Election 2023: ಮುಂದಿನ ವಾರ ಮೋದಿ, ಯೋಗಿ, ಶಾ ಅಖಾಡಕ್ಕೆ

-ಹಾವೇರಿಯಲ್ಲಿ ಮೊದಲ ರ‍್ಯಾಲಿ ಸಾಧ್ಯತೆ: ಆರು ದಿನ ರಾಜ್ಯದಲ್ಲಿ ಪ್ರಧಾನಿ ಪ್ರವಾಸ

Team Udayavani, Apr 23, 2023, 7:48 AM IST

modi yogi shah

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯ ಅಖಾಡ ಸಿದ್ಧಗೊಂಡಂತೆಯೇ, ಪ್ರಧಾನಿ ಮೋದಿ-ಉ.ಪ್ರ.ಮುಖ್ಯಮಂತ್ರಿ ಯೋಗಿ-ಗೃಹ ಸಚಿವ ಅಮಿತ್‌ ಶಾ ಅವರೂ ಪ್ರಚಾರಕ್ಕೆ ಇಳಿಯಲಿದ್ದಾರೆ. ಪ್ರಚಾರದ ನಿಜವಾದ “ಕಿಕ್‌ ಸ್ಟಾರ್ಟ್‌” 28ರಿಂದ ಪ್ರಾರಂಭವಾಗಲಿದ್ದು, ಪ್ರಧಾನಿ ನರೇಂದ್ರ ಮೋದಿಯವರ ಮೊದಲ ರ್ಯಾಲಿ ಮುಖ್ಯಮಂತ್ರಿಗಳ ತವರು ಜಿಲ್ಲೆ ಹಾವೇರಿಯಲ್ಲಿ ನಡೆಯುವ ಸಾಧ್ಯತೆ ಇದೆ.

ಪ್ರಧಾನಿ ಪ್ರಚಾರ ಸಭೆಗಳ ಬಗ್ಗೆ ಪಕ್ಷದ ಕಚೇರಿಯಲ್ಲಿ ಶನಿವಾರ ವಿಸ್ತೃತ ಚರ್ಚೆಯಾಗಿದೆ. ಮೊದಲ ಸಭೆ ಹಳೇ ಮೈಸೂರು ಭಾಗದಲ್ಲಿ ನಡೆಸಬೇಕೋ, ಕರಾವಳಿ ಕರ್ನಾಟಕವೋ ಅಥವಾ ಉತ್ತರ ಕರ್ನಾಟಕವೋ ಎಂಬ ಬಗ್ಗೆ ಸ್ಪಷ್ಟತೆ ಮೂಡಿಲ್ಲ. ಆದರೆ ಬಿಜೆಪಿ ಮೂಲಗಳ ಪ್ರಕಾರ ಮೊದಲ ರ್ಯಾಲಿ ಸಿಎಂ ತವರು ಜಿಲ್ಲೆ ಹಾವೇರಿಯಲ್ಲಿ ನಡೆಯಬಹುದು. ಆ ಮೂಲಕ ಹುಬ್ಬಳ್ಳಿ-ಧಾರವಾಡ, ಹಾವೇರಿ, ದಾವಣೆಗೆರೆ ಜಿಲ್ಲೆಯಲ್ಲಿ ಪಕ್ಷದ ಪರ ಸಂಚಲನ ಮೂಡಿಸಲು ನಿರ್ಧರಿಸಲಾಗಿದೆ. ಏ.30ರಂದು ಪ್ರಧಾನಿ ನರೇಂದ್ರ ಮೋದಿ ಚನ್ನಪಟ್ಟಣದಲ್ಲಿ ಬೃಹತ್‌ ಸಮಾವೇಶ ನಡೆಸಲು ಸಿದ್ಧತೆಗಳು ಪ್ರಾರಂಭಗೊಂಡಿವೆ.

