ ಆನಂದ ಬೋಸ್ ಹೇಳಿದ್ದಾರೆ. ಇಂದು ರಾತ್ರಿಯೇ ತಪ್ಪಿತಸ್ಥರ ವಿರುದ್ಧ ಆರೋಪ ಹೊರಿಸಲಾಗುವುದು ಮತ್ತು ಕಂಬಿ ಹಿಂದೆ ಹಾಕಲಾಗುವುದು. ನಾವು ನಿರ್ಧರಿಸಿದ್ದೇವೆ. ಈ ರೀತಿಯ ಗೂಂಡಾಗಿರಿಯು ಪ್ರಜಾಪ್ರಭುತ್ವ ಪ್ರಕ್ರಿಯೆಗಳನ್ನು ತಡೆಯುತ್ತದೆ ಎಂದು ಬೋಸ್ ಹೇಳಿದ್ದಾರೆ.
ಹಿಂಸಾಚಾರದ ಹಿಂದೆ ತೃಣಮೂಲ ಕಾಂಗ್ರೆಸ್ ಕೈವಾಡವಿದೆ ಎಂದು ಬಂಗಾಳ ಬಿಜೆಪಿ ಮುಖ್ಯಸ್ಥ ಸುಕಾಂತ ಮಜುಂದಾರ್ ಆರೋಪಿಸಿದ್ದಾರೆ. ಬಿಜೆಪಿ ಶೋಭಾ ಯಾತ್ರೆ ಮೇಲೆ ಹೂಗ್ಲಿಯಲ್ಲಿ ದಾಳಿ ನಡೆದಿದೆ. ಕಾರಣ ಸರಳ ಮತ್ತು ಸ್ಪಷ್ಟವಾಗಿದೆ. ಮಮತಾ ಬ್ಯಾನರ್ಜಿ ಹಿಂದೂಗಳನ್ನು ದ್ವೇಷಿಸುತ್ತಾರೆ ಎಂದು ಮಜುಂದಾರ್ ಟ್ವೀಟ್ ಮಾಡಿದ್ದಾರೆ.
ಸುಕಾಂತಾ ಮಜುಂದಾರ್ ಅವರು ಕೇಂದ್ರ ಸಚಿವ ಅಮಿತ್ ಶಾ ಅವರಿಗೆ ಹಿಂಸಾಚಾರದ ಕುರಿತು ಪತ್ರ ಬರೆದಿದ್ದು, ತತ್ ಕ್ಷಣದ ನೆರವು ಕೋರಿದ್ದಾರೆ.
ಹೂಗ್ಲಿಯಿಂದ ಸುಮಾರು 40 ಕಿಮೀ ದೂರದಲ್ಲಿರುವ ಹೌರಾದಲ್ಲಿ ಪರಿಸ್ಥಿತಿ ಶಾಂತಿಯುತವಾಗಿದೆ ಮತ್ತು ನಿಯಂತ್ರಣದಲ್ಲಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬೆಳಗ್ಗೆಯಿಂದಲೇ ಸಂಚಾರ ಆರಂಭಗೊಂಡಿದ್ದರಿಂದ ಅಂಗಡಿ, ಮಾರುಕಟ್ಟೆಗಳು ತೆರೆದಿದ್ದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MUST WATCH
ಹೊಸ ಸೇರ್ಪಡೆ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