Election 2023: ಕಾಪು-ಯಾರಿಗೂ ಭದ್ರಕೋಟೆ ಅಲ್ಲ


Team Udayavani, Apr 10, 2023, 7:10 AM IST

bjp cong

ಉಡುಪಿ: ನೆರೆಯ ದಕ್ಷಿಣ ಕನ್ನಡ ಜಿಲ್ಲೆಯೊಂದಿಗೆ ಗಡಿ ಹಂಚಿಕೊಂಡಿರುವ ಉಡುಪಿ ಜಿಲ್ಲೆಯ ಗಡಿ ಭಾಗದ ವಿಧಾನಸಭಾ ಕ್ಷೇತ್ರವಾಗಿರುವ ಕಾಪು ಪ್ರತಿಷ್ಠಿತ ಚುನಾವಣ ಕಣವಾಗಿದ್ದು, ಇಲ್ಲಿ ಮಹಿಳಾ ಮತದಾರರೇ ಅಧಿಕ.

ಅವಿಭಜಿತ ದ.ಕ. ಜಿಲ್ಲೆಯಾಗಿದ್ದ ಸಂದರ್ಭದಲ್ಲೂ ಈ ಕ್ಷೇತ್ರವಿತ್ತು. ಉಡುಪಿ ಜಿಲ್ಲೆಯಾದ ಅನಂತರವೂ ಉಳಿದುಕೊಂಡಿದೆ. 1957ರ ಮೊದಲ ಚುನಾವಣೆಯಲ್ಲಿ ಕಾಂಗ್ರೆಸ್‌, 1962, 1967ರಲ್ಲಿ ಪ್ರಜಾ ಸೋಷಿಯಲಿಸ್ಟ್‌ (ಪಿಎಸ್‌ಪಿ)ದ ಅಭ್ಯರ್ಥಿ ಜಯ ಸಾಧಿಸಿದ್ದರು. 1972, 1978ರಲ್ಲಿ ಮತ್ತೆ ಕಾಂಗ್ರೆಸ್‌ ಇಲ್ಲಿ ಅಧಿಕಾರ ಹಿಡಿದಿತ್ತು. ಅನಂತರವೂ ಕಾಂಗ್ರೆಸ್‌ ಪ್ರಾಬಲ್ಯ ಮುಂದುವರಿದಿತ್ತು. ದಕಶಕಗಳ ಕಾಲ ಈ ಕ್ಷೇತ್ರ ಕಾಂಗ್ರೆಸ್‌ ಭದ್ರ ಕೋಟೆಯಾಗಿತ್ತು. ಬಿಜೆಪಿ ಇತ್ತೀಚಿನ ಚುನಾವಣೆಯಲ್ಲಿ ಇಲ್ಲಿ ಜಯ ಸಾಧಿಸಿದ್ದರೂ, ಪೂರ್ಣ ಪ್ರಮಾಣದಲ್ಲಿ ಹಿಡಿತ ಸಾಧಿಸಿದೆ ಎನ್ನಲಾಗದು.

1983ರಿಂದ 1999ರ ವರೆಗೂ ಕ್ಷೇತ್ರದಲ್ಲಿ ಕಾಂಗ್ರೆಸ್‌ ಹೊರತುಪಡಿಸಿ ಬೇರೆ ಪಕ್ಷದ ಆಡಳಿತ ಇರಲಿಲ್ಲ. 2004ರ ಚುನಾವಣೆಯಲ್ಲಿ ಬಿಜೆಪಿ ಮೊದಲ ಬಾರಿಗೆ ಇಲ್ಲಿ ಜಯ ಕಂಡಿತು. 2008ರಲ್ಲೂ ಬಿಜೆಪಿ ಕ್ಷೇತ್ರ ಉಳಿಸಿಕೊಂಡಿತ್ತು. 2013ರಲ್ಲಿ ಮತ್ತೆ ಕಾಂಗ್ರೆಸ್‌ ಪಾಲಾಯಿತು. 2018ರಲ್ಲಿ ಬಿಜೆಪಿ ಅಧಿಕಾರ ಪಡೆಯಿತು. 1957ರಿಂದ 2018 ಚುನಾವಣೆ ವರೆಗೂ ಕಾಂಗ್ರೆಸ್‌ 9 ಬಾರಿ, ಬಿಜೆಪಿ ಮೂರು ಬಾರಿ ಹಾಗೂ ಪಿಎಸ್‌ಪಿ 2 ಬಾರಿ ಜಯ ಸಾಧಿಸಿತ್ತು.

ಈ ಕ್ಷೇತ್ರದಲ್ಲಿ ಬಿಲ್ಲವ ಸಮುದಾಯದವರು ಹೆಚ್ಚು ಕಾಲ ಶಾಸಕರಾಗಿದ್ದರು. ಅನಂತರ ಮೊಗವೀರ ಮತ್ತು ಬಂಟ ಸಮುದಾಯದವರು ಶಾಸಕರಾದರು. ಮೊಗವೀರರು ಮತ್ತು ಬಿಲ್ಲವ ಸಮುದಾಯದ ಮತದಾರರು ಅಧಿಕವಿದ್ದಾರೆ.