ಪ್ರಧಾನಿ ನರೇಂದ್ರ ಮೋದಿ ಒಟ್ಟು ಆರು ದಿನಗಳ ಕಾಲ ರಾಜ್ಯದಲ್ಲಿ ಪ್ರವಾಸ ಕೈಗೊಳ್ಳಲಿದ್ದು, ಪ್ರತಿ ದಿನ ಮೂರು ಕಾರ್ಯಕ್ರಮಗಳಲ್ಲಿ ಅವರು ಭಾಗಿಯಾಗುತ್ತಾರೆ. ಒಟ್ಟು 20 ಸಭೆಗಳಲ್ಲಿ ಅವರು ಪಾಲ್ಗೊಳ್ಳುತ್ತಾರೆ. ಹಳೇ ಮೈಸೂರು, ಕರಾವಳಿ, ಮಲೆನಾಡು, ಮಧ್ಯ ಕರ್ನಾಟಕ, ಕಲ್ಯಾಣ ಕರ್ನಾಟಕ, ಕಿತ್ತೂರು ಕರ್ನಾಟಕದ ತಲಾ ಮೂರು ಜಿಲ್ಲೆಗಳನ್ನು ಒಳಗೊಂಡಂತೆ ಬೃಹತ್‌ ಸಮಾವೇಶ ನಡೆಯುತ್ತದೆ. ಉಳಿದಂತೆ ರೋಡ್‌ ಶೋ ಹಾಗೂ ಟೆಂಪಲ್‌ ರನ್‌ ನಡೆಸಲು ಯೋಜನೆ ರೂಪಿಸಲಾಗಿದೆ. ರಾಜ್ಯ ಘಟಕ ಕೊಟ್ಟ ಪ್ರವಾಸದ ಸಂಖ್ಯೆಗೆ ಪ್ರಧಾನಿ ಕಾರ್ಯಾಲಯ ಒಪ್ಪಿಗೆ ನೀಡಿದೆ. ಆದರೆ ಯಾವ ಸ್ಥಳದಲ್ಲಿ ಎಂದು ಸಮಾವೇಶ ಎಂಬ ಬಗ್ಗೆ ಇನ್ನೂ ಸ್ಪಷ್ಟ ಮಾಹಿತಿ ಕೊಟ್ಟಿಲ್ಲ.

ಏಪ್ರಿಲ್‌ 29ಕ್ಕೆ ಬೀದರ್‌ ಜಿಲ್ಲೆಯ ಹುಮನಾಬಾದ್‌ನಲ್ಲಿ ಪ್ರಚಾರ ನಡೆಸಲಿದ್ದಾರೆ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ರವಿಕುಮಾರ್‌ ತಿಳಿಸಿದ್ದಾರೆ.ಕಲ್ಯಾಣ ಕರ್ನಾಟಕವನ್ನು ಬಿಜೆಪಿ ಗಂಭೀರವಾಗಿ ಪರಿಗಣಿಸಿರುವ ಪ್ರತೀಕವಾಗಿ ಪ್ರಧಾನಿ ಇಲ್ಲಿಗೆ ಆಗಮಿಸಲಿದ್ದಾರೆ.

