ವಿಧಾನ ಕದನ 2023: ಲೆಕ್ಕಕ್ಕೆ ಸಿಗದ ಪ್ರಚಾರ ಜೋರು


Team Udayavani, Mar 15, 2023, 7:14 AM IST

bjp cong election fight

ಟಿಕೆಟ್‌ ಆಕಾಂಕ್ಷಿಗಳಿಂದ ಹಿಡಿದು ಹಾಲಿ ಜನಪ್ರತಿನಿಧಿಗಳವರೆಗೆ ಎಲ್ಲರೂ ಉತ್ಸವ, ನೇಮ ಇತ್ಯಾದಿಗಳಲ್ಲಿ ಬ್ಯುಸಿಯಾಗಿದ್ದಾರೆ. ವಾರಾಂತ್ಯವಾದರೆ ಎಲ್ಲಾದರೂ ಕ್ರಿಕೆಟ್‌ ಪಂದ್ಯಾಟ, ಇನ್ಯಾವುದೋ ಸಮುದಾಯಗಳ ಕಾರ್ಯಕ್ರಮ ಹೀಗೆ ಎಲ್ಲದರಲ್ಲೂ ಹಾಜರು. ಒಟ್ಟಿನಲ್ಲಿ ಎಲ್ಲೆಲ್ಲೂ ಪಕ್ಷದ ಪ್ರಚಾರ ನಡೆಸುತ್ತಲೇ ತಮ್ಮ ಉಮೇದುವಾರಿಕೆಯ ಇಂಗಿತವನ್ನು ವ್ಯಕ್ತಪಡಿಸುವುದೇ ಮುಖ್ಯ. ಅದಕ್ಕಾಗಿಯೇ ಈಗ ಎಲ್ಲರದ್ದೂ ಹೋರಾಟ. 

ಮಂಗಳೂರು: ಇನ್ನೇನು ಹತ್ತೋ ಹದಿನೈದೋ ದಿನಗಳಲ್ಲೇ ಚುನಾವಣೆ ದಿನಾಂಕ ಘೋಷಣೆಯಾಗಬಹುದು. ಅದರ ಬೆನ್ನಲ್ಲೆ ನೀತಿ ಸಂಹಿತೆ ಎಂಬ ಲಗಾಮು ಎಲ್ಲ ಪಕ್ಷಗಳ ಮೇಲೆ ಬೀಳುತ್ತದೆ. ಅಷ್ಟರಲ್ಲೇ ಮುಗಿಸುವ ಕೆಲಸ ಮುಗಿಸಿ ಬಿಟ್ಟರೆ ಹೇಗೆ?

ಹೀಗೆಂದೇ ರಾಜ್ಯಾದ್ಯಂತ ಹಲವು ಪಕ್ಷಗಳ ಅಭ್ಯರ್ಥಿಗಳು ವಿವಿಧ ಉಡುಗೊರೆಗಳನ್ನು ಕೊಡುತ್ತಿದ್ದರೆ, ದ.ಕ. ಜಿಲ್ಲೆಯಲ್ಲಿ ಪಕ್ಷಗಳು ಪೂರ್ಣಬಲದಲ್ಲಿ ಪ್ರಚಾರದಲ್ಲಿ ತೊಡಗಿವೆ. ನೀತಿ ಸಂಹಿತೆ ಬಂದರೆ ಬಳಿಕ ಎಲ್ಲದಕ್ಕೂ ಲೆಕ್ಕ ಕೊಡಬೇಕು. ಹೆಚ್ಚು ಖರ್ಚಾದರೆ ಅದನ್ನು ಸರಿ ದೂಗಿಸುವ ತಲೆಬಿಸಿ. ಹಾಗಾಗಿ ಚುನಾವಣೆ ಘೋಷಣೆಗೆ ಮೊದಲೇ ಆದಷ್ಟೂ ಪಕ್ಷಗಳ ವರ್ಚಸ್ಸು ಹೆಚ್ಚಿಸುವ ಕೆಲಸ ಮಾಡಿದರೆ, ಮುಂದೆ ಅಭ್ಯರ್ಥಿಗಳ ಘೋಷಣೆಯಾದ ಬಳಿಕ ಅವರ ಪ್ರಚಾರವನ್ನಷ್ಟೇ ನಿಭಾಯಿಸಬಹುದು ಎಂಬ ಲೆಕ್ಕಾಚಾರ ಪಕ್ಷಗಳದ್ದು.

