ಈದು: ಪೆಲತ್ತಕಟ್ಟೆ ಶಾಶ್ವತ ಸೇತುವೆ ನಿರ್ಮಾಣ ಮರೀಚಿಕೆ?


Team Udayavani, Mar 14, 2021, 5:40 AM IST

ಈದು: ಪೆಲತ್ತಕಟ್ಟೆ ಶಾಶ್ವತ ಸೇತುವೆ ನಿರ್ಮಾಣ ಮರೀಚಿಕೆ?

ಕಾರ್ಕಳ: ಮಳೆಗಾಲ ಹತ್ತಿರವಾಗುತ್ತಿದೆ. ಎಷ್ಟು ಬೇಗವೋ ಅಷ್ಟು ಬೇಗ ನಮಗೊಂದು ಸೇತುವೆ ನಿರ್ಮಿಸಿ ಕೊಡಿ,
ನೀವು ಮುತುವರ್ಜಿ ವಹಿಸಿಲ್ಲ ಅಂದರೆ ನಾವು ಈ ಮಳೆಗಾಲವೂ ಇಕ್ಕಟ್ಟಿಗೆ ಸಿಲುಕುತ್ತೇವೆ. ಮಕ್ಕಳು ಶಾಲೆಗೆ ಹೋಗಲಾರರು; ಹೀಗೆಂದು ಪೆಲತ್ತಕಟ್ಟೆ ನಿವಾಸಿಗಳು ಜನಪ್ರತಿನಿಧಿಗಳು, ಅಧಿಕಾರಿಗಳನ್ನು ಆಗ್ರಹಿಸಿದ್ದಾರೆ.

ಈದು ಗ್ರಾಮದ ಪೆಲತ್ತಕಟ್ಟೆ ಎಂಬಲ್ಲಿ ಸೇತುವೆಯೊಂದಿದೆ. ಬಾರೆ ಭಾಗದಿಂದ ಹರಿದು ಬರುವ ಹೊಳೆಗೆ ಅಡ್ಡಲಾಗಿ ಕಟ್ಟಿರುವ ಸೇತುವೆ ಯಿದು. ಸುಮಾರು 20 ವರ್ಷಗಳ ಹಿಂದೆ ಇದು ನಿರ್ಮಾಣಗೊಂಡಿದ್ದು, ಮಳೆಗಾಲದಲ್ಲಿ ನೀರು ಉಕ್ಕೇರುವುದರಿಂದ ಸೇತುವೆ ಮುಳುಗುತ್ತದೆ. ಸದ್ಯ ನೆರೆಯಲ್ಲಿ ಬಂದ ಮರದ ದಿಮ್ಮಿಗಳು ಬಡಿದು ಸೇತುವೆ ಸಂಪೂರ್ಣ ಶಿಥಿಲಗೊಂಡಿದೆ.
8 ವರ್ಷಗಳಿಂದಲೂ ಸೇತುವೆ ಹೀಗೆಯೇ ಇದೆ.

ಸಂಪರ್ಕಕ್ಕೆ ಅಗತ್ಯ
ಪೆಲತ್ತಕಟ್ಟೆ, ಕಂಪೆಟ್ಟು , ಕನ್ಯಾಲು, ಕುಂಟೊನಿ, ಎದ್ರೋಟ್ಟು , ಜಗಂದಲ್ಕೆ ಮೊದಲಾದ ಪ್ರದೇಶಗಳಿಗೆ ಹೊಸ್ಮಾರುವಿನಿಂದ ಸಂಪರ್ಕ ಕಲ್ಪಿಸಲು ಈ ಸೇತುವೆ ಮುಖ್ಯ. 30ಕ್ಕೂ ಅಧಿಕ ಮಲೆಕುಡಿಯ ಸಮುದಾಯದವರ ಸಹಿತ ಅನೇಕ ಕುಟುಂಬಗಳು ಇಲ್ಲಿ ವಾಸವಾಗಿವೆ. ವಿದ್ಯಾರ್ಥಿಗಳು, ನಿತ್ಯ ಕೆಲಸಕ್ಕೆ ಹೋಗುವವರಿಗೆ, ನಾಗರಿಕರು ಸೇತುವೆ ಮೂಲಕವೇ ಸಂಚರಿಸುತ್ತಾರೆ. ಕೃಷಿ ಅವಲಂಬಿತರಿಗೂ ಇದು ಪ್ರಮುಖ. ಆದರೆ ಮಳೆಗಾಲದಲ್ಲಿ ಸೇತುವೆ ಮುಳುಗುವುದರಿಂದ ಇಲ್ಲಿ ತೆರಳಲು ಸಾಧ್ಯವಾಗುವುದಿಲ್ಲ. ಆಗ ಜನ ಅನುಭವಿಸುವ ಸಂಕಷ್ಟ ಅಷ್ಟಿಷ್ಟಲ್ಲ.

