“ಕೇಜ್ರಿವಾಲ್ ಗೆ ಒಂದು ಅವಕಾಶ ಕೊಡಿ”; ಪಂಚರಾಜ್ಯಗಳಲ್ಲಿ ಆಪ್ ಚುನಾವಣಾ ಪ್ರಚಾರಕ್ಕೆ ಚಾಲನೆ
ಉತ್ತಮ ಕೆಲಸದ ವಿಡಿಯೋಗಳನ್ನು ಅಪ್ ಲೋಡ್ ಮಾಡುವಂತೆ ದೆಹಲಿ ನಿವಾಸಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ.
Team Udayavani, Jan 24, 2022, 3:11 PM IST
ನವದೆಹಲಿ:ವಿಧಾನಸಭೆ ಚುನಾವಣೆ ನಡೆಯಲಿರುವ ಪಂಚ ರಾಜ್ಯಗಳಲ್ಲಿ ಆಮ್ ಆದ್ಮಿ ಪಕ್ಷದ ವರಿಷ್ಠ, ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಸೋಮವಾರ(ಜನವರಿ 24) ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ದೆಹಲಿ ಸರ್ಕಾರದ ಉತ್ತಮ ಕೆಲಸದ ವಿಡಿಯೋಗಳನ್ನು ಅಪ್ ಲೋಡ್ ಮಾಡುವಂತೆ ದೆಹಲಿ ನಿವಾಸಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ.
ಇದನ್ನೂ ಓದಿ:ಅಂತಹ ಸಭೆಗೆ ಹೋಗಲ್ಲ: ಬೆಳಗಾವಿ ಬಿಜೆಪಿ ಸಭೆಗೆ ರಮೇಶ್ ಜಾರಕಿಹೊಳಿ ಅಸಮಾಧಾನ
“ನಮ್ಮ ಸರ್ಕಾರ ಉಚಿತ ವಿದ್ಯುತ್, ನೀರು ಸೇರಿದಂತೆ ಹಲವಾರು ಉತ್ತಮ ಕೆಲಸಗಳನ್ನು ಜಾರಿಗೊಳಿಸಿದೆ. ಈ ಹಿನ್ನೆಲೆಯಲ್ಲಿ ಆಮ್ ಆದ್ಮಿ ಪಕ್ಷಕ್ಕೆ ಒಂದು ಅವಕಾಶ ನೀಡುವಂತೆ ಪಂಜಾಬ್, ಉತ್ತರಪ್ರದೇಶ, ಗೋವಾ ಮತ್ತು ಉತ್ತರಾಖಂಡ್ ರಾಜ್ಯಗಳ ಮತದಾರರಲ್ಲಿ ದೆಹಲಿ ನಿವಾಸಿಗಳು ಮನವಿ ಮಾಡಿಕೊಳ್ಳುವಂತೆ” ಕೇಜ್ರಿವಾಲ್ ತಿಳಿಸಿದ್ದಾರೆ.
ದೆಹಲಿ ಸರ್ಕಾರದ ಅಭಿವೃದ್ಧಿ ಕೆಲಸದ ವಿಡಿಯೋಗಳನ್ನು ಟ್ವೀಟರ್, ಇನ್ಸ್ ಸ್ಟಾಗ್ರಾಮ್, ಫೇಸ್ ಬುಕ್ ನಲ್ಲಿ ಅಪ್ ಲೋಡ್ ಮಾಡಿ, ಅಷ್ಟೇ ಅಲ್ಲ ಆಮ್ ಆದ್ಮಿ ಪಕ್ಷಕ್ಕೆ ಒಂದು ಅವಕಾಶ ನೀಡುವಂತೆ ವಾಟ್ಸ್ ಆ್ಯಪ್ ಮೂಲಕ ಮನವಿ ಮಾಡಿಕೊಳ್ಳಿ ಎಂದು ಈ ಸಂದರ್ಭದಲ್ಲಿ ಕೇಜ್ರಿವಾಲ್ ವಿನಂತಿಸಿಕೊಂಡಿದ್ದಾರೆ.
“ಕೇಜ್ರಿವಾಲ್ ಗೆ ಒಂದು ಅವಕಾಶ” ಕೊಡಿ ಎಂಬ ಪ್ರಚಾರಾಂದೋಲನದಡಿ ದೆಹಲಿ ನಿವಾಸಿಗಳು ದೆಹಲಿ ಸರ್ಕಾರದ ಉತ್ತಮ ಕೆಲಸಗಳನ್ನು ಪಂಚರಾಜ್ಯಗಳ ಮತದಾರರಿಗೆ ತಲುಪಿಸಬೇಕು ಎಂದು ಕೇಜ್ರಿವಾಲ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್