ಬ್ಯಾನರ್‌ ಹೋರ್ಡಿಂಗ್‌ ಭರಾಟೆ
ಕಾಂಗ್ರೆಸ್‌ ಈಗಾಗಲೇ ಘೋಷಿಸಿರುವ ತನ್ನ 3 ಗ್ಯಾರಂಟಿಗಳನ್ನೇ ಹೆಚ್ಚಾಗಿ ಬಿಂಬಿಸುತ್ತಿದೆ. ಮುಖ್ಯವಾಗಿ ಮಂಗಳೂರು ಉತ್ತರದಲ್ಲಿ ಮೊಯ್ದಿನ್‌ ಬಾವ ಹಾಗೂ ಇನಾಯತ್‌ ಅಲಿ ಅವರ ಮಧ್ಯೆ ಪೈಪೋಟಿಯಿಂದಾಗಿ ಮಂಗಳೂರು ನಗರ ಉತ್ತರ ಕ್ಷೇತ್ರದುದ್ದಕ್ಕೂ ಭರ್ಜರಿ ಮೇಲಾಟ ಕಂಡುಬರುತ್ತದೆ. ಬೆಳ್ತಂಗಡಿಯಲ್ಲಿ ರಕ್ಷಿತ್‌ ಶಿವರಾಂ, ಪುತ್ತೂರಿನಲ್ಲಿ ಅಶೋಕ್‌ ರೈ, ಬಂಟ್ವಾಳದಲ್ಲಿ ರಮಾನಾಥ ರೈ ಅವರ ಪ್ರಚಾರ ಜೋರಿದೆ. ಸುಳ್ಯದಲ್ಲಿ ಕಾಂಗ್ರೆಸ್‌ ಅಬ್ಬರದ ಪ್ರಚಾರ ಕಂಡುಬಂದಿಲ್ಲ. ಮಂಗಳೂರು ನಗರ ದಕ್ಷಿಣದಲ್ಲೂ ಬಹಿರಂಗ ಅಬ್ಬರವಿಲ್ಲ. ಬಿಜೆಪಿಯವರು “ಬಿಜೆಪಿಯೇ ಭರವಸೆ” ಎಂಬ ಘೋಷಣೆಗಳೊಂದಿಗೆ ಅಲ್ಲಲ್ಲಿ ತಮ್ಮ ಬ್ಯಾನರ್‌, ಹೋರ್ಡಿಂಗ್‌ ಹಾಕಿಕೊಂಡಿದ್ದಾರೆ.

ಸಭೆ, ಸಮಾವೇಶ
ಸಾಮಾನ್ಯವಾಗಿ ಚುನಾವಣೆ ಘೋಷಣೆ ವೇಳೆ ಸಭೆ ಸಮಾವೇಶಗಳು ಹೆಚ್ಚಾಗುವುದು ವಾಡಿಕೆ. ಆದರೆ ಈಗ ಚುನಾವಣ ಆಯೋಗದ ಲೆಕ್ಕಾಚಾರದ ಹಿನ್ನೆಲೆಯಲ್ಲಿ ಚುನಾವಣೆ ಘೋಷಣೆಗೆ ಸಾಕಷ್ಟು ಮೊದಲೇ ಸಭೆ, ಸಮಾವೇಶಗಳನ್ನು ಆಯೋಜಿಸುತ್ತಿರು ವುದಲ್ಲದೆ, ಡಿಸೆಂಬರ್‌ನಿಂದಲೇ ಪ್ರಚಾರ ಆರಂಭಿಸಿದ್ದಾರೆ.

