ಕರಾವಳಿಯಾದ್ಯಂತ ಈಸ್ಟರ್‌ ಸಂಡೆಯ ಸಡಗರ


Team Udayavani, Apr 5, 2021, 4:00 AM IST

ಕರಾವಳಿಯಾದ್ಯಂತ ಈಸ್ಟರ್‌ ಸಂಡೆಯ ಸಡಗರ

ಉಡುಪಿ/ ಮಂಗಳೂರು/ ಪುತ್ತೂರು: ಕ್ರೈಸ್ತರ ಪ್ರಮುಖ ಹಬ್ಬವೆನಿಸಿದ ಯೇಸು ಕ್ರಿಸ್ತರು ಶಿಲುಬೆಗೇರಿ ಮೂರನೇ ದಿನ ಪುನರುತ್ಥಾನಗೊಂಡ ಈಸ್ಟರ್‌ ಹಬ್ಬ (ಪಾಸ್ಕ ಜಾಗರಣೆ), ಈಸ್ಟರ್‌ ಸಂಡೆಯನ್ನು ಕ್ರೈಸ್ತರು ಕರಾವಳಿಯಾದ್ಯಂತ ಶನಿವಾರ ರಾತ್ರಿ ಆಚರಿಸಿದರು. ರವಿವಾರ ಕ್ರೈಸ್ತರು ಮನೆಗಳಲ್ಲಿ ಹಬ್ಬದ ಊಟವನ್ನು ಸವಿದರು.

ಶನಿವಾರ ಮಧ್ಯರಾತ್ರಿ 12 ಗಂಟೆವರೆಗೂ ವಿವಿಧ ಚರ್ಚುಗಳಲ್ಲಿ ಪೂಜೆಗಳು ನಡೆದವು. ಈ ಹಿಂದೆ ತಡವಾಗಿ ಆರಂಭಗೊಂಡು ರವಿವಾರ ಬೆಳಗ್ಗಿನವರೆಗೆ ನಡೆಯುತ್ತಿದ್ದರೆ ಈಗ ಕೊರೊನಾ ಮತ್ತಿತರ ಕಾರಣಗಳಿಂದ ಶನಿವಾರ ಮಧ್ಯರಾತ್ರಿಯೊಳಗೆ ಪೂಜೆಯನ್ನು ಮುಗಿಸಲಾಯಿತು.

ಮಂಗಳೂರು ಧರ್ಮಪ್ರಾಂತ
ಮಂಗಳೂರು: ದ.ಕ. ಜಿಲ್ಲೆಯಾದ್ಯಂತ ಈಸ್ಟರ್‌ ಹಬ್ಬವನ್ನು ಕ್ರೈಸ್ತ ಸಮುದಾಯದವರು ಶ್ರದ್ಧಾಭಕ್ತಿಯಿಂದ ಆಚರಿಸಿದರು.
ಕೊರೊನಾ ಮಾರ್ಗಸೂಚಿ ಪಾಲಿಸಿ ಚರ್ಚ್‌ಗಳಲ್ಲಿ ಹಬ್ಬವನ್ನು ಸರಳವಾಗಿ ಆಚರಿಸಲಾಯಿತು. ಶನಿವಾರ ರಾತ್ರಿ ಮತ್ತು ರವಿವಾರ ಬೆಳಗ್ಗೆ ಹಬ್ಬದ ಬಲಿಪೂಜೆಗಳು ನೆರವೇರಿದವು. ಮಂಗಳೂರಿನ ಬಿಷಪ್‌ ರೈ|ರೆ| ಡಾ| ಪೀಟರ್‌ ಪಾವ್‌É ಸಲ್ಡಾನ್ಹಾ ಅವರು ಪುತ್ತೂರು ತಾಲೂಕಿನ ನಿಡ³ಳ್ಳಿ ಚರ್ಚ್‌ನಲ್ಲಿ ಬಲಿಪೂಜೆ ನೆರವೇರಿಸಿದರು. ವಿವಿಧೆಡೆ ಚರ್ಚ್‌ ಗಳಲ್ಲಿ ಆಯಾಯಾ ಧರ್ಮಗುರುಗಳ ನೇತೃತ್ವದಲ್ಲಿ ಬಲಿಪೂಜೆ ನಡೆಯಿತು. ಶನಿವಾರ ರಾತ್ರಿ ಆಶೀರ್ವಚನ ಮಾಡಿದ ಪವಿತ್ರ ಜಲವನ್ನು ರವಿವಾರ ಭಕ್ತರಿಗೆ ವಿತರಿಸಲಾಯಿತು. ಕ್ರೈಸ್ತ ಬಾಂಧವರು ಮನೆಗಳಲ್ಲಿ ಹಬ್ಬದ ಊಟ ಸವಿದರು.

ಉಡುಪಿ ಧರ್ಮಪ್ರಾಂತ
ಉಡುಪಿ ಬಿಷಪ್‌ ರೈ| ರೆ| ಡಾ| ಜೆರಾಲ್ಡ… ಐಸಾಕ್‌ ಲೋಬೊ ನೇತೃತ್ವದಲ್ಲಿ ಶನಿವಾರ ರಾತ್ರಿ ಪಾಸ್ಕ ಜಾಗರಣೆ (ಈಸ್ಟರ್‌ ವಿಜಿಲ…) ಕಲ್ಯಾಣಪುರ ಮಿಲಾಗ್ರಿಸ್‌ ಕೆಥೆಡ್ರಲ್‌ನಲ್ಲಿ ಜರಗಿತು.

