ಮೂಲೆಗೆ ಎಸೆಯುವ ಟಯರ್‌ ಈಗ ಪರಿಸರ ಸ್ನೇಹಿ!


Team Udayavani, Apr 10, 2021, 4:15 AM IST

ಮೂಲೆಗೆ ಎಸೆಯುವ ಟಯರ್‌ ಈಗ ಪರಿಸರ ಸ್ನೇಹಿ!

ಕಾರ್ಕಳ: ನಿರುಪಯುಕ್ತ ಎಂದು ಮೂಲೆಗೆ ಎಸೆದು ಬಿಡುವ ವಸ್ತುಗಳನ್ನು ಪರಿಸರಸ್ನೇಹಿಯಾಗಿಸುವ ಯತ್ನ ಇಲ್ಲೊಂದೆಡೆ ಸದ್ದಿಲ್ಲದೆ ನಡೆಯುತ್ತಿದೆ. ಮಾಳದ ಕಡಾರಿಯ ಪ್ರಗತಿಪರ ಕೃಷಿಕ ಜಗದೀಶ ಪ್ರಭು ಅವರು ಕೊರೊನಾ ಕಾಲಘಟ್ಟದಲ್ಲಿ ನಡೆಸಿದ ಪ್ರಯೋಗಗಳು ಫ‌ಲ ನೀಡಿದ್ದು, ಹೂದೋಟದ ಅಂದವನ್ನು ಇಮ್ಮಡಿಗೊಳಿಸಿದೆ.

ವಾಹನಗಳ ಹಳೆ ಟಯರ್ ಗಳನ್ನು ಎಲ್ಲೆಂದರಲ್ಲಿ ಎಸೆಯುವುದು, ಸುಡು ವುದು ಇತ್ಯಾದಿ ಕ್ರಮಗಳು ಪರಿಸರಕ್ಕೆ ಹಾನಿಯುಂಟುಮಾಡುತ್ತವೆ. ಮಳೆಗಾಲ ದಲ್ಲಿ ಟಯರ್‌ಗಳಲ್ಲಿ ನೀರು ನಿಂತು ಆರೋಗ್ಯಕ್ಕೂ ಸಮಸ್ಯೆಯುಂಟು ಮಾಡುತ್ತವೆ. ಇದನ್ನು ಮನಗಂಡ ಕಡಾರಿಯ ಜಗದೀಶ ಪ್ರಭು ಅವರು ಅದಕ್ಕೊಂದು ಹೊಸ ರೂಪ ಕೊಡುವ ಪ್ರಯತ್ನಕ್ಕೆ ಮುಂದಾದರು.
ಯೂಟ್ಯೂಬ್‌ನಲ್ಲಿ ಹುಡುಕಾಟದ ವೇಳೆ ಟಯರ್‌ನಿಂದ ಹೂಕುಂಡ ತಯಾರಿಸುವ ಐಡಿಯಾ ಸಿಕ್ಕಿದ್ದು, ಕೊರೊನಾ ಲಾಕ್‌ಡೌನ್‌ ವೇಳೆ ಅದನ್ನು ಕಾರ್ಯರೂಪಕ್ಕಿಳಿಸಿದ್ದಾರೆ. ಬ್ಲೇಡ್‌ನಿಂದ ವಿವಿಧ ರೂಪದಲ್ಲಿ ಕತ್ತರಿಸಿ ಬೇಕಾದ ರೀತಿ ಕತ್ತರಿಸಿದ್ದಾರೆ. ಬಳಿಕ ಬಣ್ಣ ಬಳಿದಿದ್ದಾರೆ.

ಈವರೆಗೆ 30ಕ್ಕೂ ಹೆಚ್ಚು ಟಯರ್‌ ಹೂಕುಂಡಗಳನ್ನು ಮಾಡಿದ್ದಾರೆ. ಅದಕ್ಕೆ ಬೇಡಿಕೆಯೂ ಬಂದಿದೆ. ಮಾರಾಟ ಉದ್ದೇಶ ಹೊಂದಿಲ್ಲವಾದರೂ ಹವ್ಯಾಸವಾಗಿ ಆರಂಭಿಸಿದ್ದಕ್ಕೆ ಈಗ ಹೆಚ್ಚಿನ ಬೇಡಿಕೆ ಬರುತ್ತಿದೆ. ರೇಡಿಯಲ್‌ ಟಯರ್‌ಗಳಿಂದ ಹೂಕುಂಡ ನಿರ್ಮಾಣ ಸುಲಭವಾಗಿದ್ದು, ಆಸಕ್ತಿ ಇದ್ದವರು ಮನೆಯಲ್ಲೇ ಮಾಡಬಹುದು ಎನ್ನುತ್ತಾರೆ. ಟಯರ್‌ನಲ್ಲಿ ಗಿಡ ಬೆಳೆಯುವುದರಿಂದ ಗೊಬ್ಬರ, ನೀರು ಹಾಕಲು ಸಾಕಷ್ಟು ಸ್ಥಳಾವಕಾಶ ಕೂಡ ಸಿಗುತ್ತದೆ ಎನ್ನುತ್ತಾರೆ.
ಇವರು ಈ ಮೊದಲು ಪಿವಿಸಿ ಪೈಪ್‌ ಬಳಸಿ ಬಾವಿಯಿಂದ ನೀರೆಳೆವ ಹೊಸ ವಿಧಾನವೊಂದನ್ನು ಆವಿಷ್ಕರಿಸಿದ್ದರು.

ಆಸಕ್ತಿ, ಶ್ರಮ ಅಗತ್ಯ
ಟಯರ್‌ನಿಂದ ಹೂಕುಂಡ ನಿರ್ಮಾಣಕ್ಕೆ ಆಸಕ್ತಿ ಮತ್ರು ಶ್ರಮ ಅಗತ್ಯ. ಲಾಕ್‌ಡೌನ್‌ ವೇಳೆ ಇದರ ಬಗ್ಗೆ ಗಮನಹರಿಯಿತು. ನಿರುಪಯುಕ್ತ ವಸ್ತುಗಳನ್ನು ಪರಿಸರಕ್ಕೆ ಪೂರಕವಾಗಿ ಬಳಸಿಕೊಳ್ಳಲು ಸಾಕಷ್ಟು ಅವಕಾಶಗಳಿವೆ.
-ಜಗದೀಶ ಪ್ರಭು, ಕೃಷಿಕ

ಟಾಪ್ ನ್ಯೂಸ್

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.