ಕ್ಯಾಂಪ್ಕೊದ ಸುವರ್ಣಮಹೋತ್ಸವ ಸಂಭ್ರಮವನ್ನು ಬಿಜೆಪಿಯವರು ಯಶಸ್ವಿಯಾಗಿ ಅಡಿಕೆ ಬೆಳೆಗಾರರ ಸಮಾವೇಶದಂತೆ ಬಿಂಬಿಸಿ, ಪ್ರಚಾರಕ್ಕೆ ಬಳಸಿಕೊಂಡರು. ಇದೇ ರೀತಿ ವಿವಿಧ ಫಲಾನುಭವಿಗಳ ಸಮಾವೇಶ, ಕಾಮಗಾರಿಗಳಿಗೆ ಶಿಲಾನ್ಯಾಸ ಭರ್ಜರಿಯಾಗಿ ನಡೆಯುತ್ತಿದೆ. ಮಾ.16ರಂದು ಬಿಜೆಪಿ ಮತ್ತೆ ಜಿಲ್ಲಾ ಮಟ್ಟದ ಫಲಾನುಭವಿಗಳ ಸಮಾವೇಶವನ್ನು ಮಂಗಳೂರಿನಲ್ಲಿ ಆಯೋಜಿಸಿದ್ದು , ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗಮಿಸುವರು. ಕಾಂಗ್ರೆಸ್‌ನಿಂದ ಜಿಲ್ಲೆಯಾದ್ಯಂತ ಪ್ರಜಾಧ್ವನಿ ಯಾತ್ರೆ ರಾಜ್ಯಮಟ್ಟದ ನಾಯಕರಿಂದ ಒಮ್ಮೆ ನಡೆದಿದೆ, ಈಗ ತಾಲೂಕು, ಹೋಬಳಿ ಮಟ್ಟದ ಯಾತ್ರೆಗಳು ಅಲ್ಲಲ್ಲಿ ನಡೆಯುತ್ತಿವೆ.

ಕಾಂಗ್ರೆಸ್‌ಗೆ ಅನಿವಾರ್ಯತೆ
ಬಹುತೇಕ ಕಡೆಗಳಲ್ಲಿ ಬಿಜೆಪಿಗೆ ತನ್ನದೇ ಸರಕಾರ, ತಾವೇ ಶಾಸಕ ರಾಗಿರುವುದರಿಂದ ಟಿಕೆಟ್‌ ಖಾತರಿ ಹೆಚ್ಚಿದೆ. ಹಾಗಾಗಿ ಪ್ರಚಾರಕ್ಕೆ ಹೆಚ್ಚು ಖರ್ಚು ಮಾಡುವಂತೆ ತೋರುತ್ತಿಲ್ಲ. ಆದರೆ ಅನೇಕ ಕಡೆ ಕಾಂಗ್ರೆಸ್‌ ಟಿಕೆಟ್‌ಗೆ ಪೈಪೋಟಿ ಇರುವುದರಿಂದ ಜನರಿಗೆ ತಮ್ಮ ಇರವು ತಿಳಿಯಪಡಿಸಲು ಹೋರ್ಡಿಂಗ್‌, ಜಾಹೀರಾತುಗಳಿಗೆ ಖರ್ಚು ಮಾಡಲೇಬೇಕಾದ ಅನಿವಾರ್ಯತೆ ಎದುರಾಗಿದೆ.ಬಿಜೆಪಿ ಬೆಳ್ತಂಗಡಿಯಲ್ಲಿ ವಿಕಾಸದ ಹಬ್ಬ ಎಂಬ ಪರಿಕಲ್ಪನೆ ಯೊಂದಿಗೆ ಶಾಸಕರ ಸಾಧನೆಗಳನ್ನು ಆಯಾ ಊರುಗಳಲ್ಲಿ ಜನರಿಗೆ ತಿಳಿಸುವ ಪ್ರಯತ್ನ ಮಾಡುತ್ತಿದೆ. ಇದರ ಮಧ್ಯೆ ಪ್ಲಾಸ್ಟಿಕ್‌ ನಿಷೇಧವಾಗಿದ್ದರೂ ರಾಜಾರೋಷವಾಗಿ ಪಕ್ಷ ಭೇದ ಮರೆತು ಫ್ಲೆಕ್ಸ್‌ ಹಾಕಲಾಗುತ್ತಿದೆ.

 ~ವೇಣು ವಿನೋದ್‌ ಕೆ.ಎಸ್‌.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

dk shivakumar

CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್

dk shivakumar siddaramaiah rahul gandhi

ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!

Ramanath-rai

ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ

1-wwe

ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್‌ ಕಾರಣವೇ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.