Election 2023: ಸುಳ್ಯದಲ್ಲಿ ಬಿಜೆಪಿ ಅಭ್ಯರ್ಥಿ ಯಾರೆಂಬುದೇ ಕುತೂಹಲ !
ಕಾಂಗ್ರೆಸ್, ಎಎಪಿಯಿಂದ ಬಿರುಸಿನ ಪ್ರಚಾರ ಶುರು
Team Udayavani, Apr 10, 2023, 7:53 AM IST
ಸುಳ್ಯ: ಸುಳ್ಯ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿ ಕಾಂಗ್ರೆಸ್ ಹಾಗೂ ಎಎಪಿ ಪಕ್ಷದ ಅಭ್ಯರ್ಥಿಗಳ ಘೋಷಣೆಯಾಗಿ ಪ್ರಚಾರಕ್ಕೆ ಇಳಿದಿದ್ದು, ಇನ್ನೂ ಘೋಷಣೆ ಯಾಗದಿರುವ ಬಿಜೆಪಿ ಅಭ್ಯರ್ಥಿ ಕುರಿತು ಕುತೂಹಲ ಹೆಚ್ಚಾಗಿದೆ.
ಕಾಂಗ್ರೆಸ್ ಅಭ್ಯರ್ಥಿಯಾದ ಜಿ. ಕೃಷ್ಣಪ್ಪ ಅವರು ಈಗಾಗಲೇ ಕ್ಷೇತ್ರದಲ್ಲಿ ವಿವಿಧೆಡೆ ಭೇಟಿ ನೀಡಿ ಪಕ್ಷದ ನಾಯಕರ ಜತೆ ಸಭೆ ನಡೆಸಿದ್ದಾರೆ. ಚುನಾವಣೆ ಹಿನ್ನೆಲೆಯಲ್ಲಿ ಶನಿವಾರ ಕಾಂಗ್ರೆಸ್ ಚುನಾವಣ ಕಚೇರಿ ಯನ್ನು ಆರಂಭಿಸಲಾಗಿದೆ.
ಆಮ್ ಆದ್ಮಿ ಪಕ್ಷವೂ ಈ ಬಾರಿ ಅಭ್ಯರ್ಥಿ ನಿಯೋಜಿಸಿದೆ. ಮಾಜಿ ಶಾಸಕ ಕುಶಲ ಅವರ ಪುತ್ರಿ ಸುಮನಾ ಬೆಳ್ಳಾರ್ಕರ್ ಅಭ್ಯರ್ಥಿಯಾಗಿದ್ದು, ಈಗಾಗಲೇ ಕ್ಷೇತ್ರ ದಲ್ಲಿ ಮತದಾರರನ್ನು ಭೇಟಿಯಾಗುತ್ತಿದ್ದಾರೆ.
ಹೊಸ ಅಭ್ಯರ್ಥಿ?
ಬಿಜೆಪಿಯು ಈ ಬಾರಿ ಹೊಸ ಅಭ್ಯರ್ಥಿ ಯನ್ನು ಕಣಕ್ಕಿಳಿಸುವ ಸಾಧ್ಯತೆ ಇದೆ. ಆರು ಅವಧಿಯಲ್ಲಿ ಸುಳ್ಯದ ಶಾಸಕರಾದ ಎಸ್. ಅಂಗಾರ ಅವರಿಗೆ ಈ ಬಾರಿ ಅವಕಾಶ ಸಿಗುವ ಕುರಿತು ಸಂಶಯ ಹೊಂದಲಾಗಿದೆ. ಆದರೆ ಅದಿನ್ನೂ ಅಂತಿಮವಾಗಿಲ್ಲ. ಈ ನಡುವೆ ಹೊಸ ಮುಖದ ಅಭ್ಯರ್ಥಿ ಅನ್ವೇಷಣೆ ನಡೆದಿದೆ. ಒಂದು ವೇಳೆ ಹೊಸ ಅಭ್ಯರ್ಥಿ ಬಂದರೆ ಈ ಕ್ಷೇತ್ರದಲ್ಲಿ ಹಲವು ವರ್ಷಗಳ ಬಳಿಕ ಪ್ರಮುಖ ಪಕ್ಷ ವೊಂದು ಹೊಸ ಅಭ್ಯರ್ಥಿಯನ್ನು ನಿಯೋ ಜಿಸಿದಂತಾಗುತ್ತದೆ.
ಈ ಮಧ್ಯೆ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆಗೆ ಮೊದಲಿಂದಲೂ ಅಸಮಾಧಾನ ವ್ಯಕ್ತ ವಾಗಿದ್ದು, ಮುಂದುವರಿದಿದೆ. ಅಭ್ಯರ್ಥಿ ಆಕಾಂಕ್ಷಿಯಾಗಿದ್ದ ನಂದಕುಮಾರ್ ಅವರಿಗೆ ಟಿಕೆಟ್ ಕೈ ತಪ್ಪಿರುವುದನ್ನು ಅವರ ಅಭಿಮಾನಿ ಬಳಗ ಅಸಮಾಧಾನ ಹೊರ ಹಾಕಿದ್ದರು. ಸುಳ್ಯ, ಕಡಬದಲ್ಲಿ ಸಭೆ ನಡೆಸಿ, ಮಂಗಳೂರಿನ ಕಾಂಗ್ರೆಸ್ ಕಚೇರಿ ಬಳಿ ಪ್ರತಿಭಟನೆಯನ್ನು ನಡೆಸಿದ್ದರು. ಅಲ್ಲದೇ ಬೆಂಗಳೂರಿನಲ್ಲಿ ಪ್ರಮುಖ ನಾಯಕರನ್ನು ಭೇಟಿ ಮಾಡಿ ನಂದಕುಮಾರ್ ಅವರಿಗೆ ಟಿಕೆಟ್, ಬಿಫಾರಂ ನೀಡುವಂತೆ ಒತ್ತಾಯಿ ಸಿದ್ದರು. ಅಭಿಮಾನಿಗಳ ಸಭೆಯಲ್ಲಿ ಬಂಡಾಯವಾಗಿ ನಿಲ್ಲುವ ಸೂಚನೆ ಲಭಿಸಿ ದ್ದರೂ ಅಂತಿಮ ನಿರ್ಧಾರವಾಗಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!
CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್
ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!
ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ
ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್ ಕಾರಣವೇ?
MUST WATCH
ಹೊಸ ಸೇರ್ಪಡೆ
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