ಮಳೆಗಾಲದಲ್ಲಿ ಸಂಪರ್ಕ ಕಡಿತಗೊಳ್ಳುವುದರಿಂದ ವಿದ್ಯಾರ್ಥಿಗಳಿಗೆ ಅಘೋಷಿತ ರಜೆಯ ವಾತಾವರಣ ನಿರ್ಮಾಣವಾಗುತ್ತದೆ. ದೂರದ ಹಾದಿಯಿಂದ ಶಾಲೆಗೆ ತಲುಪಲು ಅನುಕೂಲವಿಲ್ಲ. ಆದ್ದರಿಂದ ಶಾಲೆಗೆ ತೆರಳದೆ ಮನೆಯಲ್ಲೇ ಉಳಿದುಕೊಳ್ಳುವಂತಾಗುತ್ತದೆ. ಕಳೆದ ವರ್ಷ ಎರಡು ಬಾರಿ ಸೇತುವೆ ಮಳೆಗೆ ಕೊಚ್ಚಿ ಹೋಗಿದ್ದು, ಸಂಪರ್ಕ ಕಷ್ಟಕರವಾಗಿತ್ತು.

ಕಟ್ಟುವ ಕಾರ್ಯದಲ್ಲಿ ನಿವಾಸಿಗಳು
ಕೊಚ್ಚಿ ಹೋದ ಸೇತುವೆಯನ್ನು ಸ್ವಲ್ಪ ವಾದರೂ ಉಳಿಸಲು ಇಲ್ಲಿನ ನಿವಾಸಿಗಳು ವರ್ಷವೂ ಮುಂದಾಗುತ್ತಾರೆ. ಗೋಣಿಗಳಿಗೆ ಮರಳು ತುಂಬಿ ಒಂದು ಭಾಗದಲ್ಲಿ ಗೋಡೆ ಕಟ್ಟಿಕೊಳ್ಳುತ್ತಾರೆ. ಸದ್ಯ ಅದು ಪ್ರಯೋಜನಕ್ಕೆ ಬರುತ್ತಿದೆ. ಆದರೆ ಮಳೆಗಾಲದಲ್ಲಿ ಇದು ಕೊಚ್ಚಿ ಹೋಗುತ್ತದೆ. ಸಮಸ್ಯೆ ಪುನರಾವರ್ತನೆಯಾಗುತ್ತದೆ ಎನ್ನುತ್ತಾರೆ ಈ ಭಾಗದ ನಿವಾಸಿಗಳು. ಈ ಮೊದಲು ಸೇತುವೆ ಸಮಸ್ಯೆ ಬಗ್ಗೆ ಜಿಲ್ಲಾಧಿಕಾರಿಯವರೇ ತಹಶೀಲ್ದಾರ್‌ ಅವರನ್ನು ಸ್ಥಳಕ್ಕೆ ಕಳಿಸಿದ್ದರು. ಅವರು ಹೊಸ ಸೇತುವೆ ಭರವಸೆ ಕೂಡ ನೀಡಿದ್ದರು.

ಮೇಲ್ದರ್ಜೆಗೇರಿಸಿ
ಪ್ರತಿ ಮಳೆಗಾಲ ಮುಳುಗಿ, ಸಂಪರ್ಕ ಕಡಿತಗೊಳ್ಳುವ ಸೇತುವೆಗೆ ಮುಕ್ತಿ ನೀಡಬೇಕು. ಸೇತುವೆಯನ್ನು ಮೇಲ್ದರ್ಜೆಗೇರಿಸಬೇಕು ಸೇತುವೆಯನ್ನು ಎತ್ತರಕ್ಕೆ ಏರಿಸಿ ಸಾರ್ವಜನಿಕ ಸಂಚಾರಕ್ಕೆ ಶಾಶ್ವತ ವ್ಯವಸ್ಥೆ ಕಲ್ಪಿಸಬೇಕೆಂಬುದು ಈ ಭಾಗದ ಜನರ ಕೂಗು. ಸೇತುವೆ ಪ್ರದೇಶಕ್ಕೆ ಶಾಸಕರೂ ಭೇಟಿಯಿತ್ತಿದ್ದು, ಅನುದಾನದ ಭರವಸೆ ನೀಡಿದ್ದರು. ಮಳೆಗಾಲದ ಮೊದಲು ಈ ಬಗ್ಗೆ ಕ್ರಮದ ನಿರೀಕ್ಷೆ ಗ್ರಾಮಸ್ಥರದ್ದು.

– ಬಾಲಕೃಷ್ಣ ಭೀಮಗುಳಿ

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.