ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿಗೆ ಚುನಾವಣೆ : ವಿದೇಶದಿಂದ ಬಂದ ಮತದಾರರು
Team Udayavani, Feb 27, 2021, 8:17 PM IST
ಕಲಬುರಗಿ: ಈ ಭಾಗದ ಪ್ರತಿಷ್ಠಿತ ಹೈದರಾಬಾದ್ ಕರ್ನಾಟಕ ಶಿಕ್ಷಣ (HKE) ಸಂಸ್ಥೆಯ ಆಡಳಿತ ಮಂಡಳಿಗೆ ಶನಿವಾರ ಬಿರುಸಿನ ಮತದಾನ ನಡೆಯಿತು.
ಸಂಸ್ಥೆಯ ಪಿಡಿಎ ಇಂಜಿನಿಯರಿಂಗ್ ಕಾಲೇಜ್ ನಲ್ಲಿ ನಡೆದ ಮತದಾನದಲ್ಲಿ ಅಂತೀಮವಾಗಿ ಶೇ 93 ರಷ್ಟು ಮತದಾನವಾಗಿದೆ.
ವಯೋವೃದ್ದರು ವ್ಹಿಲ್ ಚೇರ ಮೇಲೆ ಬಂದರೆ ಇನ್ನೂ ಕೆಲವು ಹಿರಿಯರು ಹಾಸಿಗೆ ಹಿಡಿದಿದ್ದರಿಂದ ಅವರನ್ನು ವೈದ್ಯಕೀಯ ಉಪಕರಣಗಳ ಸಾಧನದಿಂದ ಬಂದು ಸಹಾಯಕರ ಮುಖಾಂತರ ಮತ ಚಲಾಯಿಸಿರುವುದು ಪ್ರಮುಖವಾಗಿ ಕಂಡು ಬಂತು. ಬೆಳಿಗ್ಗೆ ಮಂದಗತಿಯಿಂದ ಆರಂಭವಾದ ಚುನಾವಣೆಯು ಮಧ್ಯಾಹ್ನ ನಂತರ ಬಿರುಸುಗೊಂಡಿತು.
ಸಂಸ್ಥೆಯ ಮತಾಧಿಕಾರ ಹೊಂದಿ ವಿದೇಶದಲ್ಲಿದ್ದವರು ಚುನಾವಣೆಗೆ ಆಗಮಿಸಿ ತಮ್ಮಹಕ್ಕು ಚಲಾಯಿಸಿರುವುದು ಸಹ ಕಂಡು ಬಂತು.
ಅಧ್ಯಕ್ಷ ಸ್ಥಾನಕ್ಕೆ ಹಾಲಿ ಅಧ್ಯಕ್ಷ ಡಾ. ಭೀಮಾಶಂಕರ ಬಿಲಗುಂದಿ, ವಿಧಾನ ಪರಿಷತ ಸದಸ್ಯರು ಹಾಗೂ ಮಾಜಿ ಅಧ್ಯಕ್ಣರಾದ ಶಶೀಲ್ ನಮೋಶಿ ಮತ್ತು ನಾಲ್ಕು ಸಲ ಅಧ್ಯಕ್ಷ ರಾಗಿರುವ ಮಾಜಿ ಅಧ್ಯಕ್ಷ ಬಸವರಾಜ ಭೀಮಳ್ಳಿ ಫೆನಾಲ್ ದೊಂದಿಗೆ ಸ್ಪರ್ಧಿಸಿದ್ದು ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ.
ಇದನ್ನೂ ಓದಿ:ಹೊನ್ನಾವರದ ಪರೇಶ್ ಮೇಸ್ತ ಸಾವಿನ ಹಿಂದೆ ಬಿಜೆಪಿಯವರೇ ಭಾಗಿ : ಡಿಕೆಶಿ ಅನುಮಾನ
ಆರು ಗಂಟೆವರೆಗೂ ನಡೆದ ಮತದಾನ: ಮತದಾನ ವೇಳೆ ಬೆಳಿಗ್ಗೆ 8ರಿಂದ ಸಂಜೆ 5ರವರೆಗೆ ನಿಗದಿಯಾಗಿದ್ದರೂ ಸಂಜೆ ಐದು ಗಂಟೆಯೊಳಗೆ ಮತಕೇಂದ್ರದೊಳಗೆ ನೂರಾರು ಮತದಾರರು ಇರುವುದರಿಂದ ಸಂಜೆ ಆರು ಗಂಟೆವರೆಗೂ ಚುನಾವಣೆ ನಡೆಯಿತು.
ಭಾನುವಾರ ಮತ ಏಣಿಕೆ; ಫೆ. 28ರ ಬೆಳಿಗ್ಗೆ 8 ಗಂಟೆಯಿಂದ ಮತ ಏಣಿಕೆ ಕಾರ್ಯ ಪಿಡಿಎ ಇಂಜಿನಿಯರಿಂಗ್ ಕಾಲೇಜ್ ನ ಗ್ರಂಥಾಲಯದಲ್ಲಿ ನಡೆಯಲಿದೆ. ಸಂಜೆ ಇಲ್ಲವೇ ರಾತ್ರಿ ಹತ್ತರ ಹೊತ್ತಿಗೆ ಸ್ಪಷ್ಟ ಫಲಿತಾಂಶ ಹೊರ ಬೀಳುವ ಸಾಧ್ಯತೆಗಳಿವೆ. ಚುನಾವಣಾಧಿಕಾರಿಯಾಗಿ ಸಿ.ಸಿ.ಪಾಟೀಲ್, ಜಂಟಿ ಕೃಷಿ ನಿರ್ದೇಶಕ ರತೀಂದ್ರನಾಥ ಸೂಗುರ ಚುನಾವಣಾ ವೀಕ್ಷಕರಾಗಿ ಕಾರ್ಯನಿರ್ವಹಿಸಿದರು. ಚುನಾವಣೆಗೆ ವ್ಯಾಪಕ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು
Lok Sabha Election: ಕಾಂಗ್ರೆಸ್ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ
BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ
MUST WATCH
ಹೊಸ ಸೇರ್ಪಡೆ
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