ಈವರೆಗಿನ ಚುನಾವಣೆ ಇತಿಹಾಸ ಅವಲೋಕಿಸಿದರೆ ಇಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್‌ ನಡುವೆ ನೇರ ಹಣಾಹಣಿ ಕಳೆದ ಅನೇಕ ಚುನಾವಣೆಯಲ್ಲಿ ಏರ್ಪಟ್ಟಿದೆ. 1,500ಕ್ಕೂ ಕಡಿಮೆ ಅಂತರದಲ್ಲಿ ಎರಡು ಮೂರು ಚುನಾವಣೆಯನ್ನು ಗೆದ್ದಿರುವ ಇತಿಹಾಸವಿದೆ. ಈ ಬಾರಿಯೂ ಇದು ಪುನರಾವರ್ತನೆಯಾಗಬಹುದು ಎನ್ನಲಾಗುತ್ತಿದೆ.

ಒಲಿದಿದೆ ಸಚಿವ ಸ್ಥಾನ
ಕಾಪು ಕ್ಷೇತ್ರದಿಂದ ಆಯ್ಕೆಯಾದ ಶಾಸಕರಲ್ಲಿ ಇಬ್ಬರಿಗೆ ಸಚಿವ ಸ್ಥಾನ ಒಲಿದುಬಂದಿದೆ. ಶಾಸಕ ರಾದ ವಸಂತ ಸಾಲ್ಯಾನ್‌ ಅವರು ಎಂ. ವೀರಪ್ಪ ಮೊಯ್ಲಿಯವರು ಮುಖ್ಯಮಂತ್ರಿಯಾಗಿದ್ದಾಗ ಮತ್ತು ಎಸ್‌.ಎಂ. ಕೃಷ್ಣ ಅವರು ಮುಖ್ಯಮಂತ್ರಿಯಾಗಿದ್ದಾಗ ಸಚಿವರ ರಾಗಿದ್ದರು. ಹಾಗೆಯೇ 2013ರಲ್ಲಿ ಕಾಪುವಿನಿಂದ ಮೊದಲ ಬಾರಿಗೆ ಶಾಸಕರಾದ ವಿನಯ ಕುಮಾರ್‌ ಸೊರಕೆಯವರೂ ಅಂದಿನ ಕಾಂಗ್ರೆಸ್‌ ಸರಕಾರದಲ್ಲಿ ಸಚಿವರಾಗಿದ್ದರು.

ಟಿಕೆಟ್‌ ಫೈನಲ್‌ ಆಗಿಲ್ಲ
ಈ ಚುನಾವಣೆಗೆ ಕಾಂಗ್ರೆಸ್‌ ಅಭ್ಯರ್ಥಿ ಅಂತಿಮವಾಗಿದೆ. ಕಾಂಗ್ರೆಸ್‌ ಮೊದಲ ಪಟ್ಟಿಯಲ್ಲಿ ಕಾಪು ಕ್ಷೇತ್ರದ ಅಭ್ಯರ್ಥಿಯಾಗಿ ಮಾಜಿ ಸಚಿವ ವಿನಯ ಕುಮಾರ್‌ ಸೊರಕೆ ಅವರನ್ನು ಅಂತಿಮಗೊಳಿಸಲಾಗಿದೆ. ಬಿಜೆಪಿಯಿಂದ ಹೆಸರು ಫೈನಲ್‌ ಆಗಿಲ್ಲ. ಹಾಲಿ ಶಾಸಕರು ಸಹಿತ ಹಲವರ ಹೆಸರು ಮುನ್ನೆಲೆಯಲ್ಲಿದೆ. ಎಸ್‌ಡಿಪಿಐ ಹಾಗೂ ಜೆಡಿಎಸ್‌ ಕೂಡ ಸ್ಪರ್ಧೆಗೆ ಇಳಿಯುವ ಸಾಧ್ಯತೆಯಿದೆ.

 ~ರಾಜು ಖಾರ್ವಿ ಕೊಡೇರಿ

ಟಾಪ್ ನ್ಯೂಸ್

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

dk shivakumar

CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್

dk shivakumar siddaramaiah rahul gandhi

ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!

Ramanath-rai

ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ

1-wwe

ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್‌ ಕಾರಣವೇ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

supreem

ಬಂಗಾಲ ಶಿಕ್ಷಕರ ನೇಮಕ ಸಿಬಿಐ ತನಿಖೆಗೆ ಮಾತ್ರ ತಡೆ: ಸುಪ್ರೀಂ ಕೋರ್ಟ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

Exam

NEET; ಕೋಟಾದಲ್ಲಿ ಮತ್ತೊಬ್ಬ ಆಕಾಂಕ್ಷಿ ಆತ್ಮಹತ್ಯೆ: ಇದು 8ನೇ ಪ್ರಕರಣ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

1-wqqwqwqeqwe

Kodava Hockey: ಚೇಂದಂಡಕ್ಕೆ 3ನೇ ಪ್ರಶಸ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.