ನಿಧನರಾಗಿ 8 ತಿಂಗಳಾದರೂ‌ ಇನ್ನೂ ‌ಮೃತರೇ ಅಧ್ಯಕ್ಷರು!


Team Udayavani, Jan 11, 2022, 10:46 AM IST

2name

ಶಿರಸಿ: ಮೃತರಾಗಿ ಎಂಟು ತಿಂಗಳಾದರೂ‌ ಆಧುನಿಕ‌ ನಡೆಯಲ್ಲಿ ವಿಫುಲ ಹೆಜ್ಜೆ ಇಡುತ್ತಿರುವ ಕನ್ನಡ‌ ಮತ್ತು ಸಂಸ್ಕ್ರತಿ ‌ಇಲಾಖೆಯ ವೆಬ್ ಸೈಟ್ ನಲ್ಲಿ ಮೃತರೇ ಅಧ್ಯಕ್ಷರಾಗಿ ‌ಮುಂದುವರಿದಿದ್ದಾರೆ.

ಕಳೆದ ಏಪ್ರಿಲ್ 18ರಂದು ಅಕಾಲಿಕವಾಗಿ ಅಗಲಿದ ಯಕ್ಷಗಾನ‌ ಅಕಾಡಮಿ ಅಧ್ಯಕ್ಷ ಪ್ರೋ ಎಂ.ಎ.ಹೆಗಡೆ ಅವರ‌ ಜಾಗಕ್ಕೆ ಸರಕಾರ ಆಡಳಿತಾಧಿಕಾರಿ ನೇಮಕ‌ ಮಾಡಿದ್ದರ ಬಗ್ಗೆ ಆಕ್ಷೇಪ, ಅಸಮಧಾನಗಳು ಬಂದ ಬೆನ್ನಲ್ಲೇ, ವೆಬ್ ಸೈಟಿನಲ್ಲಿ  ಎಂ.ಎ.ಹೆಗಡೆ ಅವರ ಹೆಸರನ್ನು ಬದಲಾಯಿಸದೇ ಇರುವುದು ಆಕ್ಷೇಪಕ್ಕೆ ಕಾರಣವಾಗಿದೆ.

ಕನ್ನಡ ನಾಡು‌ ನುಡಿ, ಕಲೆಯ ಸೇವೆಗಾಗಿ ಇರುವ‌ ಕನ್ನಡ‌ ಮತ್ತು ಸಂಸ್ಕ್ರತಿ ಇಲಾಖೆ ತನ್ನ ವ್ಯಾಪ್ತಿಯಲ್ಲಿ ‌ಹದಿನಾರು ವೈವಿಧ್ಯಮಯ ಅಕಾಡೆಮಿಗಳನ್ನು ನಡೆಸುತ್ತದೆ. ಈ ಅಕಾಡೆಮಿ ಹಾಗೂ ಇಲಾಖೆಯ ಮಾಹಿತಿ ನೀಡುವ ವೆಬ್ ಸೈಟಿನಲ್ಲಿ ಪ್ರೋ. ಎಂ ಎ.ಹೆಗಡೆ ಅವರ ಹೆಸರು‌ ಇನ್ನೂ ಇದೆ.

ಅನೇಕ ರಚನಾತ್ಮಕ ಚಟುವಟಿಕೆ ನಡೆಸಿ ಇಡೀ ರಾಜ್ಯದ ಬಡಗು, ತೆಂಕು, ಬಡಾಬಡಗು,‌ಮೂಡಲಪಾಯದ ಕಲಾವಿದರ ಗಮನ ಸೆಳೆದಿದ್ದ ಎಂ.ಎ.ಹೆಗಡೆ ಅವರು ಅಕಾಡೆಮಿಯ‌ ಪ್ರಥಮ ಅಧ್ಯಕ್ಷರಾಗಿದ್ದರು.  ಮೂರು ಬಾರಿ ಅಧ್ಯಕ್ಷರಾದರೂ ಚುನಾವಣೆ, ಕೋವಿಡ್ ಸೇರಿದಂತೆ ಅಧಿಕಾರ ಬಳಸಲು‌ ಎರಡುವರೆ ವರ್ಷದಲ್ಲಿ 12 ತಿಂಗಳು ಗಟ್ಟಿ‌ ಸಿಕ್ಕಿರಲಿಲ್ಲ. ಕಳೆದ ಏ.18ಕ್ಕೆ ಮೊದಲಿಗೆ ಕೋವಿಡ್ ಸೋಂಕು ತಗುಲಿ ನಂತರ ಹೃದಯಾಘಾತದಿಂದ‌ ಮೃತರಾಗಿದ್ದರು.

ಸಂಸ್ಕ್ರತ, ಇಂಗ್ಲೀಷ್, ಕನ್ನಡದ‌ ಮೇರು ಪಂಡಿತ, ಯಕ್ಷಕವಿ ಎಂ.ಎ.ಹೆಗಡೆ ಅವರು ಹಾಕಿಕೊಟ್ಟ ಕನಸು, ಮಾರ್ಗದಲ್ಲಿ ನಡೆಯುವ ಅಧ್ಯಕ್ಷರ‌ ನೇಮಕ ಆಗಬೇಕಿತ್ತು. ನಿಜಕ್ಕೂ ಸರಕಾರ ಆ ಮೂಲಕ ಅವರಿಗೆ ಗೌರವ ಸಲ್ಲಿಸಬಹುದಾಗಿತ್ತು.ಆದರೆ, ಇತ್ತ ಆಡಳಿತಾಧಿಕಾರಿ‌ ನೇಮಕ‌ ಮಾಡಿದೆ. ಅತ್ತ ವೆಬ್ ಸೈಟ್ ನಲ್ಲೂ ಹೆಸರಿಟ್ಟಿದೆ! ಈ‌ ಮೂಲಕ ಸರಕಾರದಲ್ಲಿ‌ ಏನೂ ಸಾಧ್ಯ ಎಂಬುದಕ್ಕೆ ಇದು ಉದಾಹರಣೆ ಎಂಬ ಮಾತುಗಳೂ ಕೇಳಿ ಬಂದಿದೆ.

ಅಪ್ಪಟ‌ ಕನ್ನಡದ ಕಲೆ ಯಕ್ಷಗಾನಕ್ಕೆ ಬಲ ಕೊಡಲು ಅಕಾಡೆಮಿ ಬಲವಾಗಿಸಲು ಸಮರ್ಥ ಅಧ್ಯಕ್ಷರ ಸ್ಥಾನಕ್ಕೆ ವಿದ್ವಾಂಸರ ನೇಮಕ‌ ಮಾಡಬೇಕು. ವೆಬ್ ಸೈಟ್‍ನಲ್ಲಿ ಉಂಟಾದ ಮಾಹಿತಿ ಕೊರತೆ ಕೂಡ ಸರಿ‌ ಮಾಡಬೇಕು ಎಂಬ ಆಗ್ರಹ ಕೇಳಿ ಬಂದಿದೆ. ಕ್ರಿಯಾಶೀಲ ಸಚಿವ ಸುನೀಲ್ ಕುಮಾರರು, ನಿರ್ದೇಶಕ ರಂಗಪ್ಪ ಅವರು ಸ್ಪಂದಿಸುತ್ತಾರೆಯೇ ಕಾದು ನೋಡಬೇಕಿದೆ.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.