ಏಕನಾಥ ಶಿಂಧೆ ಸರ್ಕಾರ ಮುಂದಿನ ಆರು ತಿಂಗಳಲ್ಲಿ ಪತನ, ಮಧ್ಯಂತರ ಚುನಾವಣೆಗೆ ಸಿದ್ಧರಾಗಿ: ಪವಾರ್
ಬಂಡಾಯ ಶಾಸಕರು ಮತ್ತೆ ಉದ್ಧವ್ ಠಾಕ್ರೆ ನೇತೃತ್ವದ ಮೂಲ ಶಿವಸೇನಾ ಪಕ್ಷಕ್ಕೆ ಮರಳಿ ಸೇರ್ಪಡೆಯಾಗಲಿದ್ದಾರೆ.
Team Udayavani, Jul 4, 2022, 12:32 PM IST
ಮುಂಬೈ: ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿ ಏಕನಾಥ ಶಿಂಧೆ ನೇತೃತ್ವದ ಶಿವಸೇನಾ-ಬಿಜೆಪಿ ಮೈತ್ರಿಕೂಟದ ಸರ್ಕಾರ ಮುಂದಿನ ಆರು ತಿಂಗಳೊಳಗೆ ಪತನವಾಗಲಿದೆ ಎಂದು ಎನ್ ಸಿಪಿ ವರಿಷ್ಠ ಶರದ್ ಪವಾರ್ ಸೋಮವಾರ (ಜುಲೈ 04) ಭವಿಷ್ಯ ನುಡಿದಿದ್ದು, ಮಧ್ಯಂತರ ಚುನಾವಣೆಗೆ ಸಿದ್ಧರಾಗುವಂತೆ ತಿಳಿಸಿದ್ದಾರೆ.
ಇದನ್ನೂ ಓದಿ:ದಕ್ಷಿಣದ ರಾಜ್ಯ ಮಾತ್ರವಲ್ಲ ಬೇರೆ ಕಡೆಗಳಲ್ಲೂ ಬಿಜೆಪಿ ಅಧಿಕಾರಕ್ಕೆ ಬರುತ್ತದೆ: ಸಿ.ಟಿ.ರವಿ
ಭಾನುವಾರ ಸಂಜೆ ನಡೆದ ಪಕ್ಷದ ಶಾಸಕರು ಮತ್ತು ಇತರ ಮುಖಂಡರನ್ನು ಉದ್ದೇಶಿಸಿ ಮಾತನಾಡಿದ ವೇಳೆ ಶರದ್ ಪವಾರ್ ಈ ಹೇಳಿಕೆಯನ್ನು ನೀಡಿರುವುದಾಗಿ ವರದಿ ವಿವರಿಸಿದೆ. ಮಹಾರಾಷ್ಟ್ರದಲ್ಲಿ ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಶಿಂಧೆ ನೇತೃತ್ವದ ಸರ್ಕಾರ ಇನ್ನು ಆರು ತಿಂಗಳಲ್ಲಿ ಪತನವಾಗಲಿದ್ದು, ನೀವೆಲ್ಲರೂ ಮಧ್ಯಂತರ ಚುನಾವಣೆಗೆ ಸಿದ್ಧರಾಗಬೇಕೆಂದು ತಿಳಿಸಿರುವುದಾಗಿ ವರದಿ ಹೇಳಿದೆ.
ಪ್ರಸ್ತುತ ಶಿಂಧೆ ಅವರನ್ನು ಬೆಂಬಲಿಸಿರುವ ಬಂಡಾಯ ಶಾಸಕರು ಅಸಮಾಧಾನಗೊಂಡಿದ್ದು, ಒಂದು ಬಾರಿ ಸಚಿವ ಸ್ಥಾನ ಹಂಚಿಕೆಯಾದ ಮೇಲೆ ಅವರ ಆಕ್ರೋಶ ಬಹಿರಂಗವಾಗಿ ಸ್ಫೋಟಗೊಳ್ಳಲಿದ್ದು, ಇದರ ಪರಿಣಾಮ ಸರ್ಕಾರ ಪತನಗೊಳ್ಳಲಿದೆ ಎಂದು ಪವಾರ್ ತಿಳಿಸಿದ್ದಾರೆ.
ಬಿಜೆಪಿ-ಶಿವಸೇನಾ ಮೈತ್ರಿಯ ಪ್ರಯೋಗದ ವೈಫಲ್ಯದಿಂದ ಹಲವಾರು ಬಂಡಾಯ ಶಾಸಕರು ಮತ್ತೆ ಉದ್ಧವ್ ಠಾಕ್ರೆ ನೇತೃತ್ವದ ಮೂಲ ಶಿವಸೇನಾ ಪಕ್ಷಕ್ಕೆ ಮರಳಿ ಸೇರ್ಪಡೆಯಾಗಲಿದ್ದಾರೆ. ಹೀಗಾಗಿ ನಮಗೆ ಇನ್ನು ಕೇವಲ ಆರು ತಿಂಗಳು ಮಾತ್ರ ಸಿಗಲಿದ್ದು, ಎನ್ ಸಿಪಿ ಶಾಸಕರು ತಮ್ಮ ವಿಧಾನಸಭಾ ಕ್ಷೇತ್ರದಲ್ಲಿ ಹೆಚ್ಚು ಸಮಯವನ್ನು ಕಳೆಯಬೇಕಾಗಿದೆ ಎಂದು ಪವಾರ್ ಸಲಹೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Panaji; ಹೊಸ ದಾಖಲೆ ನಿರ್ಮಿಸಿದ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್
Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್ ಎಫ್ ಕೆನಡಿ ಹಿಟ್ಲರ್ ನನ್ನು ಬಂಧಿಸಿದ್ದು!
CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್
Telangana: ಜಾರ್ಖಂಡ್ ಗವರ್ನರ್ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ
Patanjali Ads case:ಖುದ್ದು ಹಾಜರಾಗಿ- ಬಾಬಾ ರಾಮ್ ದೇವ್, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್
MUST WATCH
ಹೊಸ ಸೇರ್ಪಡೆ
Panaji; ಹೊಸ ದಾಖಲೆ ನಿರ್ಮಿಸಿದ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್
ರಾಷ್ಟ್ರೀಯ ನಾಟ್ಯೋತ್ಸವ; ದೇಶವೇ ಕೆರೆಮನೆಯತ್ತ ನೋಡುವಂತಾಗಿದ್ದು ಸಾಧನೆ
Thirthahalli ಅಂಗನವಾಡಿ ಮಿಲೆಟ್ ಲಡ್ಡು ಮಿಶ್ರಣದಲ್ಲಿ ಹುಳು ಪ್ರತ್ಯಕ್ಷ !
CCTV: ಬೆಳಗಾವಿಯಲ್ಲಿ ಹುಲಿ ಓಡಾಟದ ವಿಡಿಯೋ ವೈರಲ್… ಸುಳ್ಳು ಸುದ್ದಿ ಎಂದ ಅರಣ್ಯ ಇಲಾಖೆ
ಬ್ಯಾಡಗಿ: ಮೆಣಸಿನಕಾಯಿ ವಹಿವಾಟು ಸುಗಮ; ಪೊಲೀಸ್ ಭದ್ರತೆ