ಶೆಟ್ಟರ್‌ ಕೋಟೆಯಲ್ಲಿ ಶಾ :
ಕಾಂಗ್ರೆಸ್‌ಗೆ ಸೇರ್ಪಡೆಯಾದ ಜಗದೀಶ ಶೆಟ್ಟರ್‌ ಹಾಗೂ ಲಕ್ಷ್ಮಣ ಸವದಿಯವರಿಂದ ಲಿಂಗಾಯತ ಪ್ರಾಬಲ್ಯದ ಕ್ಷೇತ್ರಗಳಲ್ಲಿ ಯಾವುದೇ ಹಾನಿಯಾಗದಂತೆ ತಡೆಯುವುದಕ್ಕಾಗಿ ಖುದ್ದು ಅಮಿತ್‌ ಶಾ ರಣಾಂಗಣಕ್ಕೆ ಇಳಿಯಲಿದ್ದಾರೆ. ಮುಂದಿನ ವಾರದಿಂದ 7 ದಿನಗಳ ಕಾಲ ಅವರು, ಹುಬ್ಬಳ್ಳಿ, ಬೆಳಗಾವಿ ಸೇರಿ ಮುಂಬೈ ಕರ್ನಾಟಕ ಭಾಗದಲ್ಲಿ ತಂತ್ರಗಾರಿಕೆ ಸಭೆ ನಡೆಸಲಿದ್ದಾರೆ. ಅದಕ್ಕಾಗಿ ಅವರು ಹುಬ್ಬಳ್ಳಿಯಲ್ಲೇ ವಾಸ್ತವ್ಯ ಹೂಡುವ ಸಾಧ್ಯತೆ ಇದೆ.

ಕನಕಪುರಕ್ಕೆ ಯೋಗಿ ? :
ಇದೆಲ್ಲದರ ಜತೆಗೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ರಾಜ್ಯದಲ್ಲಿ ನಾಲ್ಕರಿಂದ ಐದು ಸಮಾವೇಶದಲ್ಲಿ ಭಾಗಿಯಾಗುವಂತೆ ಯೋಜನೆ ರೂಪಿಸಲಾಗುತ್ತಿದೆ. ಹಿಂದುತ್ವದ ಪ್ರಬಲ ನೆಲೆಯಾದ ಕರಾವಳಿ ಜಿಲ್ಲೆಗಳ ಜತೆಗೆ ಕೊಪ್ಪಳಕ್ಕೂ ಅವರು ಭೇಟಿ ಕೊಡುತ್ತಾರೆ. ಕೊಪ್ಪಳ ಜಿಲ್ಲೆಯ ಸುಪ್ರಸಿದ್ಧ ಅಂಜನಾದ್ರಿ ಬೆಟ್ಟಕ್ಕೆ ಅವರು ಭೇಟಿ ಕೊಟ್ಟು ಪೂಜೆ ಸಲ್ಲಿಸುವ ಮೂಲಕ ಕೇಸರಿ ಅಲೆಯನ್ನು ಬಡಿದೆಬ್ಬಿಸಲಿದ್ದಾರೆ.

ಅದೆಲ್ಲಕ್ಕಿಂತ ಮುಖ್ಯವಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರ ಅಖಾಡ ಕನಕಪುರಕ್ಕೆ ಯೋಗಿ ಆದಿತ್ಯನಾಥ ಭೇಟಿಕೊಟ್ಟು ಬೃಹತ್‌ ಸಮಾವೇಶವನ್ನು ಉದ್ದೇಶಿ ಮಾತನಾಡುವುದು ಅಧಿಕೃತಗೊಂಡಿದೆ. ಕನಕಪುರದಿಂದ ಒಕ್ಕಲಿಗರ ಪ್ರಾಬಲ್ಯವಿರುವ ಎಲ್ಲ ಜಿಲ್ಲೆಗಳಿಗೆ ಸಂದೇಶ ರವಾನೆ ಮಾಡುವುದು ಇದರ ಉದ್ದೇಶ. ಈ ಹಿಂದೆ ತೀವ್ರ ಚರ್ಚೆಗೆ ಕಾರಣವಾಗಿದ್ದ “ಏಸುಬೆಟ್ಟ” ವಿವಾದವನ್ನು ಬಿಜೆಪಿ ಮತ್ತೆ ಮುನ್ನೆಲೆಗೆ ತರುವ ಸಾಧ್ಯತೆ ಇದೆ.

ಟಾಪ್ ನ್ಯೂಸ್

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

dk shivakumar

CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್

dk shivakumar siddaramaiah rahul gandhi

ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!

Ramanath-rai

ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ

1-wwe

ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್‌ ಕಾರಣವೇ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.