ಪಂಜಾಬ್ ಸಿಎಂ ಚನ್ನಿ ಸಂಬಂಧಿಗಳ ಮನೆ ಮೇಲೆ ಜಾರಿ ನಿರ್ದೇಶನಾಲಯ ದಾಳಿ
ರಾಜಕೀಯ ಸ್ವರೂಪ ಪಡೆದ ದಾಳಿ, ಮರಳು ಗಣಿಗಾರಿಕೆ ಆರೋಪ
Team Udayavani, Jan 18, 2022, 5:28 PM IST
ಪಂಜಾಬ್ : ಪಂಜಾಬ್ ಮುಖ್ಯಮಂತ್ರಿ ಚರಣ್ ಜಿತ್ ಸಿಂಗ್ ಚೆನ್ನಿಯವರ ಸಂಬಂಧಿಕರ ಮನೆ ಹಾಗೂ ವ್ಯಾವಹಾರಿಕ ಸಂಸ್ಥೆಗಳ ಮೇಲೆ ಅಕ್ರಮ ಮರಳು ಗಣಿಗಾರಿಕೆ ಪ್ರಕರಣ ಸಂಬಂಧ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಚುನಾವಣಾ ಸಂದರ್ಭದಲ್ಲೇ ನಡೆದಿರುವ ಈ ದಾಳಿ ಈಗ ರಾಜಕೀಯ ತಿರುವು ತೆಗೆದುಕೊಂಡಿದೆ.
ಘಟನೆಗೆ ಸಂಬಂಧಪಟ್ಟಂತೆ ಕಾಂಗ್ರೆಸ್, ಬಿಜೆಪಿ, ಆಮ್ ಆದ್ಮಿ ಪಕ್ಷದ ಮಧ್ಯೆ ತುರುಸಿನ ವಾಗ್ವಾದ ನಡೆಯಲಾರಂಭಿಸಿದೆ. ಇದೊಂದು ರಾಜಕೀಯ ಪ್ರೇರಿತ ದಾಳಿ ಎಂದು ಸಿಎಂ ಚೆನ್ನಿ ಆರೋಪಿಸಿದರೆ, ಅಕ್ರಮ ಮರಳು ಗಣಿಗಾರಿಕೆ ಪ್ರಕರಣದಲ್ಲಿ ಚರಣ್ಜಿತ್ ಸಿಂಗ್ ಚನ್ನಿ ತಮ್ಮ ಕುಟುಂಬ ವರ್ಗದವರ ಜತೆ ಕೈ ಜೋಡಿಸಿದ್ದಾರೆಂದು ಆಪ್ ಆರೋಪಿಸಿದೆ.
ಮೋಹಾಲಿಯಲ್ಲಿರುವ ಸಿಎಂ ಚನ್ನಿ ಅವರ ಸೋದರಳಿಯ ಭೂಪೇಂದ್ರ ಸಿಂಗ್ ಹನಿ ಅವರ ನಿವಾಸ ಸೇರಿದಂತೆ 10 ಸ್ಥಳಗಳ ಮೇಲೆ ಇಡಿ ದಾಳಿ ನಡೆಸಿದೆ. ಪಂಜಾಬ್ ರಿಲೇರ್ಸ್ ಎಂಬ ಸಂಸ್ಥೆಯನ್ನು ಹುಟ್ಟು ಹಾಕಿದ್ದ ಭೂಪೇಂದ್ರ ಸಿಂಗ್ ಹನಿ ಮರಳು ಗಣಿಗಾರಿಕೆಯಿಂದ ಬಂದ ಹಣವನ್ನು ಇಲ್ಲಿ ವಿನಿಯೋಗಿಸುತ್ತಿದ್ದರು ಎಂಬ ಆಪಾದನೆಯನ್ನು ಎದುರಿಸುತ್ತಿದ್ದಾರೆ.
ಇಡಿ ಮೂಲಗಳ ಪ್ರಕಾರ ರಿಯಲ್ಎಸ್ಟೇಟ್ ಸಂಸ್ಥೆಗಳ ಮೂಲಕ ಚನ್ನಿ ಕುಟುಂಬ ವರ್ಗ ಮೊದಲಿನಿಂದಲೂ ಅಪಾರ ಪ್ರಮಾಣದ ಕಪ್ಪು ಹಣವನ್ನು ವಿನಿಯೋಗಿಸಿದೆ. ಈ ಬಗ್ಗೆ ಭಾರಿ ದೂರುಗಳು ಕೇಳಿ ಬಂದಿವೆ. ಆದರೆ ಫೆಬ್ರವರಿ 20ರಂದು ಪಂಜಾಬ್ ವಿಧಾನಸಭೆಗೆ ಚುನಾವಣೆ ನಡೆಯಲಿದ್ದು, ಈ ಹಂತದಲ್ಲಿ ನಡೆದಿರುವ ದಾಳಿ ರಾಜಕೀಯ ಪ್ರೇರಿತ ಎಂಬ ಮಾತುಗಳು ಕೇಳಿ ಬಂದಿವೆ. ಕೇಂದ್ರ ಸರಕಾರ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ. ಸೋಲಿನ ಭೀತಿ ಬಿಜೆಪಿಯನ್ನು ಕಾಡುತ್ತಿದೆ. ಇಂಥ ಬೆದರಿಕೆ ತಂತ್ರಕ್ಕೆ ತಾವು ಹೆದರುವುದಿಲ್ಲ ಎಂದು ಚನ್ನಿ ಪ್ರತಿಕ್ರಿಯೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್ ಎಫ್ ಕೆನಡಿ ಹಿಟ್ಲರ್ ನನ್ನು ಬಂಧಿಸಿದ್ದು!
CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್
Telangana: ಜಾರ್ಖಂಡ್ ಗವರ್ನರ್ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ
Patanjali Ads case:ಖುದ್ದು ಹಾಜರಾಗಿ- ಬಾಬಾ ರಾಮ್ ದೇವ್, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್
Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್ ಗೆ RLJP ಮುಖಂಡ ಪರಾಸ್ ರಾಜೀನಾಮೆ
MUST WATCH
ಹೊಸ ಸೇರ್ಪಡೆ
OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?
Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್ ಎಫ್ ಕೆನಡಿ ಹಿಟ್ಲರ್ ನನ್ನು ಬಂಧಿಸಿದ್ದು!
ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್ ರೋಲ್ ನಲ್ಲಿ ಫಾಫಾ
ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ
Malpe: ಶ್ರೀ ವಡಭಾಂಡ ಬಲರಾಮ ದೇವಸ್ಥಾನ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ ಸಂಪನ್ನ