ಬೆಳ್ತಂಗಡಿ ಧರ್ಮಪ್ರಾಂತ
ಬೆಳ್ತಂಗಡಿ: ಇಲ್ಲಿನ ಸೈಂಟ್‌ ಲಾರೆನ್ಸ್‌ ಕೆಥೆಡ್ರಲ್‌ನಲ್ಲಿ ಯೇಸು ಕ್ರಿಸ್ತರ ಪುನರುತ್ಥಾನದ ಈಸ್ಟರ್‌ ಹಬ್ಬವನ್ನು ಶನಿವಾರ ರಾತ್ರಿ ಆಚರಿಸಲಾಯಿತು. ಬೆಳ್ತಂಗಡಿ ಧರ್ಮಪ್ರಾಂತದ ಧರ್ಮಾಧ್ಯಕ್ಷ ರೈ| ರೆ| ಲಾರೆನ್ಸ್‌ ಮುಕ್ಕುಯಿ ಪೂಜಾ ವಿಧಿ ನೆರವೇರಿಸಿದರು. ಧರ್ಮಪ್ರಾಂತದ ಚಾನ್ಸೆಲರ್‌ ವಂ| ಲಾರೆನ್ಸ್‌ ಪನೋಳಿಲ್‌ ಹಬ್ಬದ ಸಂದೇಶ ನೀಡಿದರು.
ವಂ| ಅಬ್ರಹಾಂ ಪಟ್ಟೇರಿಲ್‌, ವಂ| ಕುರಿಯಕೋಸ್‌ ವೆಟ್ಟುವರಿ, ವಂ| ಜೋಸೆಫ್‌ ವಾಲುಮಿಲ್‌, ವಂ| ತೋಮಸ್‌ ಕನ್ನಂಕಲ್‌ ಉಪಸ್ಥಿತರಿದ್ದರು.

ಈಸ್ಟರ್‌ ವಿಜಿಲ್‌ ಆಚರಣೆ
ಕ್ರೈಸ್ತರು ಹೊಸ ಬಟ್ಟೆ ತೊಟ್ಟು ಚರ್ಚ್‌ಗಳಲ್ಲಿ ನಡೆದ ಈಸ್ಟರ್‌ ವಿಜಿಲ್‌ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಪಾಸ್ಕ ಜಾಗರಣೆಯ ಧಾರ್ಮಿಕ ವಿಧಿವಿಧಾನಗಳು ಚರ್ಚ್‌ಗಳಲ್ಲಿ ಧರ್ಮಗುರುಗಳು ಹೊಸ ಬೆಂಕಿಯನ್ನು ಆಶೀರ್ವದಿಸುವ ಮೂಲಕ ಆರಂಭಗೊಂಡವು. ಆಶೀರ್ವದಿಸಿದ ಹೊಸ ಬೆಂಕಿಯಿಂದ ಬೃಹತ್‌ ಗಾತ್ರದ ಈಸ್ಟರ್‌ ಕ್ಯಾಂಡಲನ್ನು ಹಚ್ಚಿ ಮೆರವಣಿಗೆಯಲ್ಲಿ ಕೊಂಡೊಯ್ದು ಚರ್ಚ್‌ನಲ್ಲಿ ಪ್ರಧಾನ ಸ್ಥಳದಲ್ಲಿ ಪ್ರತಿಷ್ಠಾಪಿಸಲಾಯಿತು. ಹಳೆ ಒಡಬಂಡಿಕೆಯ ದೇವರ ವಾಕ್ಯವನ್ನು ಪಠಿಸಿದ ಬಳಿಕ ಧರ್ಮಗುರುಗಳು ಹೊಸ ನೀರಿನ ಆಶೀರ್ವಚನ ನಡೆಸಿ, ಭಕ್ತರ ಮೇಲೆ ಹೊಸ ನೀರನ್ನು ಪ್ರೋಕ್ಷಿಸಿದರು. ಬಳಿಕ ನಡೆದ ಬಲಿಪೂಜೆಯಲ್ಲಿ ಯೇಸುವಿನ ಕಷ್ಟಗಳು, ಪುನರುತ್ಥಾನದ ಸಂದೇಶವನ್ನು ಧರ್ಮಗುರುಗಳು ವಿವರಿಸಿದರು.

ಟಾಪ್ ನ್ಯೂಸ್

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Rohit Sharma spoke about team selection for T20 World Cup

T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

kejriwal 2

Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ

Devon Conway ruled out of IPL 2024

CSK; ಐಪಿಎಲ್ ನಿಂದ ಹೊರಬಿದ್ದ ಕಾನ್ವೆ; ಚೆನ್ನೈ ಪಾಳಯಕ್ಕೆ ಇಂಗ್ಲೆಂಡ್ ವೇಗಿ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

Jadkal: ಬೈಕ್‌ಗಳ ಢಿಕ್ಕಿ, ಸವಾರರಿಗೆ ಗಂಭೀರ ಗಾಯ

Jadkal: ಬೈಕ್‌ಗಳ ಢಿಕ್ಕಿ, ಸವಾರರಿಗೆ ಗಂಭೀರ ಗಾಯ

Gangolli ರಿಕ್ಷಾಗೆ ಕಾರು ಢಿಕ್ಕಿ ; ಚಾಲಕನಿಗೆ ಗಾಯ

Gangolli ರಿಕ್ಷಾಗೆ ಕಾರು ಢಿಕ್ಕಿ ; ಚಾಲಕನಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

15-mother

Mother: ಕಣ್ಣಿಗೆ ಕಾಣುವ ದೇವರು ಅಂದರೆ ಅಮ್ಮ ತಾನೇ

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

14

UV Fusion: ಅವನೊಂದಿಗೆ ನಡೆವಾಸೆ

13-fusion

UV Fusion: ಏರಿಯಾ 51

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.